Categories: ಮಂಗಳೂರು

ಭೂಗತ ಮಾರ್ಗ ಬಹುತೇಕ ಪೂರ್ಣ: ಮಂಗಳೂರು ತಾಲ್ಲೂಕು ಕಚೇರಿ ಮುಂಭಾಗ 7ಕೋಟಿ ವೆಚ್ಚದ ಕಾಮಗಾರಿ

ಮಂಗಳೂರು: ನಗರದ ಕ್ಲಾಕ್ ಟವರ್ ವೃತ್ತ ದ ಬಳಿ ಬಹುಕಾಲದಿಂದ ನಿರೀಕ್ಷೆಯಾಗಿಯೇ ಉಳಿದಿದೆ ಪಾದಚಾರಿ ಭೂಗತ ಮಾರ್ಗ ಅಂಡರ್ ಪಾಸ್ ಕಾಮಗಾರಿ ಶೇಕಡಾ 90 ರಷ್ಟು ಪೂರ್ಣಗೊಂಡಿವೆ. ಮಂಗಳೂರು ತಾಲ್ಲೂಕು ಕಚೇರಿ ಮುಂಭಾಗದಿಂದ ಗಾಂಧಿ ಉದ್ಯಾನವನ ತನಕ 30ಮೀಟರ್ ಉದ್ದ ಹಾಗೂ 10 ಮೀಟರ್ ಅಗಲದ ಭೂಗತ ಮಾರ್ಗದ ಕಾಮಗಾರಿ ಪೂರ್ಣಗೊಂಡಿದೆ.

ಗಾಂಧಿ ಉದ್ಯಾನವನದಿಂದ ಹೋಟೆಲ್ ತಾಜ್ ಮಹಲ್ ತನಕ 26 ಮೀಟರ್ ಉದ್ದ ಹಾಗೂ ಹತ್ತು ಮೀಟರ್ ಅಗಲದ ಮಾರ್ಗ ಶೇಕಡ ತೊಂಬತ್ತು ರಷ್ಟು ಪೂರ್ಣಗೊಂಡಿದೆ. ಒಟ್ಟು 7ಕೋಟಿ₹ವೆಚ್ಚದಲ್ಲಿ ಕಾಮಗಾರಿ ಕೈಗೆತ್ತಿಕೊಳ್ಳಲಾಗಿದೆ .

ಗಾಂಧಿ ಉದ್ಯಾವನದ ಪಾದಚಾರಿ ಮಾರ್ಗದಲ್ಲಿ ನೆಲಹಾಸು ಕಾರ್ಯ ಪ್ರಗತಿಯಲ್ಲಿದ್ದು ಉದ್ಯಾವನದ ಆವರಣಗೋಡೆ ನೀರಾವರಿ ಹಾಗೂ ವಿದ್ಯುತ್ ಕೆಲಸಗಳು ಹಾಗೂ ತೋಟಗಾರಿಕೆಯ ಪೂರ್ವ ಸಿದ್ಧತಾ ಕಾಮಗಾರಿ ಪ್ರಗತಿಯಲ್ಲಿದೆ. 2ತಿಂಗಳಲ್ಲಿ ಎಲ್ಲವೂ ಪೂರ್ಣಗೊಳ್ಳಲಿದೆ ಎಂದು ಸ್ಮಾರ್ಟ್ ಸಿಟಿ ಅಧಿಕಾರಿಗಳು ತಿಳಿಸಿದ್ದಾರೆ. 2ವರ್ಷಗಳಿಂದ ಹಂತ ಹಂತವಾಗಿ ಕಾಮಗಾರಿ ನಡೆದಿದೆ ,ಮಂದಗತಿಯ ಕೆಲಸದ ಬಗ್ಗೆ ಸಾರ್ವಜನಿಕರಿಂದ ವ್ಯಾಪಕ ಟೀಕೆ ವ್ಯಕ್ತವಾಗಿತ್ತು.

ಕೋವಿಡ್ ಲೊಕ್ಡೌನ್ ಹಾಗೂ ಮಳೆಗಾಲದ ಅವಧಿಯಲ್ಲಿ ಕಾಮಗಾರಿ ನಿರೀಕ್ಷಿತ ವೇಗದಲ್ಲಿ ನಡೆಯದಿರುವುದು ಕೆಲಸ ಪೂರ್ಣಗೊಳ್ಳುವಲ್ಲಿ ವಿಳಂಬಕ್ಕೆ ಕಾರಣವಾಗಿತ್ತು. ಪ್ರತಿದಿನ ರೈಲು ನಿಲ್ದಾಣದಿಂದ ನಗರಕ್ಕೆ ಬರುವ ಸಾವಿರಾರು ಸಾರ್ವಜನಿಕರಿಗೆ ಈ ಪಾದಚಾರಿ ಭೂಗತ ಮಾರ್ಗ ಉಪಯೋಗವಾಗಲಿದೆ . ಹಿಂದೆ ಇಲ್ಲಿ ರಸ್ತೆ ದಾಟುವುದು ಹರಸಾಹಸವಾಗಿತ್ತು ಮಹಿಳೆಯರು ಹಿರಿಯರು ರಸ್ತೆ ದಾಟಲು ಜೀವ ಕೈಯಲ್ಲಿ ಹಿಡಿದು ಕೊಳ್ಳಬೇಕಾದ ಸ್ಥಿತಿ ಇತ್ತು , ಸ್ಕೈವಾಕ್ ಅಥವಾ ಭೂಗತ ಮಾರ್ಗ ನಿರ್ಮಾಣ ಮಾಡಬೇಕೆನ್ನುವ ಬೇಡಿಕೆ ದಶಕದಿಂದ ಇತ್ತು , ಈ ಹಿಂದೆ ಸ್ಕೈ ವಾಕ್ ಮಾಡಲು ಯೋಜನೆ ರೂಪಿಸಿ ಟೆಂಡರ್ ಪ್ರಕ್ರಿಯೆ ನಡೆದು ಅಂದಿನ ಉಸ್ತುವಾರಿ ಸಚಿವ ಬಿ ರಮಾನಾಥ ರೈ ಶಿಲಾನ್ಯಾಸವನ್ನು ನೆರವೇರಿಸಿದರು .ಆದರೆ ಬಳಿಕ ಈ ಯೋಜನೆಯ ನಿರ್ವಹಣಾ ವೆಚ್ಚ ಅಧಿಕವಾದ ಕಾರಣ ರದ್ದಾಯಿತು . ಸ್ಮಾರ್ಟ್ ಸಿಟಿ ಯೋಜನೆಯಲ್ಲಿ ಪ್ರಸ್ತುತ ಪಾದಚಾರಿ ಭೂಗತ ಮಾರ್ಗದ ಕನಸು ನನಸಾಗಿದೆ.

Gayathri SG

Recent Posts

ಪಲ್ಟಿಯಾದ ಲಾರಿಯಲ್ಲಿ 7 ಕೋ. ಹಣ ಪತ್ತೆ: ವಶಕ್ಕೆ ಪಡೆದ ಪೊಲೀಸರು

ಪಲ್ಟಿಯಾದ ಲಾರಿಯಲ್ಲಿ ಬರೋಬ್ಬರಿ 7 ಕೋಟಿ ಹಣವನ್ನು ವಶಕ್ಕೆ ಪಡೆದ ಘಟನೆ ಆಂಧ್ರಪ್ರದೇಶದಲ್ಲಿ ನಡೆದಿದೆ.

6 mins ago

ಪುಸ್ತಕದಲ್ಲಿ ಬೈಬಲ್‌ ಪದ ಬಳಕೆ : ಕರೀನಾ ಕಪೂರ್‌ಗೆ ಕೋರ್ಟ್‌ ನೋಟಿಸ್‌

ಗರ್ಭಧಾರಣೆಗೆ (ಪ್ರಗ್ನೆನ್ಸಿ) ಸಂಬಂಧಿಸಿದಂತೆ ಬರೆದ ಪುಸ್ತಕದ ಶೀರ್ಷಿಕೆಯಲ್ಲಿ ‘ಬೈಬಲ್’ ಪದ ಬಳಕೆ ಮಾಡಿದಕ್ಕಾಗಿ ಮಧ್ಯಪ್ರದೇಶ ಹೈಕೋರ್ಟ್ ಬಾಲಿವುಡ್ ನಟಿ ಕರೀನಾ…

14 mins ago

ಭಯೋತ್ಪಾದಕ ಕೃತ್ಯದಲ್ಲಿ ಭಾಗಿ: ಉಗ್ರರ ಇಬ್ಬರು ಸಹಚರರ ಬಂಧನ

ಉಗ್ರರ ಇಬ್ಬರು ಸಹಚರರನ್ನು ಜಮ್ಮು–ಕಾಶ್ಮೀರದ ಶೋಪಿಯಾನ್ ಜಿಲ್ಲೆಯಲ್ಲಿ ಬಂಧಿಸಲಾಗಿದೆ ಎಂದು ಪೊಲೀಸರು ಶನಿವಾರ ತಿಳಿಸಿದ್ದಾರೆ.

28 mins ago

ಗುಜರಾತ್ ತಂಡದ ನಾಯಕ ಶುಭಮನ್ ಗಿಲ್​ಗೆ ಮತ್ತೆ 24 ಲಕ್ಷ ರೂ. ದಂಡ

ಶುಕ್ರವಾರ ನಡೆದ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧ 35 ರನ್‌ಗಳಿಂದ ಜಯಗಳಿಸಿದ ಗುಜರಾತ್ ಟೈಟಾನ್ಸ್ ತಂಡದ ನಾಯಕ ಶುಭಮನ್…

29 mins ago

ಟಿ20 ವಿಶ್ವಕಪ್​ಗೆ ಮುನ್ನ ರಿಷಭ್​ ಪಂತ್​​ಗೆ ನಿಷೇಧ, 30 ಲಕ್ಷ ರೂ. ದಂಡ

17ನೇ ಆವೃತ್ತಿಯ ಐಪಿಎಲ್​ನ 62ನೇ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ಹಾಗೂ ರಾಯಲ್ ಚಾಲೆಂಜರ್ಸ್​ ಬೆಂಗಳೂರು ತಂಡದ ನಡುವೆ ಹೈವೋಲ್ಟೇಜ್ ಪಂದ್ಯ…

53 mins ago

ʼರಾಜ್ಯ ಸರ್ಕಾರ ಸಾಲ ಮನ್ನಾ ಮಾಡಿ ರೈತರಿಗೆ ನೆರವಾಗಬೇಕುʼ

ರಾಜ್ಯ ಸರ್ಕಾರ ಸಾಲ ಮನ್ನಾ ಮಾಡಿ ರೈತರಿಗೆ ನೆರವಾಗಬೇಕು ಎಂದು ಮಾಜಿ ಸಿಎಂ ಬಿ.ಎಸ್ ಯಡಿಯೂರಪ್ಪ ಹೇಳಿದ್ದಾರೆ.

55 mins ago