News Karnataka Kannada
Saturday, April 27 2024
ಮಂಗಳೂರು

ಯೆನೆಪೋಯ ವಿಶ್ವವಿದ್ಯಾಲಯದಲ್ಲಿ ವನಮಹೋತ್ಸವ ಕಾರ್ಯಕ್ರಮ

Vanmahotsava Program at Yenepoya University
Photo Credit : News Kannada

ಮಂಗಳೂರು: ದೇರಳಕಟ್ಟೆಯ ಯೆನೆಪೋಯ ವಿಶ್ವವಿದ್ಯಾಲಯದ ಪರಿಸರ ಅಧ್ಯಯನ ಕೇಂದ್ರದ ವತಿಯಿಂದ 14.07.2023 ರಂದು ವನಮಹೋತ್ಸವ ಕಾರ್ಯಕ್ರಮ ಆಚರಿಸಲಾಯಿತು.

ಯೆನೆಪೋಯ ಡೆಂಟಲ್ ಕಾಲೇಜಿನ ಪ್ರಾಂಶುಪಾಲರಾದ ಡಾ. ಲಕ್ಷ್ಮಿಕಾಂತ ಚಾತ್ರಾರವರು ಸಸಿ ನೆಡುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.

ಅರಣ್ಯ ಇಲಾಖೆಯಿಂದ ಮಾವು, ಹಲಸು, ಹೊಂಗೆ ಇತ್ಯಾದಿ ಸಸಿಗಳನ್ನು ತಂದು ವಿಶ್ವವಿದ್ಯಾಲಯದ ಶಿಕ್ಷಕರಿಗೆ ಹಾಗು ವಿದ್ಯಾರ್ಥಿಗಳಿಗೆ ಹಂಚಲಾಯಿತು. ಬದನೆ, ಸೌತೆಕಾಯಿ, ಹೀರೆಕಾಯಿ, ಸೋರೆಕಾಯಿ, ಅಲಸಂಡೆ, ಬೆಂಡೆಕಾಯಿ ಮುಂತಾದ ತರಕಾರಿ ಬೀಜಗಳನ್ನು ಹಾಗು ವಿಶ್ವವಿದ್ಯಾಲಯದ ಆವರಣದಲ್ಲಿರುವ ಅನೇಕ ರೀತಿಯ ಹೂವಿನ ಮತ್ತು ಕ್ರೊಟಾನ್ ಸಸ್ಯಗಳ ಕಟ್ಟಿಂಗ್ಸ್ ಗಳನ್ನು ವಿತರಿಸಲಾಯಿತು. ಪರಿಸರ ಅಧ್ಯಯನ ಕೇಂದ್ರದ ಉಪ ನಿರ್ದೇಶಕಿ ಡಾ. ಭಾಗ್ಯ ಬಿ. ಶರ್ಮ ಕಾರ್ಯಕ್ರಮವನ್ನು ಆಯೋಜಿಸಿದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12792
News Karnataka Kannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು