News Karnataka Kannada
Sunday, May 12 2024
ಮಂಗಳೂರು

ವೀರಕಂಬ: ಟಿಪ್ಪರ್ – ಬೈಕ್ ಮಧ್ಯೆ ಅಪಘಾತ, ಚಿಕಿತ್ಸೆಯಲ್ಲಿದ್ದ ವ್ಯಕ್ತಿ ಮೃತ್ಯು

Veerakamba
Photo Credit : By Author

ಬಂಟ್ವಾಳ: ವೀರಕಂಬ ಗ್ರಾಮದ ಮಜಿ ಶಾಲಾ ಮುಂಭಾಗದಲ್ಲಿ ಟಿಪ್ಪರ್ ಲಾರಿ ಹಾಗೂ ಬೈಕ್ ನ ಮಧ್ಯೆ ನಡೆದ ಅಪಘಾತದಲ್ಲಿ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದ ಬೈಕ್ ಸವಾರರೋರ್ವರು ಚಿಕಿತ್ಸೆಗೆ ಸ್ಪಂಧಿಸದೆ ಮೃತಪಟ್ಟ ಘಟನೆ ನಡೆದಿದೆ.

ಮಾಣಿಲ ನಿವಾಸಿ ಮನೋಜ್ ಪೂಜಾರಿ (26 ವ.)ಮೃತ ದುರ್ದೈವಿ. ಮೃತರು ಅಮರ್‌ ಕನ್ಸ್ ಸ್ಟ್ರೆಕ್ಷನ್ ನಲ್ಲಿ ಸಿವಿಲ್ ಇಂಜಿನಿಯರ್ ಆಗಿ ಕೆಲಸ ನಿರ್ವಹಿಸುತ್ತಿದ್ದರು. ಡಿ.೩ರಂದು ರಾತ್ರಿ ವೇಳೆ ಅಪಘಾತ ಸಂಭವಿಸಿದೆ. ಅಪಘಾತದಿಂದಾಗಿ ಬೈಕ್ ಸಂಪೂರ್ಣವಾಗಿ ನಜ್ಜುಗುಜ್ಜಾಗಿತ್ತು.

ವಿಟ್ಲ ಕಡೆಯಿಂದ ಬಂದ ಟಿಪ್ಪರ್ ಲಾರಿ ಬೇರೊಂದು ವಾಹನವನ್ನು ಓವರ್ ಟೆಕ್ ಮಾಡುವ ಬರದಲ್ಲಿ ಬೈಕ್ ಗೆ ಡಿಕ್ಕಿಹೊಡೆದಿದೆ. ಡಿಕ್ಕಿಯ ರಭಸಕ್ಕೆ ರಸ್ತೆಗೆಸೆಯಲ್ಪಟ್ಟ ಮನೋಜ್ ರವರನ್ನು ಸ್ಥಳೀಯರು ಕೂಡಲೇ ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದರು.

ಅಲ್ಲಿ ಚಿಕಿತ್ಸೆಗೆ ಸ್ಪಂದಿಸದೆ ಮನೋಜ್ ರವರು ಡಿ.೪ರಂದು ಮೃತಪಟ್ಟರು ಎಂದು ತಿಳಿದುಬಂದಿದೆ. ಅಪಘಾತ ನಡೆದ ವೇಳೆ ರಸ್ತೆ ಬದಿಯಲ್ಲಿ ನಡೆದುಕೊಂಡು ಹೋಗುತ್ತಿದ್ದ ಪ್ರೇಮನಾಥ ಎಂಬವರಿಗೂ ಸಣ್ಣಪುಟ್ಟ ಗಾಯಗಳೊಂದಿಗೆ ಪಾರಾಗಿದ್ದಾರೆ. ಈ ಬಗ್ಗೆ ವಿಟ್ಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
153
Mounesh V

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು