News Karnataka Kannada
Friday, May 03 2024
ಮಂಗಳೂರು

ದೇಶದಲ್ಲಿ ಏಕತೆ ಮತ್ತು ಅಭಿವೃದ್ಧಿ ಕಾಂಗ್ರೆಸ್‌ನಿಂದ ಮಾತ್ರ ಸಾಧ್ಯ- ಇನಾಯತ್ ಅಲಿ

Fake Facebook page created in the name of Inayat Ali's fans
Photo Credit : News Kannada

ಕೊಳ್ನಾಡು: ಕೊಳ್ನಾಡು ಮುಲ್ಕಿಯಲ್ಲಿ ನಡೆದ ಎಐಸಿಸಿ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ಅವರ ಚುನಾವಣಾ ಪ್ರಚಾರ ಸಭೆಯಲ್ಲಿ ಮಂಗಳೂರು ಉತ್ತರ ವಿಧಾನಸಭಾ ಕ್ಷೇತ್ರದ ಅಭ್ಯರ್ಥಿ ಇನಾಯತ್ ಅಲಿ ಅವರು ಭಾಗವಹಿಸಿ ಮಾತನಾಡಿದರು.

‘ಅಂದು ಮಹಾತ್ಮ ಗಾಂಧೀಜಿ, ನೆಹರೂ ಅವರಂತಹ ಮಹಾನ್ ನಾಯಕರು ಹೋರಾಡಿ ಸ್ವಾತಂತ್ರ್ಯ ತಂದು ಕೊಟ್ಟರು. ಇಂದು ನಮ್ಮ ನಾಯಕರಾದ ರಾಹುಲ್ ಗಾಂಧಿ ಅವರು ಭಾರತ್ ಜೋಡೋ ಯಾತ್ರೆ ಮೂಲಕ ಭಾರತದ ಏಕತೆಗಾಗಿ ಒಗ್ಗಟ್ಟಿಗಾಗಿ ಹೋರಾಟ ಮಾಡಿದರು. ನಮ್ಮ ನಾಯಕಿ ಪ್ರಿಯಾಂಕ ಗಾಂಧಿ ಅವರು ಕೂಡಾ ದೇಶದಾದ್ಯಂತ ಸಂಚರಿಸಿ ನವ ಭಾರತ ಕಟ್ಟುವ ಈ ಹೋರಾಟಕ್ಕೆ ಶಕ್ತಿ ತುಂಬುತ್ತಿದ್ದಾರೆ. ಕರ್ನಾಟಕ ವಿಧಾನಸಭಾ ಚುನಾವಣೆ ದೇಶದ ಇತಿಹಾಸದಲ್ಲಿ ಪ್ರಮುಖ ಮೈಲುಗಲ್ಲಾಗಲಿದೆ.

ಜಾತಿ ಧರ್ಮದ ಆಧಾರದಲ್ಲಿ ನಾಡಿನ ಸಹೋದರತೆಯನ್ನು ಏಕತೆಯನ್ನು ಒಡೆಯುವ ಆಡಳಿತ ಬಿಜೆಪಿಯದ್ದು. ಕಾಂಗ್ರೆಸ್ ಪಕ್ಷದ ಐಕ್ಯತೆಯ ಹಾಗೂ ಅಭಿವೃದ್ಧಿಯ ಆಡಳಿತ ನೀಡಲಿದೆ. ಪ್ರಿಯಾಂಕ ಗಾಂಧಿ ಅವರೊಂದಿಗೆ ನಾನು ಹೇಳ ಬಯಸುತ್ತೇನೆ ಖಂಡಿತವಾಗಿಯೂ ಕರ್ನಾಟಕದ ಜನರು ಕಾಂಗ್ರೆಸ್ ಪಕ್ಷವನ್ನು ಗೆಲ್ಲಿಸುತ್ತಾರೆ ಹಾಗೂ ಈ ಹೋರಾಟಕ್ಕೆ ಜಯ ನೀಡಲಿದ್ದಾರೆ” ಎಂದು ಇನಾಯತ್ ಅಲಿ ಮಾತನಾಡಿದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
44
News Karnataka Kannada

The most exciting, trusted and preferred news websites of Karnataka and Kannadigas around the world.

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು