News Karnataka Kannada
Sunday, May 05 2024
ಮಂಗಳೂರು

ಉಳ್ಳಾಲ: ನಾಪತ್ತೆಯಾಗಿದ್ದ ಯುವಕ ನದಿಯಲ್ಲಿ ಶವವಾಗಿ ಪತ್ತೆ

Ullal: Missing youth found dead in river
Photo Credit : News Kannada

ಉಳ್ಳಾಲ: ಪುಂಜಾಲಕಟ್ಟೆಯಿಂದ ನಾಪತ್ತೆಯಾಗಿದ್ದ ಯುವಕನ ಶವ ಉಳ್ಳಾಲ ಉಳಿಯದ ನೇತ್ರಾವತಿ ನದಿಯಲ್ಲಿ ಪತ್ತೆಯಾಗಿದೆ.

ಬೆಳ್ತಂಗಡಿ ತಾಲೂಕಿನ ಮಚ್ಚಿನ‌ ಗ್ರಾಮದ ನಿವಾಸಿಗಳಾದ ತನಿಯ ಮತ್ತು ಚೋಮು ದಂಪತಿ ಪುತ್ರ ರಾಜೇಶ್ (27)ಮೃತ ಯುವಕ.

ರಾಜೇಶ್ ಕಳೆದ ಶುಕ್ರವಾರ ಸಂಜೆ 4 ಗಂಟೆಗೆ ಮನೆಯಿಂದ ತೆರಳಿದ್ದು ವಾಪಾಸಾಗಿರಲಿಲ್ಲ. ಈ ಬಗ್ಗೆ ಪೋಷಕರು ಪೂಂಜಾಲಕಟ್ಟೆ ಠಾಣೆಯಲ್ಲಿ ನಾಪತ್ತೆ ಪ್ರಕರಣ ದಾಖಲಿಸಿದ್ದರು. ನಿನ್ನೆ ಮಂಗಳೂರಿನ ನೇತ್ರಾವತಿ ಸೇತುವೆಯಲ್ಲಿ ರಾಜೇಶ್ ಅವರ ಬೈಕ್ ದೊರಕಿತ್ತು.

ಇಂದು ಬೆಳಿಗ್ಗೆ ಉಳ್ಳಾಲ ಉಳಿಯದ ನೇತ್ರಾವತಿ ನದಿಯಲ್ಲಿ ತೇಲುತ್ತಿದ್ದ ಮೃತದೇಹವನ್ನ ಸ್ಥಳೀಯ ಮೀನುಗಾರರಾದ ಪ್ರೇಮ್ ಪ್ರಕಾಶ್ ಡಿ ಸೋಜಾ ಮತ್ತು ಸ್ನೇಹಿತರು ಎಳೆದು ದಡಕ್ಕೆ ಹಾಕಿದ್ದಾರೆ. ಸ್ಥಳಕ್ಕೆ ತೆರಳಿದ ಉಳ್ಳಾಲ ಪೊಲೀಸರು ಮೃತದೇಹವನ್ನ ಜಿಲ್ಲಾ ವೆನ್ಲಾಕ್ ಆಸ್ಪತ್ರೆಗೆ ರವಾಣಿಸಿದ್ದು ರಾಜೇಶ್ನ ಪೋಷಕರು ಶವದ ಗುರುತು ಪತ್ತೆ ಹಚ್ಚಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12792
News Karnataka Kannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು