News Karnataka Kannada
Tuesday, April 30 2024
ಮಂಗಳೂರು

ಬಂಟ್ವಾಳ: ಆಲಾಡಿ ಜಾಕ್ ವೆಲ್ ಗೆ ಸಚಿವ ಬೈರತಿ ಬಸವರಾಜ್ ಭೇಟಿ

Urban Development Minister Byrathi Basavaraj visits jackwell constructed at Aladi
Photo Credit : News Kannada

ಬಂಟ್ವಾಳ: ಮಂಗಳೂರು ಕ್ಷೇತ್ರ ಹಾಗೂ ಬಂಟ್ವಾಳ ಕ್ಷೇತ್ರದ ಹಲವು ಗ್ರಾಮಗಳಿಗೆ ಕುಡಿಯುವ ನೀರು ಒದಗಿಸುವ ಯೋಜನೆಯ ಪೈಪ್ ಲೈನ್ ಕಾಮಗಾರಿ ಗೊಂದಲ ದ ಹಿನ್ನೆಲೆಯಲ್ಲಿ ಬಂಟ್ವಾಳ ವಿಧಾನ ಸಭಾ ಕ್ಷೇತ್ರದ ಸಜೀಪ ಮುನ್ನೂರು ಗ್ರಾ.ಪಂ. ವ್ಯಾಪ್ತಿಯ ಆಲಾಡಿಯಲ್ಲಿ ನಿರ್ಮಾಣ ಗೊಂಡಿರುವ ಜಾಕ್ ವೆಲ್ ಗೆ ನಗರಾಭಿವೃದ್ದಿ ಸಚಿವ ಬೈರತಿ ಬಸವರಾಜ್ ಬೇಟಿ ನೀಡಿ ಅಧಿಕಾರಿಗಳು ಹಾಗೂ ಗ್ರಾ.ಪಂ.ಸದಸ್ಯರ ಜೊತೆ ಸಮಾಲೋಚನೆ ನಡೆಸಿದರು.

ಸಜೀಪ ಮುನ್ನೂರು ಸೇರಿದಂತೆ 5 ಗ್ರಾ.ಪಂ.ವ್ಯಾಪ್ತಿಗೆ ಕುಡಿಯುವ ನೀರು ಒದಗಿಸುವ ನಿಟ್ಟಿನಲ್ಲಿ ಬಂಟ್ವಾಳ ‌ಶಾಸಕ ರಾಜೇಶ್ ನಾಯ್ಜ್ ಅವರ ವಿಶೇಷ ಪ್ರಯತ್ನ ದಿಂದ 279 ಕೋಟಿ ರೂ ಗಳು ಮಂಜೂರಾಗಿದ್ದು, ಅದರ ಅನುಷ್ಠಾನ ಕೊಂಚ ವಿಳಂಬವಾಗುವುದರಿಂದ , ಈ ಗ್ರಾಮದ ಜನತೆಗೆ ಕುಡಿಯುವ ನೀರು ತತಕ್ಷಣ ನೀಡಲು ಕರೋಪಾಡಿ ಬಹುಗ್ರಾಮ ಕುಡಿಯುವ ನೀರಿನ ಯೋಜನೆ ಯಿಂದ ನೀರು ಶುದ್ದೀಕರಣಕ್ಕಾಗಿ ಪಿಲ್ಟರ್ ಅಳವಡಿಸಿ, 0.2 ಎಂ.ಎಲ್.ಡಿ. ನೀರನ್ನು ಸಜೀಪ ಮುನ್ನೂರು ಗ್ರಾಮಕ್ಕೆ ನೀಡುವಂತೆ ಸಚಿವರು ಅಧಿಕಾರಿಗಳಿಗೆ ಸೂಚಿಸಿದರು.

ಜತೆಗೆ ಉಳ್ಳಾಲ ಹಾಗೂ ಬಂಟ್ವಾಳದ ಹಲವು ಗ್ರಾಮಗಳಿಗೆ ನೀರನ್ನು ಒದಗಿಸುವ ಕಚ್ಚಾನೀರು ಹಾಗೂ ಶುದ್ದೀಕರಣ ದ ನೀರಿನ ಪೈಪ್ ಲೈನ್ , ಅಳವಡಿಕೆ ಗೆ ಅವಕಾಶ ನೀಡುವ ನಿಟ್ಟಿನಲ್ಲಿ ಅನುಮತಿ ನೀಡಲು ಗ್ರಾ.ಪಂ.ಗೆ ಮನವರಿಕೆ ಮಾಡಿದರು .

ಈ ಸಂದರ್ಭದಲ್ಲಿ ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಮಾತನಾಡಿ, ಸಜೀಪ ಮುನ್ನೂರು ಗ್ರಾಮಕ್ಕೆ ಕುಡಿಯುವ ನೀರಿನ ವಿಚಾರದಲ್ಲಿ ಈ ಹಿಂದೆಯೂ ಅನ್ಯಾಯವಾಗಿ ರುವುದು ನಮಗೆ ತಿಳಿದಿದ್ದು, ಈಗಾಗಿ ಸತತ ಎರಡು ವರ್ಷಗಳ ಕಾಲ ಹೋರಾಟ ಮಾಡಿ, 279 ಕೋಟಿ ರೂ ಗಳ ಯೋಜನೆ ಮಂಜೂರು ಮಾಡಿಸಲಾಗಿದೆ, ಇದು ಬಂಟ್ವಾಳ ದ ಐದು ಗ್ರಾ.ಪಂ ಗಳಿಗೆ ಶಾಶ್ವತ ನೀರಿನ ಯೋಜನೆ ಯಾಗಿದೆ . ಆದರೆ ತತಕ್ಷಣದ ಪರಿಹಾರಕ್ಕಾಗಿ ಕೊಳವೆ ಬಾವಿ ಕೊರೆದರು ನೀರು ಸಿಗದೆ ಇರುವದುದರಿಂದ ಸಮಸ್ಯೆಯನ್ನು ಬಗೆಹರಿಸುವ ನಿಟ್ಟಿನಲ್ಲಿ ಸಚಿವರನ್ನು ಸ್ಥಳಕ್ಕೆ ಕರೆಯಿಸಿ, ಗ್ರಾ.ಪಂ.ಅಧ್ಯಕ್ಷ ರು ಹಾಗೂ ಸದಸ್ಯರ ಎದುರಿನಲ್ಲಿ, ಮಾತುಕತೆ ನಡೆಸಲಾಗಿದೆ .

ಜತೆಗೆ ತಕ್ಷಣ ದ ಪರಿಹಾರಕ್ಕಾಗಿ ಬಹುಗ್ರಾಮ ಕುಡಿಯುವ ನೀರಿನ ಯೋಜನೆಯಿಂದ ನೀರನ್ನು ಪಡೆಯಲು, ಸಂಬಂಧ ಪಟ್ಟ, ಅಧಿಕಾರಿಗಳಿಗೆ ಸಚಿವರು, ಸೂಚನೆಯನ್ನು ನೀಡಿದ್ದಾರೆ.

ಆಲಾಡಿ ಪ್ಲಾಂಟೇಷನ್ ಗೆ ಬೇಟಿ ನೀಡಿ ಸಮಾಲೋಚನೆ ನಡೆಸಿ ದ ಬಳಿಕ ಸಚಿವರು ಹಾಗೂ ಶಾಸಕರು ಅಧಿಕಾರಿಗಳ ಜೊತೆ ಮುಡಿಪುವಿನಲ್ಲಿ ನಿರ್ಮಾಣ ಗೊಂಡಿರುವ ಶುದ್ದೀಕರಣ ಘಟಕಕ್ಕೆ ಬೇಟಿ ಪರಿಶೀಲನೆ ನಡೆಸಿದರು.

ಈ ಸಂದರ್ಭದಲ್ಲಿ ಗ್ರಾ.ಪಂ‌.ಅಧ್ಯಕ್ಷೆ ಸಬೀನಾ, ಗ್ರಾಮದ ಪ್ರಮುಖರಾದ ಶ್ರೀಕಾಂತ್ ಶೆಟ್ಟಿ ಸಜೀಪ, ಸಂತೋಷ್ ಶೆಟ್ಟಿ ದಳಂದಿಲ, ಕರ್ನಾಟಕ ನೀರು ಸರಬರಾಜು ಮತ್ತು ಒಳಚರಂಡಿ ನಿಗಮದ ಕಾರ್ಯಪಾಲಕ ಅಭಿಯಂತರರು ಚಂದ್ರಶೇಖರ, ಸಹಾಯಕ ಇಂಜಿನಿಯರ್ ಶೋಭಾಲಕ್ಮೀ, ಎ.ಇ.ಇ. ಜಿ.ಕೆ.ನಾಯ್ಕ್ , ಸಹಾಯಕ ಇಂಜಿನಿಯರ್ ಜಗದೀಶ್ ನಿಂಬಾಲ್ಕರ್, ಇ.ಒ.ರಾಜಣ್ಣ, ಸಜೀಪ ಮುನ್ನೂರು ಪಿಡಿಒ ಲಕ್ಷಣ್, ಸಜೀಪ ಮೂಡ ಪಿ.ಡಿಒ ಮಾಯಕುಮಾರಿ, ಕಂದಾಯ ನಿರೀಕ್ಷಕಿ ಸ್ವಾತಿ ಮತ್ತಿತರರು ಉಪಸ್ಥಿತರಿದ್ದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12792
News Karnataka Kannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು