News Karnataka Kannada
Thursday, May 02 2024
ಮಂಗಳೂರು

ಕೇಂದ್ರ ಗೃಹಸಚಿವ ಅಮಿತ್‌ ಶಾ ಭೇಟಿ: ಮಂಗಳೂರಿನಲ್ಲಿ ಸಂಚಾರ ಬದಲಾವಣೆ

The Manipur conflict; All-party meeting chaired by Home Minister today
Photo Credit : News Kannada

ಮಂಗಳೂರು: ಕೇಂದ್ರ ಗೃಹ ಸಚಿವ ಅಮಿತ್ ಶಾ ಶನಿವಾರ ಮಧ್ಯಾಹ್ನ ಮೂರು ಗಂಟೆಯಿಂದ ರಾತ್ರಿ 7ರವರೆಗೆ ಟೌನ್‌ಹೌಲ್‌ನಿಂದ ನವಭಾರತ ಸರ್ಕಲ್‌ವರೆಗೆ ರೋಡ್‌ಶೋ ನಡೆಸಲಿರುವ ಹಿನ್ನೆಲೆಯಲ್ಲಿ ವಾಹನ ಸಂಚಾರಕ್ಕೆ ಪರ್ಯಾಯ ವ್ಯವಸ್ಥೆ ಮಾಡಲಾಗಿದೆ. ಉಡುಪಿ-ಮಂಗಳೂರು ರಸ್ತೆಯಲ್ಲಿ ಸಂಚರಿಸುವ ಎಲ್ಲ ಬಸ್‌ಗಳು ಕೊಟ್ಟಾರಚೌಕಿ-ಕೆಪಿಟಿ-ನಂತೂರು-ಶಿವಭಾಗ್-ಬೆಂದೂರ್‌ವೆಲ್-ಕರಾವಳಿ ಸರ್ಕಲ್-ಕಂಕನಾಡಿ ಸರ್ಕಲ್-ವೆಲೆನ್ಸಿಯಾ-ಮಂಗಳಾದೇವಿವರೆಗೆ ಸಂಚರಿಸಬೇಕು ಮತ್ತು ಅದೇ ಮಾರ್ಗದಲ್ಲಿ ವಾಪಸ್ ಹೋಗಬೇಕು.

ಉಡುಪಿ ಕಡೆಯಿಂದ ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಾಣಕ್ಕೆ ಬರುವ ಬಸ್‌ಗಳು ಕೊಟ್ಟಾರಚೌಕಿ-ಕೆಪಿಟಿ-ಬಟ್ಟಗುಡ್ಡೆ, ಬಿಜೈ-ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣಕ್ಕೆ ಹೋಗಬೇಕು. ತಲಪಾಡಿ ಮತ್ತು ಪಡೀಲ್ ಕಡೆಯಿಂದ ಸ್ಟೇಟ್‌ಬ್ಯಾಂಕ್ ಕಡೆಗೆ ಬರುವ ಎಲ್ಲ ಬಸ್‌ಗಳು ಪಂಪ್‌ವೆಲ್-ಕರಾವಳಿ ಸರ್ಕಲ್-ಕಂಕನಾಡಿ ಸರ್ಕಲ್-ವೆಲೆನ್ಸಿಯಾ-ಮಂಗಳಾದೇವಿವರೆಗೆ ಸಂಚರಿಸಬೇಕು. ಅದೇ ಮಾರ್ಗವಾಗಿ ವಾಪಸ್ ಹೋಗಬೇಕು.

ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದಿಂದ ಹೊರಡುವ ಎಲ್ಲ ಬಸ್‌ಗಳು ಕೆಎಸ್‌ಆರ್‌ಟಿಸಿ-ಕುಂಟಿಕಾನ ಮೂಲಕ ಕೆಪಿಟಿ ಅಥವಾ ಕೊಟ್ಟಾರಚೌಕಿ ಕಡೆಗೆ ಸಂಚರಿಸಬೇಕು. ಕೊಟ್ಟಾರ ಚೌಕಿಯಿಂದ ಸ್ಟೇಟ್‌ಬ್ಯಾಂಕ್ ಕಡೆಗೆ ಬರುವ ಎಲ್ಲ ಲಘು ವಾಹನಗಳು ಲೇಡಿಹಿಲ್-ಮಣ್ಣಗುಡ್ಡ-ಬಾಲಾಜಿ ಜಂಕ್ಷನ್-ಬಂದರ್ ಜಂಕ್ಷನ್ ಮೂಲಕ ಮುಂದಕ್ಕೆ ಸಂಚರಿಸಬೇಕು.

ಲಾಲ್‌ಭಾಗ್ ಕಡೆಯಿಂದ ಬಲ್ಮಠ ಕಡೆಗೆ ಸಂಚರಿಸುವ ಎಲ್ಲ ಲಘು ವಾಹನಗಳು ಬಿ.ಜಿ.ಸ್ಕೂಲ್ ಜಂಕ್ಷನ್(ಬೆಸೆಂಟ್ ಜಂಕ್ಷನ್)-ಜೈಲು ರಸ್ತೆ-ಕರಂಗಲ್ಪಾಡಿ-ಬಂಟ್‌ಸ್‌ ಹಾಸ್ಟೆಲ್-ಮಲ್ಲಿಕಟ್ಟೆಯಾಗಿ ಅಥವಾ ಪಿವಿಎಸ್-ಬಂಟ್‌ಸ್‌ ಹಾಸ್ಟೆಲ್-ಮಲ್ಲಿಕಟ್ಟೆಯಾಗಿ ಸಂಚರಿಸಬೇಕು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
1616

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು