ಉಜಿರೆ: ದಕ್ಷಿಣ ಕನ್ನಡ ಜಿಲ್ಲಾ 25ನೆಯ ಸಾಹಿತ್ಯ ಸಮ್ಮೇಳನದ ಕೊನೆಯ ದಿನ ರವಿವಾರ ಮಧ್ಯಾಹ್ನ ನಡೆದ ಯಕ್ಷ ‘ಗಾನ’ ವೈಭವ ಕಾರ್ಯಕ್ರಮದಲ್ಲಿ ಪುತ್ತೂರು ವಿವೇಕಾನಂದ ಕಾಲೇಜಿನ ಲಲಿತ ಕಲಾ ಸಂಘದ ವಿದ್ಯಾರ್ಥಿಗಳು ಯಕ್ಷಗಾನ ಪ್ರಿಯರ ಚಪ್ಪಾಳೆಯ ಮೆಚ್ಚುಗೆ ಗಳಿಸಿದರು.
ತಂಡದ ನಿರ್ದೇಶಕ (ಪುತ್ತೂರು ವಿವೇಕಾನಂದ ಕಾಲೇಜಿನ ಸಹ ಪ್ರಾಧ್ಯಾಪಕರು) ರಾದ ವರ್ಷಿತ್ ಕಿಜಕ್ಕಾರ್ ಅವರ ಚೆಂಡೆಯ ನಾದ ಹಾಗೂ ಕಿಶನ್ ರಾವ್ ಅವರ ಚಕ್ರತಾಳ ದನಿಯೊಂದಿಗೆ ವಿದ್ಯಾರ್ಥಿನಿಯರಾದ ಹೇಮಾ, ಶ್ರೇಯಾ, ಅಮೃತಾ ಮತ್ತು ಪ್ರಜ್ಞಾ ಭಾಗವತರಾಗಿ ಯಕ್ಷಗಾನ ಪದ್ಯಗಳನ್ನು ಪ್ರಸ್ತುತಪಡಿಸಿದರು ಹಾಗೂ ವಿದ್ಯಾರ್ಥಿ ಯತಿನ್ ಮದ್ದಳೆ ವಾದಕರಾಗಿದ್ದರು.
ಸುಮಾರು 45 ನಿಮಿಷಗಳ ಕಾಲ ನಡೆದ ಕಾರ್ಯಕ್ರಮದಲ್ಲಿ ಸಂವಾದ ಶೈಲಿಯಲ್ಲಿ ಪ್ರಮೀಳಾರ್ಜುನ ಪ್ರಸಂಗದ ಪದ್ಯಗಳು ಪ್ರೇಕ್ಷಕರ ಗಮನ ಸೆಳೆದವು. ಕೊನೆಯಲ್ಲಿ ಹಾಡಿದ ನಾಲ್ಕು ಏರುಪದ್ಯಗಳು ಯಕ್ಷ ‘ಗಾನ’ ಪ್ರಿಯರನ್ನು ರಂಜಿಸಿದವು. ಜೋರಾದ ಕರತಾಡನದ ಮೂಲಕ ಪ್ರೇಕ್ಷಕರು ಪ್ರೋತ್ಸಾಹ ನೀಡಿದರು.
ವಿದ್ಯಾರ್ಥಿ ನವೀನ್ ಕೃಷ್ಣ ಆಚಾರ್ ಕಾರ್ಯಕ್ರಮ ನಿರೂಪಿಸಿದರು. ಡಾ. ಎಚ್.ಜೆ. ಶ್ರೀಧರ್ ಅವರು ಕಲಾವಿದರನ್ನು ಗೌರವಿಸಿದರು.
ವರದಿ: ಪೂಜಾ ವಿ. ಹಂದ್ರಾಳ, ವಿಜಯ್ ವಿ.
ಚಿತ್ರ: ವಿಜಯ್ ವಿ.
ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ವಿಭಾಗ ಎಸ್.ಡಿ.ಎಂ. ಸ್ನಾತಕೋತ್ತರ ಕೇಂದ್ರ, ಉಜಿರೆ.
ಮಹಿಳೆಯರು ಆರ್ಥಿಕವಾಗಿ ಸ್ವಾವಲಂಬಿಯಾಗಬೇಕು. ಆ ನಿಟ್ಟಿನಲ್ಲಿ ಸ್ವಯಂ ಉದ್ಯೋಗ ಕೈಗೊಳ್ಳಬೇಕೆಂದು ಶಾಸಕ ಎಚ್.ಡಿ. ತಮ್ಮಯ್ಯ ಅವರು ಹೇಳಿದ್ದಾರೆ. ನಗರದ ಬಸವನಹಳ್ಳಿಯ…
ಬೇಸಿಗೆ ರಜೆಯಲ್ಲಿ ಪಾಲಕರು ತಮ್ಮ ಮಕ್ಕಳನ್ನು ಖಾಸಗಿ ಸಂಸ್ಥೆಗಳ ಬೇಸಿಗೆ ತರಬೇತಿ ಶಿಬಿರಗಳಿಗೆ ಮುಂದಿನ ವಿದ್ಯಾಭ್ಯಾಸದ ಅನುಕೂಲಕ್ಕಾಗಿ ಕಳಿಸುವುದು ಸಾಮಾನ್ಯ.…
ಪಟ್ಟಣದ ವಿವಿಧ ವಾರ್ಡ್ಗಳು ಹಾಗೂ ಪ್ರಮುಖ ವೃತ್ತಗಳಲ್ಲಿನ ಚರಂಡಿಗಳು ಕಟ್ಟಿಕೊಂಡು ದುರ್ನಾತ ಬೀರುತ್ತಿದ್ದು, ಜನರು ಮೂಗು ಮುಚ್ಚಿಕೊಂಡು ಓಡಾಡುವಂತಾಗಿದೆ. ಅಧಿಕಾರಿಗಳ…
ಇಂಗ್ಲೆಂಡ್ ತಂಡದ ವೇಗದ ಬೌಲರ್ ಜೇಮ್ಸ್ ಆ್ಯಂಡರ್ಸನ್ ಅಂತಾರಾಷ್ಟ್ರೀಯ ಕ್ರಿಕೆಟ್ಗೆ ನಿವೃತ್ತಿ ಘೋಷಿಸಿದ್ದಾರೆ. ಲಾರ್ಡ್ಸ್ ಕ್ರಿಕೆಟ್ ಮೈದಾನದಲ್ಲಿ ಇಂಗ್ಲೆಂಡ್ ಮತ್ತು…
ಹಾಡಹಗಲೇ ದುಷ್ಕರ್ಮಿಗಳು ಮನೆಗೆ ನುಗ್ಗಿ ಟಿವಿ, ಫ್ರಿಡ್ಜ್ ಹಾಳು ಮಾಡಿರುವ ಘಟನೆ ಪಂಚಾಕ್ಷರಿ ನಗರದಲ್ಲಿ ನಡದಿದೆ.
ಉತ್ತರ ಪ್ರದೇಶದ ಪಿಲಿಬಿತ್ ಜಿಲ್ಲಯಲ್ಲಿ ಒಂದು ದಾರುಣ ಘಟನೆ ನಡೆದಿದ್ದು 10 ವರ್ಷದ ಅಪ್ರಾಪ್ತ ಬಾಲಕ ಅನ್ನದೊಂದಿಗೆ ಮ್ಯಾಗಿ ತಿಂದ…