ಮಂಗಳೂರು: ದೇರಳಕಟ್ಟೆಯ ಯೆನೆಪೋಯ ವಿಶ್ವವಿದ್ಯಾಲಯದ ಪರಿಸರ ಅಧ್ಯಯನ ಕೇಂದ್ರದ ವತಿಯಿಂದ 14.07.2023 ರಂದು ವನಮಹೋತ್ಸವ ಕಾರ್ಯಕ್ರಮ ಆಚರಿಸಲಾಯಿತು.
ಯೆನೆಪೋಯ ಡೆಂಟಲ್ ಕಾಲೇಜಿನ ಪ್ರಾಂಶುಪಾಲರಾದ ಡಾ. ಲಕ್ಷ್ಮಿಕಾಂತ ಚಾತ್ರಾರವರು ಸಸಿ ನೆಡುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.
ಅರಣ್ಯ ಇಲಾಖೆಯಿಂದ ಮಾವು, ಹಲಸು, ಹೊಂಗೆ ಇತ್ಯಾದಿ ಸಸಿಗಳನ್ನು ತಂದು ವಿಶ್ವವಿದ್ಯಾಲಯದ ಶಿಕ್ಷಕರಿಗೆ ಹಾಗು ವಿದ್ಯಾರ್ಥಿಗಳಿಗೆ ಹಂಚಲಾಯಿತು. ಬದನೆ, ಸೌತೆಕಾಯಿ, ಹೀರೆಕಾಯಿ, ಸೋರೆಕಾಯಿ, ಅಲಸಂಡೆ, ಬೆಂಡೆಕಾಯಿ ಮುಂತಾದ ತರಕಾರಿ ಬೀಜಗಳನ್ನು ಹಾಗು ವಿಶ್ವವಿದ್ಯಾಲಯದ ಆವರಣದಲ್ಲಿರುವ ಅನೇಕ ರೀತಿಯ ಹೂವಿನ ಮತ್ತು ಕ್ರೊಟಾನ್ ಸಸ್ಯಗಳ ಕಟ್ಟಿಂಗ್ಸ್ ಗಳನ್ನು ವಿತರಿಸಲಾಯಿತು. ಪರಿಸರ ಅಧ್ಯಯನ ಕೇಂದ್ರದ ಉಪ ನಿರ್ದೇಶಕಿ ಡಾ. ಭಾಗ್ಯ ಬಿ. ಶರ್ಮ ಕಾರ್ಯಕ್ರಮವನ್ನು ಆಯೋಜಿಸಿದರು.