ಉಳ್ಳಾಲ, ಮಾ.21: ಸುಗಮ ಸಂಚಾರಕ್ಕಾಗಿ ರಾಷ್ಟ್ರೀಯ ಹೆದ್ದಾರಿ 66 ರ ಕಲ್ಲಾಪು ಮತ್ತು ತೊಕ್ಕೊಟ್ಟಿನ ಬೀದಿ ಬದಿಯಲ್ಲಿ ಅನಧಿಕೃತವಾಗಿ ವಹಿವಾಟು ನಡೆಸುತ್ತಿದ್ದ ಗೂಡಂಗಡಿಗಳನ್ನ ಹೆದ್ದಾರಿ ಪ್ರಾಧಿಕಾರದ ಅನತಿ ಮೇರೆಗೆ ಟ್ರಾಫಿಕ್ ಪೊಲೀಸರು ತೆರವುಗೊಳಿಸಿದ್ದಾರೆ.
ರಾಷ್ಟ್ರೀಯ ಹೆದ್ದಾರಿ 66 ರ ಕಲ್ಲಾಪು ಮತ್ತು ತೊಕ್ಕೊಟ್ಟುವಿನಲ್ಲಿ ಅನಧಿಕೃತವಾಗಿ ವಹಿವಾಟು ನಡೆಸುತ್ತಿದ್ದ ಬೀದಿ ಬದಿಯ ಗೂಡಂಗಡಿಗಳನ್ನ ಹೆದ್ದಾರಿ ಪ್ರಾಧಿಕಾರದ ಆದೇಶದ ಮೇರೆಗೆ ಮಂಗಳವಾರದಂದು ಮಂಗಳೂರು ದಕ್ಷಿಣ ಸಂಚಾರಿ ಠಾಣೆ ಮತ್ತು ಉಳ್ಳಾಲ ಪೊಲೀಸರು ಜಂಟಿಯಾಗಿ ಕಾರ್ಯಾಚರಣೆ ನಡೆಸಿ ತೆರವುಗೊಳಿಸಿದರು.