News Karnataka Kannada
Monday, April 29 2024
ಮಂಗಳೂರು

ಮಂಗಳೂರಿಗೂ ಬರಲಿದೆ ವಂದೇ ಭಾರತ್‌ ರೈಲು, ಶೋರ್ನೂರ್-ಮಂಗಳೂರು ಮಾರ್ಗದಲ್ಲಿ ಓಡಿಸಲು ಸಿದ್ಧತೆ

Man arrested for pelting stones at Vande Bharat
Photo Credit : Facebook

ಮಂಗಳೂರು: ಸೆಮಿ ಹೈ ಸ್ಪೀಡ್ ರೈಲು ವಂದೇ ಭಾರತ್ ಎಕ್ಸ್‌ಪ್ರೆಸ್ ಮಂಗಳೂರಿಗೆ ಆಗಮಿಸಲಿದೆ. ರೈಲು ಸಂಚಾರಕ್ಕೆ ಅಗತ್ಯ ಸಿದ್ಧತೆಗಳನ್ನು ಮಾಡಿಕೊಳ್ಳಲಾಗುತ್ತಿದ್ದು, ಮಂಗಳೂರು ಸೆಂಟ್ರಲ್ ರೈಲು ನಿಲ್ದಾಣದಲ್ಲಿ ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲು ನಿರ್ವಹಣೆಗಾಗಿ ಮೂಲಸೌಕರ್ಯ ಒದಗಿಸಲು ಟೆಂಡರ್ ಕರೆಯಲಾಗಿದೆ.

ರೈಲ್ವೆಯ ಪಾಲಕ್ಕಾಡ್ ವಿಭಾಗ ಮತ್ತು ದಕ್ಷಿಣ ರೈಲ್ವೆ ವಿಭಾಗ ಜಂಟಿಯಾಗಿ ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲು ನಿರ್ವಹಣೆಗಾಗಿ ಮೂಲಸೌಕರ್ಯ ಒದಗಿಸಲು ಟೆಂಡರ್ ಕರೆದಿದೆ. ಈ ಮೂಲಕ ಕರ್ನಾಟಕದ ಕರಾವಳಿಗೆ ಭಾರತೀಯ ರೈಲ್ವೆಯ ಮೊದಲ ಸೆಮಿ ಹೈ ಸ್ಪೀಡ್ ರೈಲು ವಂದೇ ಭಾರತ್ ಎಕ್ಸ್‌ಪ್ರೆಸ್ ಆಗಮಿಸಲು ತಯಾರಿ ನಡೆದಿದೆ.

2023ರ ಆಗಸ್ಟ್‌ಗಾಗುವಾಗ 75 ಮಾರ್ಗದಲ್ಲಿ ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲು ಓಡಿಸುವ ಗುರಿಯನ್ನು ಕೇಂದ್ರ ಸರ್ಕಾರ ಹೊಂದಿದೆ. ಇದರ ಭಾಗವಾಗಿ ಕೇರಳದ ಎರಡು ಮಾರ್ಗದಲ್ಲಿ ರೈಲು ಓಡಿಸಲು ಪರಿಶೀಲನೆ ನಡೆದಿದೆ. ವಂದೇ ಭಾರತ್ ರೈಲುಗಳನ್ನು ಚೆನ್ನೈನ ಪೆರಂಬೂರ್‌ನ ಸಮಗ್ರ ಕೋಚ್ ಫ್ಯಾಕ್ಟರಿಯಲ್ಲಿ ಉತ್ಪಾದಿಸಲಾಗುತ್ತಿದೆ.

ಶೋರ್ನೂರ್-ಮಂಗಳೂರು ಮಾರ್ಗದಲ್ಲಿ ವಂದೇ ಭಾರತ್ ರೈಲುಗಳನ್ನು ಓಡಿಸಲು ಚಿಂತನೆ ನಡೆಸಿದೆ. ಶೋರ್ನೂರ್ ಕಣ್ಣೂರು ನಗರದಲ್ಲಿದೆ, ಇಲ್ಲಿಗೆ ಆಗಮಿಸುವ ರೈಲನ್ನು ಮಂಗಳೂರು ಸೆಂಟ್ರಲ್ ತನಕ ವಿಸ್ತರಣೆ ಮಾಡಲಾಗುತ್ತದೆ. ಈ ಎರಡೂ ಮಾರ್ಗದಲ್ಲಿ ಗಂಟೆಗೆ 130 ಕಿ. ಮೀ. ವೇಗದಲ್ಲಿ ರೈಲು ಓಡಿಸಲು ಬೇಕಾದ ಕೆಲವು ಕಾಮಗಾರಿಗಳನ್ನು ಈಗಾಗಲೇ ಆರಂಭಿಸಲಾಗಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
1616

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು