ಮಂಗಳೂರು

ವೀರೇಂದ್ರ ಹೆಗ್ಗಡೆ ಅವರಿಂದ ‘ಮಂದಾರ’ ಪ್ರಾಯೋಗಿಕ ಪತ್ರಿಕೆ ಅನಾವರಣ

ಧರ್ಮಸ್ಥಳ: ಉಜಿರೆಯ ಎಸ್‌ಡಿಎಂ ಕಾಲೇಜಿನ ಬಿಬಿಎ ಮತ್ತು ಬಿಎ ವಿದ್ಯಾರ್ಥಿಗಳು ಆರಂಭಿಸಿರುವ ‘ಮಂದಾರ’ ಪ್ರಾಯೋಗಿಕ ಮಾಸಪತ್ರಿಕೆಯನ್ನು ಶ್ರೀಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ, ಎಸ್‌ಡಿಎಂ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷರಾದ ಡಾ.ಡಿ. ವೀರೇಂದ್ರ ಹೆಗ್ಗಡೆ ಅವರು ಬುಧವಾರ (ಫೆಬ್ರವರಿ.01) ದಂದು ಶ್ರೀಕ್ಷೇತ್ರದಲ್ಲಿ ಅನಾವರಣಗೊಳಿಸಿದರು.

ಬಳಿಕ ಪತ್ರಿಕೆಯ ಉದ್ದೇಶ, ರೂಪುರೇಷಗಳ ಬಗ್ಗೆ ಮಾಹಿತಿ ಪಡೆದು, ಶುಭಹಾರೈಸಿದರು. ಈ ಸಂದರ್ಭದಲ್ಲಿ ಉಜಿರೆಯ ಎಸ್‌ಡಿಎಂ ಪತ್ರಿಕೋದ್ಯಮ ವಿಭಾಗದ ಮುಖ್ಯಸ್ಥ ಡಾ.ಭಾಸ್ಕರ ಹೆಗಡೆ, ಎ.ಆರ್.ರಕ್ಷಿತ್ ರೈ, ಸಂಪಾದಕ ಚಂದನ್ ಭಟ್, ವ್ಯವಸ್ಥಾಪಕ ಸಂಪಾದಕ ಎಂ.ಎಸ್.ಶೋಭಿತ್ ಉಪಸ್ಥಿತರಿದ್ದರು.

‘ಮಂದಾರ’ ಸಂಪೂರ್ಣ ವರ್ಣಮಯ ಪುಟಗಳನ್ನು ಮತ್ತು ವಿಶೇಷ ವಿನ್ಯಾಸ ಹೊಂದಿರುವ ಮಾಸಪತ್ರಿಕೆಯಾಗಿದ್ದು, ಉಜಿರೆ ಎಸ್‌ಡಿಎಂ ಕಾಲೇಜಿನ ಪತ್ರಿಕೋದ್ಯಮ ವಿಭಾಗದ ಮಾರ್ಗದರ್ಶನದಲ್ಲಿ ಪ್ರಕಟಗೊಳ್ಳಲಿದೆ. ಸಾಹಿತ್ಯ, ಪರಿಸರ, ವಿಜ್ಞಾನ, ಪ್ರವಾಸ, ವಾಣಿಜ್ಯ ಮುಂತಾದ ವಿಷಯಗಳ ಕುರಿತು ವಿದ್ಯಾರ್ಥಿಗಳು ಮತ್ತು ಹೆಸರಾಂತ ಲೇಖಕರು ಬರೆದ ಲೇಖನಗಳು ಪ್ರಕಟಗೊಳ್ಳುತ್ತದೆ. ಮುದ್ರಣ ಮತ್ತು ಡಿಜಿಟಲ್ ಎರಡೂ ಆವೃತ್ತಿಯನ್ನು ಈ ಪತ್ರಿಕೆ ಹೊಂದಿದೆ. ಹೆಚ್ಚಿನ ಮಾಹಿತಿಗಾಗಿ ಓದುಗರು https://mandaramagazine.com ವೆಬ್‌ಸೈಟ್‌ಗೆ ಭೇಟಿ ನೀಡಬಹುದಾಗಿದೆ.

Gayathri SG

Recent Posts

ಜೂ.14 ರಿಂದ ಎಸ್ಎಸ್ಎಲ್ ಸಿ ಪರೀಕ್ಷೆ-2 ಪ್ರಾರಂಭ

ಮೇ.15 ರಿಂದ ಆರಂಭವಾಗಿದ್ದ ಎಸ್​ಎಸ್​ಎಲ್​ಸಿ ವಿಶೇಷ ಪರಿಹಾರ ಬೋಧನೆ ತರಗತಿಗಳನ್ನು ಮುಂದೂಡಿ, ಮೇ 29 ರಿಂದ ಜೂ.13ರವರೆಗೆ ನಡೆಸಲು‌ ರಾಜ್ಯ…

4 hours ago

ಟ್ರ್ಯಾಕ್ಟರ್ ಗೆ ಖಾಸಗಿ ಬಸ್ ಡಿಕ್ಕಿ: ಮೂವರ ದುರ್ಮರಣ

ಹುಲಿಗೆಮ್ಮ ದೇವಿ ದರ್ಶನ ಮುಗಿಸಿ ಟ್ರ್ಯಾಕ್ಟರ್​ನಲ್ಲಿ ಮನೆಗೆ ಹೋಗುವಾಗ ​ಹಿಂದಿನಿಂದ ಬಂದ ಖಾಸಗಿ ಬಸ್ ಡಿಕ್ಕಿ ಹೊಡೆದ ಘಟನೆ ಈಗ…

5 hours ago

ಬೀದರ್: ನರೇಗಾ ಕಾಮಗಾರಿ ಪರಿಶೀಲಿಸಿದ ಉಪ ಕಾರ್ಯದರ್ಶಿ

ಜಿಲ್ಲಾ ಪಂಚಾಯಿತಿ ಉಪ ಕಾರ್ಯದರ್ಶಿ ಬಿ.ಎಂ.ಸವಿತಾ ಅವರು ಬುಧವಾರ ತಾಲ್ಲೂಕಿನ ವಿವಿಧೆಡೆ ನಡೆಯುತ್ತಿರುವ ಮಹಾತ್ಮ ಗಾಂಧಿ ಉದ್ಯೋಗ ಖಾತರಿ (ನರೇಗಾ)…

5 hours ago

ಮನಿ ಲಾಂಡರಿಂಗ್ ಪ್ರಕರಣ: ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ ಆಲಂಗೀರ್ ಆಲಂ

ಮನಿ ಲಾಂಡರಿಂಗ್ ಕೇಸಿನಲ್ಲಿ ಬಂಧನಕ್ಕೊಳಗಾಗಿರುವ ಜಾರ್ಖಂಡ್​ನ ಕಾಂಗ್ರೆಸ್ ನಾಯಕ ಮತ್ತು ರಾಜ್ಯ ಗ್ರಾಮೀಣಾಭಿವೃದ್ಧಿ ಸಚಿವ ಆಲಂಗೀರ್ ಆಲಂ ಇಂದು ತಮ್ಮ…

5 hours ago

ಸರ್ಕಾರಿ ಆಸ್ಪತ್ರೆಯಲ್ಲಿ ರೋಗಿಗಳಿಗೆ ಸಕಾಲಕ್ಕೆ ಸಿಗದ ಔಷಧ: ಸಾರ್ವಜನಿಕರ ಆಕ್ರೋಶ

ಪಟ್ಟಣದ ಸಾರ್ವಜನಿಕ ಸರ್ಕಾರಿ ಆಸ್ಪತ್ರೆಯಲ್ಲಿ ಬಡಜನರಿಗೆ ಸಕಾಲಕ್ಕೆ ಸಿಗಬೇಕಾದ ಸೇವೆಯು ಮರೀಚಿಕೆಯಾಗಿ ಹೋಗಿದೆ. ಚಿಕಿತ್ಸೆಗೆ ಆಸ್ಪತ್ರೆಗೆ ಬಂದ ರೋಗಿಗಳು ವೈದ್ಯರಿಗಾಗಿ…

5 hours ago

ಪದವೀಧರರ ಸಮಸ್ಯೆಗೆ ಸ್ಪಂದಿಸಿದ ಕಾಂಗ್ರೆಸ್ ಅಭ್ಯರ್ಥಿಯನ್ನು ಬೆಂಬಲಿಸಿ: ಡಾ. ಶಿಂಧೆ

ಪದವೀಧರರ ಸಮಸ್ಯೆಗೆ ಸ್ಪಂದಿಸುವ ಹಾಗೂ ಸದಾ ಸಂಪರ್ಕಕ್ಕೆ ಸಿಗುವಂಥ ಸೂಕ್ತ ಮತ್ತು ಸಮರ್ಥ ಕಾಂಗ್ರೆಸ್ ಅಭ್ಯರ್ಥಿಯಾದ ಡಾ. ಚಂದ್ರಶೇಖರ್ ಪಾಟೀಲ್…

6 hours ago