ಉಳ್ಳಾಲ: ಗೃಹಪ್ರವೇಶದ ಮನೆಯಲ್ಲಿ ಪೂಜಾ ಸಂದರ್ಭದಲ್ಲೇ ಎಲ್ಲರ ಮುಂದೆ ಕಳವು ನಡೆಸಿದ ಕಳ್ಳನೋರ್ವ, ಅದೇ ರಾತ್ರಿ ನೆರೆಮನೆಯಿಂದಲೂ ಲಕ್ಷಾಂತರ ಮೌಲ್ಯದ ನಗನಗದು ದೋಚಿದ ಘಟನೆ ಉಳ್ಳಾಲ ಪೊಲೀಸ್ ಠಾಣಾ ವ್ಯಾಪ್ತಿಯ ಕೋಟೆಕಾರು ಬಳಿ ನಡೆದಿದೆ.
ಡಿ.10 ರಂದು ರಾತ್ರಿ ಸ್ಮಿತಾ-ದಾಮೋದರ್ ದಂಪತಿ ಕೋಟೆಕಾರು ಪಟ್ಟಣ ಪಂ. ವ್ಯಾಪ್ತಿಯ ಅಡ್ಕ ಬೈಲು ಎಂಬಲ್ಲಿ ತಾವು ನಿರ್ಮಸಿದ ನೂತನ ಮನೆಯಲ್ಲಿ ವಾಸ್ತು ಹೋಮ ನೆರವೇರಿಸಿದ್ದರು.ವಾಸ್ತು ಹೋಮ ನಡೆಯುತ್ತಿರುವಾಗಲೇ ಎಲ್ಲರ ಸಮ್ಮುಖದಲ್ಲೇ ಹೋಮದ ಹೊಗೆಯ ಲಾಭ ಎತ್ತಿ ಒಳ ನುಗ್ಗಿದ್ದ ಬರ್ಮುಡ ಧಾರಿ ಯುವಕನೋರ್ವ ಕೋಣೆಯೊಳಗೆ ನುಗ್ಗಿ ಬ್ಯಾಗಲ್ಲಿದ್ದ ರೂ.15,000 .ನಗದು, ಮೊಬೈಲ್ ಚಾರ್ಜರ್ ಮತ್ತು ಬೆಲೆ ಬಾಳುವ ಕಾಸ್ಮೆಟಿಕ್ಸ್ ಕಳವು ನಡೆಸಿದ್ದಾನೆ.ಕಳ್ಳ ಹೋಮ ನಡೆಯುತ್ತಿದ್ದ ವೇಳೆ ಮನೆಯೊಳಗಿನ ಕೋಣೆಗೆ ನುಗ್ಗಿ ಹೊರನಡೆಯುವ ದೃಶ್ಯ ವೃತ್ತಿಪರ ಕ್ಯಾಮೆರ ಮೆನ್ ನ ವೀಡಿಯೋದಲ್ಲಿ ದಾಖಲಾಗಿದೆ.
ಅದೇ ದಿನ ಮಧ್ಯ ರಾತ್ರಿ ಅಲ್ಲೇ ಸಮೀಪದ ಶಿವ ಸುಬ್ರಹ್ಮಣ್ಯ ಪ್ರಸಾದ್ ಭಟ್ ಎಂಬವರ ಮನೆಗೂ ರಾತ್ರಿ ಕನ್ನ ಹಾಕಿದ್ದ ಕಳ್ಳ ಮನೆಯಲ್ಲಿ ಯಾರೂ ಇಲ್ಲದ ವೇಳೆ ಬಾಗಿಲನ್ನ ಒಡೆದು ಕೋಣೆಯೊಳಗಿನ ಕಪಾಟಲ್ಲಿದ್ದ 11,000 ರೂ.ನಗದು,32 ಗ್ರಾಂ ಚಿನ್ನ ,8 ಬೆಳ್ಳಿಯ ನಾಣ್ಯ,ಮತ್ತು 3 ರೇಡೋ ವಾಚ್ ಗಳು ಸೇರಿ ಒಟ್ಟು 1,49000 ರೂಪಾಯಿ ಮೌಲ್ಯದ ನಗ,ನಗದನ್ನ ಕದ್ದೊಯ್ದಿದ್ದಾನೆ.
ಬರ್ಮುಡ ಧಾರಿ ಕಳ್ಳನ ಜತೆ ಇನ್ನೋರ್ವನು ಇದ್ದು ಇವರಿಬ್ಬರು ಡಿ.10 ರ ರಾತ್ರಿ ಕಳ್ಳತನ ನಡೆದಿದ್ದ ಪ್ರದೇಶ ಅಡ್ಕ ಬೈಲಿಗೆ ದ್ವಿಚಕ್ರ ವಾಹನದಲ್ಲಿ ಬರುವ ದೃಶ್ಯ ಸಿ.ಸಿಟಿವಿಯಲ್ಲಿ ಸೆರೆಯಾಗಿದೆ.
ಉಳ್ಳಾಲ ಪೊಲೀಸರು ಪ್ರಕರಣ ದಾಖಲಿಸಿದ್ದು ವೀಡಿಯೋ ಫೂಟೇಜ್ ಆಧಾರದಲ್ಲಿ ಕಳ್ಳರ ಶೋಧ ಕಾರ್ಯ ನಡೆಸುತ್ತಿದ್ದಾರೆ.
ಹುಬ್ಬಳ್ಳಿಯಲ್ಲಿ ಮನೆಗೆ ನುಗ್ಗಿ ಅಂಜಲಿ ಅಂಬಿಗೇರ ಹತ್ಯೆ ಮಾಡಿದ್ದ ಪ್ರಕರಣಕ್ಕೆ ಸಂಬಂಧಿಸಿ ಆರೋಪಿ ವಿಶ್ವ ಅಲಿಯಾಸ್ ಗಿರೀಶ್ನನ್ನು ಪೊಲೀಸರು ಬಂಧಿಸಿದ್ದಾರೆ.…
ನಗರದ ಜೈಲು ರಸ್ತೆಯ ಮನೆಯೊಂದರಲ್ಲಿ ಪತ್ತೆಯಾಗಿದ್ದ ಐದು ಅಸ್ಥಿಪಂಜರಗಳಿಗೆ ಸಂಬಂಧಿಸಿದ ಎಫ್ಎಸ್ಎಲ್ ಅಂತಿಮ ವರದಿ ಪೊಲೀಸರ ಕೈ ಸೇರಿದ್ದು, ಸಾವಿಗೆ…
ಭಾಲ್ಕಿ ತಾಲ್ಲೂಕಿನ ಭಾತಂಬ್ರಾ ಗ್ರಾಮದ ಬಸವ ಮಹಾದ್ವಾರ ಗುರುವಾರ ಸುರಿದ ಬಿರುಗಾಳಿ ಸಹಿತ ಮಳೆಗೆ ಕುಸಿದು ಬಿದ್ದಿದೆ. ಅದೃಷ್ಟವಶಾತ್ ಯಾವುದೇ…
ಜಾಗತಿಕವಾಗಿ ಚಿನ್ನಕ್ಕೆ ಈಗ ಸಖತ್ ಬೇಡಿಕೆ ಸೃಷ್ಟಿಯಾಗಿರುವುದು ಈ ಬೆಲೆ ಹೆಚ್ಚಳಕ್ಕೆ ಕಾರಣವಾಗಿದೆ. ಕಳೆದ ಒಂದು ತಿಂಗಳಿನಿಂದ ಚಿನ್ನದ ಬೆಲೆ…
ಐಪಿಎಲ್ 2024ರ 66ನೇ ಪಂದ್ಯ ಮಳೆಯಿಂದಾಗಿ ರದ್ದಾಗಿದೆ. ಹೈದರಾಬಾದ್ನಲ್ಲಿ ಸನ್ರೈಸರ್ಸ್ ತಂಡ ಗುಜರಾತ್ ತಂಡವನ್ನು ಎದುರಿಸಬೇಕಿತ್ತು. ಆದರೆ, ಟಾಸ್ಗೂ ಮುನ್ನವೇ…
ಕೇಂದ್ರ ಸರ್ಕಾರವು 41 ಅಗತ್ಯ ಔಷಧಗಳು ಹಾಗೂ ಹೃದಯ ರಕ್ತನಾಳದ ಕಾಯಿಲೆ, ಸಕ್ಕರೆ ಕಾಯಿಲೆ ಇರುವವರು ಬಳಸುವ 6 ಫಾರ್ಮುಲೇಷನ್ಗಳ…