Categories: ಮಂಗಳೂರು

ಉಳ್ಳಾಲ: ಕಾಂತಾರದ ಗುರುವ ನಾಯಕನಟನಾಗಿ ನಟಿಸಲಿರುವ ಚಿತ್ರಕ್ಕೆ ಹರೇಕಳದಲ್ಲಿ ಮುಹೂರ್ತ

ಉಳ್ಳಾಲ: ಕಾಂತಾರ ಚಿತ್ರದಲ್ಲಿ ನಟಿಸಿರುವ ಅನೇಕ ಕಲಾವಿದರುಗಳನ್ನು ಒಳಗೊಂಡು , ಪ್ರಮುಖ ಗುರುವ ಪಾತ್ರ ಮಾಡಿದ್ದ ಸ್ವರಾಜ್ ಶೆಟ್ಟಿ ನಾಯಕನಟನಾಗಿ ನಟಿಸಲಿರುವ , ಮ್ಯಾಕ್ಸ್ ಕ್ರಿಯೇಷನ್ಸ್ ಸಂಸ್ಥೆ ನಿರ್ಮಿಸುತ್ತಿರುವ ಇನ್ನೇನು ಹೆಸರು ಇಡಲಿರುವ `ಪ್ರಾಡಕ್ಷನ್ ನಂ-೧ ಕನ್ನಡ ಚಲನಚಿತ್ರದ ಮುಹೂರ್ತ ಹರೇಕಳದ ಅರ್ಧನಾರೀಶ್ವರ ದೇವಸ್ಥಾನದಲ್ಲಿ ಭಾನುವಾರ ನಡೆಯಿತು.

ಹಿರಿಯ ರಂಗಕರ್ಮಿ ವಿಜಯಕುಮಾರ್ ಕೊಡಿಯಾಲ್ ಬೈಲ್ ಕ್ಲಾಪ್ ಮಾಡಿದರು. ಚಿತ್ರೀಕರಣಕ್ಕೆ ಚಲನಚಿತ್ರ ನಿರ್ಮಾಪಕ ಹಾಗೂ ನಿರ್ದೇಶಕ ಪ್ರಕಾಶ್ ಪಾಂಡೇಶ್ವರ್ ಚಾಲನೆ ನೀಡಿದರು.

ಬಳಿಕ ನಡೆಸಿದ ಸುದ್ಧಿಗೋಷ್ಠಿಯಲ್ಲಿ ಮಾತಾಡಿದ ವಿಜಯ್ ಕುಮಾರ್ ಕೊಡಿಯಾಲ್ ಬೈಲ್ ಅವರು, “ಸ್ವರಾಜ್ ಶೆಟ್ಟಿ ಉತ್ತಮ ಕಲಾವಿದ. ಮೊದಲ ಬಾರಿ ಕಥೆ ಚಿತ್ರಕತೆ ನಿರ್ದೇಶನದ ಜೊತೆಗೆ ನಾಯಕರಾಗಿ ಅಭಿನಯಿಸುತ್ತಿದ್ದಾರೆ. ಅವರಿಗೆ ಎಲ್ಲರ ಹಾರೈಕೆ ಇರಲಿ. ಕನ್ನಡ ಧಾರವಾಹಿ ರಾಧಾಕಲ್ಯಾಣ, ಕೃಷ್ಣ ತುಳಸಿ ಹಾಗೂ ಓಂಪ್ರಕಾಶ್ ರಾವ್ ಅವರ ಎರಡು ಚಿತ್ರಗಳಲ್ಲಿ ನಟಿಸಿ ಇನ್ನೇನು ತೆರೆಕಾಣಲಿರುವ ಬಹುನಿರೀಕ್ಷಿತ ಬಿರ್ದ್ದ ಕಂಬುಲ ಚಿತ್ರದಲ್ಲಿ ನಿರ್ದೇಶಕ ಹಾಗೂ ನಾಯಕನಟನಾಗಿ ನಟಿಸಿ, ಶಿವದೂತೆ ಗುಳಿಗೆಯಲ್ಲೂ ನಾಟಕದಲ್ಲಿ ಒಂದು ದಿನಕ್ಕೆ ಮೂರು ಪ್ರದರ್ಶನವಿದ್ದರೂ ಅದೇ ಹುಮ್ಮಸ್ಸಿನಲ್ಲಿ ನಟಿಸುವ ಅದ್ಭುತ ಕಲಾವಿದೆ. ೩೭ ವರ್ಷದ ನನ್ನ ರಂಗ ಪ್ರಯಾಣದಲ್ಲಿ ಸಹಕರಿಸಿ ಬೆಂಬಲಿಸಿದ ಎಲ್ಲರೂ ಸ್ವರಾಜ್ ಶೆಟ್ಟಿಯವರಿಗೂ ಪ್ರೋತ್ಸಾಹಿಸಬೇಕಿದೆ ಎಂದರು.

ಪ್ರಕಾಶ್ ಪಾಂಡೇಶ್ವರ್ ಮಾತನಾಡಿ , “ಸ್ವರಾಜ್ ಅನ್ನುವ ಪ್ರತಿಭೆ ಪೂರ್ಣ ಪ್ರಮಾಣದಲ್ಲಿ ಈ ಚಿತ್ರದ ಮೂಲಕ ಪಯಣ ಆರಂಭಿಸಿದ್ದಾರೆ. ಭಾರೀ ಪ್ರಶಂಸೆ ಪಡೆದುಕೊಂಡ ನಟ ಸ್ವರಾಜ್ ಶೆಟ್ಟಿ , ಕಾಂತಾರ ಚಿತ್ರದಲ್ಲಿ ಕಂಡ ಯಶಸ್ಸು ಸೇರಿದಂತೆ ಶಿವದೂತೆ ಗುಳಿಗೆ ನಾಟಕದಲ್ಲೂ ಅದ್ಭುತ ನಟನೆಯನ್ನು ಮಾಡಿ ಖ್ಯಾತಿ ಗಳಿಸಿದವರು. ತಾವಾಗಿಯೇ ನಟಿಸಿ, ನಿರ್ದೇಶಿಸಿ, ಚಿತ್ರಕಥೆ ನೀಡಿ ತಯಾರಾಗುತ್ತಿರುವ ಸಿನಿಮಾವಿದು. ಚಿತ್ರತಂಡಕ್ಕೆ ಶುಭಹಾರೈಕೆಗಳು ಎಂದರು.

ನಾಯಕನಟ ಸ್ವರಾಜ್ ಶೆಟ್ಟಿ ಮಾತನಾಡಿ, ಕಾಂತಾರ ಚಿತ್ರದಲ್ಲಿ ನಟಿಸಿರುವ ಪ್ರತಿಮಾ ನಾಯ್ಕ್, ಸತೀಶ್ ಆಚಾರ್ಯ, ರಾಧಾಕೃಷ್ಣ ನಾಯ್ಕ್ ಸೇರಿದಂತೆ ಅನೇಕ ಕಲಾವಿದರು ಚಿತ್ರದಲ್ಲಿ ನಟಿಸಲಿದ್ದಾರೆ. ಜನವರಿ ಶೂಟಿಂಗ್ ಸಂದರ್ಭ ಸ್ಟಾರ್ ಕಾಸ್ಟಿಂಗ್ ನಡೆಯಲಿದೆ. ಕನ್ನಡದಲ್ಲಿ ಚಿತ್ರೀಕರಣಗೊಳ್ಳಲಿರುವ ಚಿತ್ರ ನಂತರ ತುಳು ಭಾಷೆಯಲ್ಲೂ ತೆರೆಕಾಣಲಿದೆ. ಚಿತ್ರಕ್ಕೆ ಈಗಾಗಲೇ ಹೆಸರನ್ನು ಇಡಲಾಗಿದೆ. ಅದನ್ನು ಶೀಘ್ರದಲ್ಲೇ ಬಿಡುಗಡೆಗೊಳಿಸಲಿದ್ದೇವೆ. ಪ್ರೇವiಕಥೆಯನ್ನು ಒಳಗೊಂಡ ಚಿತ್ರ ಇದಾಗಿದ್ದು, ಮಂಗಳೂರಿನಾದ್ಯತ ೨೫ ದಿನಗಳ ಕಾಲ ಶೂಟಿಂಗ್ ನಡೆಯಲಿದೆ. ಈಗಾಗಲೇ ನಟಿಸಿರುವ ಅಭಿರಾಮ ಹಾಗೂ ಬಿರ್ದ್ದ ಕಂಬುಲ ತಾನು ಕಾಂತಾರ ಚಿತ್ರದ ಬಳಿಕ ನಟಿಸಿರುವ ಚಿತ್ರಗಳು ಶೀಘ್ರದಲ್ಲೇ ತೆರೆಕಾಣಲಿವೆ ಎಂದರು.

ಚಿತ್ರದ ನಿರ್ಮಾಪಕ ಭಾಗ್ಯರಾಜ್ ಶೆಟ್ಟಿ ಮಾತನಾಡಿ, “ಕನ್ನಡಿಗರು ಸಹಕಾರ ನೀಡಬೇಕು ಎಂದರು. ನಟಿ ಶಿವಾನಿ ರೈ ಮಾತಾಡುತ್ತಾ, “ಇದು ನನ್ನ ಎರಡನೇ ಸಿನಿಮಾ ಆಗಿದ್ದು ನಾನು ತುಂಬಾ ಇಷ್ಟಪಟ್ಟು ಚಿತ್ರತಂಡ ಸೇರಿದ್ದೇನೆ. ಚಿತ್ರದ ಕಥೆ ತುಂಬಾ ಚೆನ್ನಾಗಿದೆ” ಎಂದರು.

ಪತ್ರಿಕಾಗೋಷ್ಠಿಯಲ್ಲಿ ಹಿರಿಯ ರಂಗಕರ್ಮಿ ವಿಜಯ್ ಕುಮಾರ್ ಕೊಡಿಯಾಲ್ ಬೈಲ್, ಚಿತ್ರ ನಿರ್ಮಾಪಕ ಹಾಗೂ ನಿರ್ದೇಶಕ ಪ್ರಕಾಶ್ ಪಾಂಡೇಶ್ವರ್, ನಾಯಕ ನಟ ಸ್ವರಾಜ್ ಶೆಟ್ಟಿ, ನಾಯಕಿ ನಟಿ ಶಿವಾನಿ ರೈ, ಭಾಗ್ಯರಾಜ್ ಶೆಟ್ಟಿ, ನಿರ್ಮಾಪಕಿ ರಕ್ಷಾ ರಾಜ್ ಶೆಟ್ಟಿ , ಪ್ರವೀಣ್ ಶೆಟ್ಟಿ, ಗಣೇಶ್ ನೀರ್ಚಾಲ್ ಉಪಸ್ಥಿತರಿದ್ದರು.

ಕ್ಯಾಮರಾಮೆನ್ ಆಗಿ ರೂಪೇಶ್ ಷಾಜಿ, ಸಂಗೀತ ನಿರ್ದೇಶಕರಾಗಿ ವಿನೋದ್ ರಾಜ್ ಕೋಕಿಲ, ಆರ್ಟ್ ಡೈರೆಕ್ಟರ್ ಆಗಿ ರಾಜೇಶ್ ಬಂದ್ಯೋಡ್ , ಸ್ಕಿçಪ್ಟ್ ಸುಪರ್‌ವೈಸರ್ ಆಗಿ ವಿಘ್ನೇಶ್ ಶೆಟ್ಟಿ, ಎಡಿಟಿಂಗ್ ವಿಭಾಗದಲ್ಲಿ ಗಣೇಶ್ ನೀರ್ಚಾಲು, ಪ್ರಾಡಕ್ಷನ್ ಮ್ಯಾನೇಜರ್ ಆಗಿ ರಾಜೇಶ್ ಕುಡ್ಲ, ಅಸಿಸ್ಟೆಂಟ್ ಡೈರೆಕ್ಟರಾಗಿ ಮಹಾನ್ ಶೆಟ್ಟಿ ಪ್ರವೀಣ್ ಶೆಟ್ಟಿ ಚಿತ್ರ ತಂಡದಲ್ಲಿ ಇದ್ದಾರೆ .

Ashika S

Recent Posts

ಸುರತ್ಕಲ್: ಶಬರಿಮಲೆ ಹದಿನೆಂಟು ಮೆಟ್ಟಿಲು ಹತ್ತುವ ವೇಳೆ ಹೃದಯಾಘಾತ !

ಮಗನ ಹೆಸರಲ್ಲಿ ಹೇಳಿಕೊಂಡಿದ್ದ ಹರಕೆ ತೀರಿಸಲು ಶಬರಿಮಲೆಗೆ ತೆರಳಿದ್ದ ಸುರತ್ಕಲ್ ಕಾಟಿಪಳ್ಳ ನಿವಾಸಿ ಸಂದೀಪ್‌ ಶೆಟ್ಟಿ (37) ಅವರು ಹೃದಯಾಘಾತದಿಂದ…

5 mins ago

ಸಿಎಂ ಸಿದ್ದು ತವರು ಕ್ಷೇತ್ರದಲ್ಲಿ ವಾಂತಿ-ಬೇದಿಯಿಂದ ತತ್ತರಿಸಿದ ಗ್ರಾಮಸ್ಥರು ..!

ಬಿಸಿಲಿನ ಬೇಗೆಯಿಂದ ತತ್ತರಿಸುತ್ತಿರುವ ಜನರಿಗೆ ತಂಪೆರೆಯುವ ಸಲುವಾಗಿ ಕಳೆದ ಒಂದು ವಾರಗಳಿಂದ ಮಳೆಯು ಧಾರಾಕಾರವಾಗಿ ಸುರಿಯುತ್ತಿದೆ ಇಂತಹ ಸಂದರ್ಭದಲ್ಲಿ ರಾಜ್ಯದ…

14 mins ago

ಕುಡಿಯುವ ನೀರಿನ ಸರಬರಾಜಿನಲ್ಲಿ ವ್ಯತ್ಯಾಸ: ಗ್ರಾಮಕ್ಕೆ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ

ಧಾರವಾಡ ಜಿಲ್ಲೆಯಲ್ಲಿ ಜನ, ಜಾನುವಾರುಗಳಿಗೆ ಕುಡಿಯುವ ನೀರು, ಮೇವು ಕೊರತೆ ಆಗದಂತೆ ಮುನ್ನೆಚ್ಚರಿಕೆ ವಹಿಸಿ, ಕ್ರಮವಹಿಸಲು ಸೂಚಿಸಲಾಗಿದ್ದರೂ ತಾಂತ್ರಿಕ ಸಮಸ್ಯೆ,…

18 mins ago

ಮನೆಯ ಗೇಟ್ ಬಳಿ ತುಂಡಾಗಿ ಬಿದ್ದಿದ್ದ ವಿದ್ಯುತ್ ತಂತಿ ಸ್ಪರ್ಶಿಸಿ ವ್ಯಕ್ತಿ ಮೃತ್ಯು

ಮನೆಯ ಗೇಟ್ ಮುಂಭಾಗದಲ್ಲಿ ತುಂಡಾಗಿ ಬಿದ್ದಿದ್ದ ವಿದ್ಯುತ್ ತಂತಿಯನ್ನು ಸ್ಪರ್ಶಿಸಿ ವ್ಯಕ್ತಿಯೊಬ್ಬರು ಮೃತಪಟ್ಟ ಘಟನೆ ಶಿರೂರು ಗ್ರಾಮದ ಹಡವಿನಕೋಣೆ ಮುದ್ರುಮಕ್ಕಿ…

33 mins ago

ಐತಿಹಾಸಿಕ ʻಹಲಗಲಿʼ ಕಥೆಗೆ ನಾಯಕನಾದ ನಟರಾಕ್ಷಸ ಧನಂಜಯ್

ಐತಿಹಾಸಿಕ ಕಥೆಯ ʻಹಲಗಲಿʼ ಸಿನಿಮಾಗೆ ನಟ ಡಾಲಿ ಧನಂಜಯ್‌ ನಾಯಕನಾಗಿ ಆಯ್ಕೆಯಾಗಿದ್ದಾರೆ. 'ಕೃಷ್ಣ ತುಳಸಿ' ಚಿತ್ರದ ಖ್ಯಾತ ಡೈರೆಕ್ಟರ್‌ ಸುಕೇಶ್‌…

34 mins ago

ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ ಚೆಕ್ ಇನ್ ವೇಳೆ ಬ್ಯಾಗ್‍ನಲ್ಲಿ ಬಾಂಬ್ ಇದೆ ಎಂದ ಪ್ರಯಾಣಿಕ!

ನಗರದ ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ ಅಧಿಕಾರಿಗಳು ಚೆಕ್ ಇನ್ ಮಾಡುತ್ತಿದ್ದ ವೇಳೆ ಪ್ರಯಾಣಿಕನೊಬ್ಬನ ಬ್ಯಾಗ್‍ನಲ್ಲಿ ಬಾಂಬ್ ಇದೆ ಎಂದ ಘಟನೆ…

39 mins ago