Categories: ಮಂಗಳೂರು

ಉರುಡಾಯಿ ಶ್ರೀ ಮುಖ್ಯಪ್ರಾಣ ಸ್ವಾಮಿ ದೇವಸ್ಥಾನ: ಮೇ 20-22: ಪುನರ್ ಪ್ರತಿಷ್ಠಾ ಬ್ರಹ್ಮಕಲಶೋತ್ಸವ

ಬಂಟ್ವಾಳ: ಬಂಟ್ವಾಳ ತಾ. ಕುಡಂಬೆಟ್ಟು ಗ್ರಾಮದ ಉರುಡಾಯಿ ಶ್ರೀ ಮುಖ್ಯಪ್ರಾಣ ಸ್ವಾಮಿ ದೇವಸ್ಥಾನ ಸುಮಾರು 1.50 ಕೋ.ರೂ.ವೆಚ್ಚದಲ್ಲಿ ಶಿಲಾಮಯವಾಗಿ ಪುನರ್ ನಿರ್ಮಾಣಗೊಂಡಿದ್ದು, ಉಡುಪಿ ಸೋದೆ ವಾದಿರಾಜ ಮಠ ಹಾಗೂ ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಅವರ ಮಾರ್ಗದರ್ಶನದಲ್ಲಿ ವೇ.ಮೂ.ನಡ್ವಂತಾಡಿ ಬಾಲಕೃಷ್ಣ ಪಾಂಗಣ್ಣಾಯ ಅವರ ಪೌರೋಹಿತ್ಯದಲ್ಲಿ ಮೇ 20ರಿಂದ ಮೇ 22ರವರೆಗೆವ ಶ್ರೀ ಮುಖ್ಯಪ್ರಾಣ ದೇವರ ಪುನರ್ ಪ್ರತಿಷ್ಠೆ ಹಾಗೂ ಬ್ರಹ್ಮಕಲಶೋತ್ಸವ ನಡೆಯಲಿದೆ.

ಶ್ರೀ ಕ್ಷೇತ್ರದ ಬ್ರಹ್ಮಕಲಶೋತ್ಸವ ಸಮಿತಿ ಗೌರವಾಧ್ಯಕ್ಷ ಎಂ.ತುಂಗಪ್ಪ ಬಂಗೇರ ಅವರು ಮಂಗಳವಾರ ಶ್ರೀ ಕ್ಷೇತ್ರದಲ್ಲಿ ಕರೆದ ಪತ್ರಿಕಾ ಗೋಷ್ಠಿಯಲ್ಲಿ ವಿವರ ನೀಡಿದರು.

ಕ್ಷೇತ್ರದ ಹಿನ್ನೆಲೆ: ತುಳುನಾಡಿನ, ಪ್ರಕೃತಿಯ ರಮಣೀಯ ಮಡಿಲಲ್ಲಿ, ಸುಮಾರು ಐದು ಶತಮಾನಗಳಿಂದ ಮೂಲ ಕುಂಞ ಕಾಯರ ವಂಶಸ್ಥರಿಂದ ಪೂಜಿಸಿಕೊಂಡು ಬಂದಿರುವ ಉರಾಡಾಯಿ ಶ್ರೀ ಮುಖ್ಯಪ್ರಾಣ ಸ್ವಾಮಿಯ ಸನ್ನಿಧಿಯು ಭಕ್ತರ ಪಾಲಿಗೆ ನಿಜಕ್ಕೂ ಅಭಯದಾಯಕ, ಈ ಪುಣ್ಯಕ್ಷೇತ್ರವು ವಗ್ಗ, ಕಾಡಬೆಟ್ಟು ರಸ್ತೆಯಿಂದ ಸುಮಾರು 3.7 ಕಿ.ಮೀ ದೂರದಲ್ಲಿ, ವಾಮದಪದವಿನಿಂದ 3 ಕಿ.ಮೀ ದೂರದಲ್ಲಿದೆ.

ಊರ ಪರವೂರ ಭಕ್ತರೆಲ್ಲರೂ ಸೇರಿಕೊಂಡು ಅನೂಚಾನವಾಗಿ ಶ್ರೀ ದೇವರ ಆರಾಧನೆಯು ವಿದ್ಯುಕ್ತವಾಗಿ, ನಿರಂತರ ನಡೆದುಕೊಂಡು ಬಂದಿರುತ್ತದೆ. ಊರ-ಪರವೂರ ದಾನಿಗಳ ಸಹಕಾರದಿಂದ ನಿತ್ಯಪೂಜೆ-ಪುನಸ್ಕಾರ ವಾರ್ಷಿಕ ಜಾತ್ರಾ ಮಹೋತ್ಸವಗಳು ಸಾಂಗವಾಗಿ, ನಡೆಯುತ್ತಿರುವುದು. ಶ್ರೀ ಮುಖ್ಯಪ್ರಾಣ ಸ್ವಾಮಿಯ ದಿವ್ಯ ಸಾನಿಧ್ಯದಲ್ಲಿ ಭಕ್ತಿಪೂರ್ವಕವಾಗಿ ರಂಗಪೂಜೆಯ ಸೇವೆಯನ್ನು ಭಕ್ತರು ನಡೆಸಿಕೊಂಡಲ್ಲಿ, ಶ್ರೀ ದೇವರು ವಿಶೇಷ ಅನುಗ್ರಹವನ್ನು ನೀಡಿ ಅವರ ಇಷ್ಟಾರ್ಥಗಳನ್ನು ನೇರವೇರಿಸಿದ ಪ್ರತೀತಿ ಈ ಪುಣ್ಯಕ್ಷೇತ್ರಕ್ಕಿದೆ. ಅದಲ್ಲದೆ ಶ್ರೀ ಮುಖ್ಯಪ್ರಾಣ ಸ್ವಾಮಿಗೆ ಅತ್ಯಂತ ಪ್ರಿಯವಾದ ಸೀಯಾಳಾಭಿಷೇಕದ ಸೇವೆಯು ಪ್ರತೀ ಶನಿವಾರದಂದು ವಿಶೇಷವಾಗಿ ನಡೆಯುತ್ತಿದೆ, ಕಾರಣಿಕಕ್ಕೆ ಮನೆಮಾತಾಗಿರುವ ಶ್ರೀ ಮುಖ್ಯಪ್ರಾಣ ಸ್ವಾಮಿಯು ನಯನ ಮನೋಹರ ದಿವ್ಯಮೂರ್ತಿಯು ಉರುಡಾಯಿಯಲ್ಲಿ, ಶಾಂತಾಕಾರವಾಗಿ ನೆಲೆಗೊಂಡು ಭಕ್ತಾದಿಗಳ ಮನಸ್ಸಿಗೆ ಮುದವನ್ನು ನೀಡುತ್ತಿರುವುದು ಇಲ್ಲಿನ ಮತ್ತೊಂದು ವಿಶೇಷತೆ.

ಅತ್ಯಂತ ಪ್ರಾಚೀನವಾದ ಈ ದೇವಸ್ಥಾನವು ಜೀರ್ಣಾವಸ್ಥೆಯಲ್ಲಿದ್ದಾಗ ದೇವಸ್ಥಾನವನ್ನು ಪುನರ್ ನವೀಕರಣಗೊಳಿಸಬೇಕೆಂದು ಭಕ್ತಾದಿಗಳು ನಿಶ್ಚಯಿಸಿದಂತೆ, ಬಲೂರು ಮುರಳೀಧರ ತಂತ್ರಿಅವರ ನೇತೃತ್ವದಲ್ಲಿ ನಡೆದ ಆರೂಢಪ್ರಶ್ನಾ ಚಿಂತನೆಯ ಪ್ರಕಾರ ದೇವಾಲಯದ ಜೀರ್ಣೋದ್ಧಾರ ಕಾರ್ಯ ನಡೆಸಲಾಗಿದೆ. ದೇವಸ್ಥಾನದ ಶಿಲಾಮಯ ಗರ್ಭಗುಡಿ, ಕೂಡು ಮಂಟಪದ ಮೇಲ್ಛಾವಣಿಯ ತಾಮ್ರದ ಹೊದಿಕೆ, ಸುತ್ತು ಪೌಳಿ, ಸಾನಿಧ್ಯ ದೈವಗಳಿಗೆ ಪ್ರತ್ಯೇಕ ಕಟ್ಟೆಗಳು, ಪಾಕಶಾಲೆ, ತೀರ್ಥ ಬಾವಿ, ನಾಗನಕಟ್ಟೆ, ಅರ್ಚಕರ ಕೊಠಡಿ, ತಡೆಗೋಡೆ, ಶೌಚಾಲಯದ ವ್ಯವಸ್ಥೆ ಮತ್ತು ದೇವಸ್ಥಾನಕ್ಕೆ ಬರುವ ರಸ್ತೆಯ ಅಭಿವೃದ್ಧಿ ಕಾರ್ಯಗಳು ನಡೆದಿದೆ. ಊರ-ಪರವೂರ ಭಕ್ತಾಭಿಮಾನಿಗಳ ಉದಾರ ದೇಣಿಗೆಯ ಜೊತೆಜೊತೆಗೆ ಜಾಗದಾನ, ಶ್ರಮದಾನ, ಹೀಗೆ ಹಲವು ಬಗೆಯ ಸಹಕಾರಗಳೊಂದಿಗೆ ಶ್ರೀ ಮುಖ್ಯಪ್ರಾಣ ಸ್ವಾಮಿಯ ದೇವಸ್ಥಾನದ ಜೀರ್ಣೋದ್ಧಾರದ ಕೆಲಸ ಕಾರ್ಯಗಳು ನಡೆದಿದ್ದು, ಪುನರ್ ಪ್ರತಿಷ್ಠಾ ಬ್ರಹ್ಮಕಲಶೋತ್ಸವದ ಸಂಭ್ರಮದಲ್ಲಿದೆ.

ಮೇ 20ರಂದು ಬೆಳಗ್ಗೆ ತೋರಣ ಮುಹೂರ್ತ, ವಿವಿಧ ವೈದಿಕ ಕಾರ್ಯಕ್ರಮಗಳುಮಧ್ಯಾಹ್ನ ೩ ಗಂಟೆಯಿಂದ ವಿವಿಧೆಡೆಯಿಂದ ಸಂಗ್ರಹಿಸಿದ ಹಸಿರು ಹೊರೆ ಕಾಣಿಕೆ ಸಮರ್ಪಣೆಯ ಮೆರವಣಿಗೆ ರಾಮೊಟ್ಟು ಮೈದಾನದಿಂದ ದೇವಸ್ಥಾನಕ್ಕೆ ಆಗಮಿಸಲಿದೆ. ಸಂಜೆ ನಡೆಯುವ ಧಾರ್ಮಿಕ ಸಭೆಯನ್ನು ಶ್ರೀ ಕ್ಷೇತ್ರಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ.ವೀರೇಂದ್ರ ಹೆಗ್ಗಡೆ ಅವರು ಉದ್ಘಾಟಿಸಲಿರುವರು.ಒಡಿಯೂರು ಶ್ರೀ ಗುರುದೇವಾನಂದ ಸ್ವಾಮೀಜಿ ಅವರು ಆಶೀರ್ವಚನ ನೀಡಲಿರುವರು. ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು, ಮಾಜಿ ಸಚಿವ ಬಿ.ರಮಾನಾಥ ರೈ, ಮೂಡುಬಿದಿರೆ ಆಳ್ವಾಸ್ ಶಿಕ್ಷಣ ಸಂಸ್ಥೆಯ ಅಧ್ಯಕ್ಷ ಡಾ.ಮೋಹನ ಆಳ್ವ, ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ಮತ್ತಿತರರು ಭಾಗವಹಿಸಲಿರುವರು.

ಬಳಿಕ ತಾಂಬೂಲ ಕಲಾವಿದರಿಂದ ಪರಿಮಳ ಕಾಲೊನಿ ನಾಟಕ ನಡೆಯಲಿದೆ. ಮೇ 21ರಂದು ಬೆಳಗ್ಗೆ 9.10ರ ಮಿಥುನ ಲಗ್ನದಲ್ಲಿ ಶ್ರೀ ದೇವರ ಬಿಂಬ ಪ್ರತಿಷ್ಠೆ, ನಾಗದೇವರ ಪ್ರತಿಷ್ಠೆ, ಹಾಗೂ ದೈವಗಳ ಪ್ರತಿಷ್ಠೆ ನಡೆಯಲಿದೆ. ಮಧ್ಯಾಹ್ನ ಭಜನೆ, ವಿವಿಧ ವೈದಿಕ ಕಾರ್ಯಕ್ರಮಗಳು, ಸಂಜೆ ಮಕ್ಕಳಿಂದ ಸಾಂಸ್ಕೃತಿಕ ಕಾರ್ಯಕ್ರಮ,ನಾಟ್ಯ ವೈಭವ ನಡೆಯಲಿದೆ. ಬಳಿಕ ನಡೆಯುವ ಧಾರ್ಮಿಕ ಸಭೆಯಲ್ಲಿ ವಜ್ರದೇಹಿ ಮಠ ಶ್ರೀ ರಾಜಶೇಖರಾನಂದ ಸ್ವಾಮೀಜಿ ಮತ್ತು ಮಾಣಿಲ ಶ್ರೀ ಮೋಹನದಾಸ ಪರಮಹಂಸ ಸ್ವಾಮೀಜಿ ಅವರು ಆಶೀರ್ವಚನ ನೀಡಲಿರುವರು. ಪುತ್ತೂರು ವಿವೇಕಾನಂದ ವಿದ್ಯಾವರ್ಧಕ ಸಂಘದ ಸಂಚಾಲಕ ಡಾ. ಪ್ರಭಾಕರ ಭಟ್ ಕಲ್ಲಡ್ಕ ಉದ್ಘಾಟಿಸಲಿರುವರು.

ವಿಧಾನ ಪರಿಷತ್ ಸದಸ್ಯರಾದ ಪ್ರತಾಪ ಸಿಂಹ ನಾಯಕ್, ಮಂಜುನಾಥ ಭಂಡಾರಿ, ಹರೀಶ್ ಕುಮಾರ್ ಮತ್ತಿತರರು ಭಾಗವಹಿಸಲಿರುವರು. ಬಳಿಕ ಶಾರದಾ ಆರ್ಟ್ಸ್ ಕಲಾವಿದರಿಂದ ಯಾನ್ ಉಲ್ಲೆತ್ತಾ ತುಳು ನಾಟಕ ನಡೆಯಲಿದೆ. ಮೇ 22ರಂದು ಬೆಳಗ್ಗೆ 10.30 ಕ್ಕೆ ಬ್ರಹ್ಮ ಕಲಶಾಭಿಷೇಕ ನಡೆಯಲಿದೆ. ಬಳಿಕ ಧಾರ್ಮಿಕ ಸಭೆ ನಡೆಯಲಿದ್ದು, ಉಡುಪಿ ಸೋದೆ ವಾದಿರಾಜ ಮಠದ ಶ್ರೀ ವಿಶ್ವವಲ್ಲಭ ತೀರ್ಥ ಸ್ವಾಮೀಜಿ ಆಶೀರ್ವಚನ ನೀಡಲಿರುವರು. ಸಂಸದ ನಳಿನ್ ಕುಮಾರ್ ಕಟೀಲು ಉದ್ಘಾಟಿಸುವರು. ವಿಧಾನ ಪರಿಷತ್ ಸದಸ್ಯ ಕೋಟ ಶ್ರೀನಿವಾಸ ಪೂಜಾರಿ ಅಧ್ಯಕ್ಷತೆ ವಹಿಸುವರು. ಕಾರ್ಕಳ ಶಾಸಕ ಸುನಿಲ್ ಕುಮಾರ್, ಮಾಜಿ ಸಚಿವ ಬಿ.ನಾಗರಾಜ ಶೆಟ್ಟಿ ಮತ್ತಿತರ ಗಣ್ಯರು ಭಾಗವಹಿಸಲಿರುವರು. ಬಳಿಕ ವಿಟ್ಠಲ ನಾಯಕ್ ಬಳಗದವರಿಂದ ಗೀತಾ ಸಾಹಿತ್ಯ ಸಂಭ್ರಮ, ರಂಗ ಪೂಜೆ, ರಾತ್ರಿ ಪರಿವಾರ ದೈವಗಳಿಗೆ ನೇಮೋತ್ಸವ ನಡೆಯಲಿದೆ ಎಂದು ಅವರು ಹೇಳಿದರು.

ಜೀರ್ಣೋದ್ಧಾರ ಸಮಿತಿ ಅಧ್ಯಕ್ಷ ಅಮ್ಮು ರೈ ಹರ್ಕಾಡಿ, ಬ್ರಹ್ಮಕಲಶೋತ್ಸವ ಸಮಿತಿ ವೀರೇಂದ್ರ ಅಮೀನ್ ವಗ್ಗ, ಕೋಶಾಽಕಾರಿ ಜಯರಾಮ ಕುಲಾಲ್ , ಸಂತೋಷ್ ಕುಮಾರ್ ಜೈನ್ ಮೇಗಿನ ಕಾಡಬೆಟ್ಟು , ದಯಾನಂದ ಕುಲಾಲ್, ಸುರೇಶ್ ಉರುಡಾಯಿ ಮತ್ತಿತರರು ಉಪಸ್ಥಿತರಿದ್ದರು.

Ashika S

Recent Posts

ಚಿರಂಜೀವಿ, ನಟಿ ವೈಜಯಂತಿಮಾಲಾ ಸೇರಿ ಹಲವು ಸಾಧಕರಿಗೆ ಪದ್ಮ ಪ್ರಶಸ್ತಿ ಪ್ರದಾನ

ತೆಲುಗು ನಟ ಕೊನಿಡೆಲಾ ಚಿರಂಜೀವಿ, ಹಿರಿಯ ನಟಿ ವೈಜಯಂತಿಮಾಲಾ ಬಾಲಿ,  ಸುಪ್ರೀಂ ಕೋರ್ಟ್‍ನ ಮೊದಲ ಮಹಿಳಾ ನ್ಯಾಯಾಧೀಶೆ ದಿ.ಎಂ ಫಾತಿಮಾ…

7 hours ago

ಏರ್ ಇಂಡಿಯಾ ಸಿಬ್ಬಂದಿಯ ಪ್ರತಿಭಟನೆ ಅಂತ್ಯ: ಕೆಲಸಕ್ಕೆ ಮರಳುವಂತೆ ಕಂಪನಿ ಆದೇಶ

ಏರ್ ಇಂಡಿಯಾ  ವಿಮಾನ ಸಂಸ್ಥೆಯ ಉದ್ಯೋಗಿಗಳು ಹೇಳದೆ ಕೇಳದೆ ರಜಾ ಹಾಕಿದ್ದರಿಂದ ಇಂದು ಏರ್ ಇಂಡಿಯಾ ಎಕ್ಸ್‌ಪ್ರೆಸ್ 85 ವಿಮಾನಗಳನ್ನು…

7 hours ago

ಅತ್ಯುತ್ತಮ ಅಂಕ ಪಡೆದ ವಿದ್ಯಾರ್ಥಿಗಳಿಗೆ ಜಿಲ್ಲಾ ಪೋಲಿಸ್ ಅಧೀಕ್ಷಕರಿಂದ ಅಭಿನಂದನೆ

ರಾಜ್ಯ ಗೃಹ ಇಲಾಖೆಯ ಆಡಳಿತ ವ್ಯಾಪ್ತಿಯಲ್ಲಿನ ಧಾರವಾಡ ಶ್ರೀ ಎನ್.ಎ. ಮುತ್ತಣ್ಣ ಸ್ಮಾರಕ ಪೊಲೀಸ್ ಮಕ್ಕಳ ವಸತಿ ಶಾಲೆಯಲ್ಲಿ ಎಪ್ರಿಲ್-2024…

7 hours ago

ಬೀದರ್: ರಾಜಿ ಸಂಧಾನಕ್ಕೆ ಒಂದಾದ ಮೂವರು ದಂಪತಿ

ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರವು ನಗರದಲ್ಲಿ ಗುರುವಾರ ನಡೆಸಿದ ರಾಜಿ ಸಂಧಾನ ಯಶಸ್ವಿಯಾಗಿದ್ದು, ಮೂವರು ದಂಪತಿ ವಿರಸ ಮರೆತು ಒಂದಾಗಿದ್ದಾರೆ.

8 hours ago

ಭಾರತದಲ್ಲೂ ಕಪ್ಪು ಚರ್ಮದವರನ್ನು ಹೋಲುವ ಜನರಿದ್ದಾರೆ: ಅಧೀರ್ ರಂಜನ್ ಚೌಧರಿ

ಸ್ಯಾಮ್ ಪಿತ್ರೋಡಾ ಅವರ “ಜನಾಂಗೀಯ” ಹೇಳಿಕೆಯನ್ನು ಪಶ್ಚಿಮ ಬಂಗಾಳದ ಕಾಂಗ್ರೆಸ್ ಅಧ್ಯಕ್ಷ ಅಧೀರ್ ರಂಜನ್ ಚೌಧರಿ ಸಮರ್ಥಿಸಿಕೊಂಡಿದ್ದಾರೆ.

9 hours ago

ಶಿವಮೊಗ್ಗ ಗ್ಯಾಂಗ್​ವಾರ್​: ಗಾಯಗೊಂಡಿದ್ದ ಮತ್ತೊಬ್ಬ ಸಾವು

ಲಷ್ಕರ್ ಮೊಹಲ್ಲಾದ ಮೀನು ಮಾರುಕಟ್ಟೆ ಬಳಿ ಮೇ.08 ರಂದು ನಡೆದ ಗ್ಯಾಂಗ್ ವಾರ್ ನಲ್ಲಿ ಇಬ್ಬರು ರೌಡಿಗಳಾದ ಗೌಸ್ ಮತ್ತು…

9 hours ago