ಮೂಡುಬಿದಿರೆ: ಬಿಜೆಪಿಯ ವಿಜಯೋತ್ಸವದ ವೇಳೆ ಬಿಜೆಪಿ ಕಾರ್ಯಕರ್ತರು ಕಾಂಗ್ರೆಸ್ ಕಾರ್ಯಕರ್ತರೊಬ್ಬರ ಮೇಲೆ ಹಲ್ಲೆ ನಡೆಸಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ.
ಭಾನುವಾರ ಸಂಜೆ ತೆಂಕಮಿಜಾರು ಬಳಿ ಬಿಜೆಪಿಯ ವಿಜಯೋತ್ಸವದ ಮೆರವಣಿಗೆ ನಡೆಯುತ್ತಿದ್ದ ಸಂದರ್ಭದಲ್ಲಿ ಕಾಂಗ್ರೆಸ್ ಕಾರ್ಯಕರ್ತ ಶಶಿಕಾಂತ ಶೆಟ್ಟಿಗಾರ್ ಅದೇ ದಾರಿಯಲ್ಲಿ ಬರುತ್ತಿದ್ದಾಗ ಅವರನ್ನು ತಡೆದು ನಿಲ್ಲಿಸಿ ಹಲ್ಲೆ ನಡೆಸಿದ ಬಿಜೆಪಿ ಕಾರ್ಯಕರ್ತರು ಅವರು ತಪ್ಪಿಸಿಕೊಂಡು ತಮ್ಮ ಅಂಗಡಿಯೊಳಗೆ ಹೋಗಲೆತ್ನಿಸಿದ್ದರೂ ಅಲ್ಲಿಗೆ ಹೋಗಿ ಮೊಬೈಲ್ ಕಿತ್ತುಕೊಂಡಿದ್ದಾರೆ. ಹಲ್ಲೆ ನಡೆಸುವ ದೃಶ್ಯದ ವೀಡಿಯೋ ವೈರಲ್ ಆಗಿದೆ.
ಹಲ್ಲೆಗೊಳಗಾದ ಶಶಿಕಾಂತ ಶೆಟ್ಟಿಗಾರ್ ಮೂಡುಬಿದಿರೆ ಸರಕಾರಿ ಆಸ್ಪತ್ರೆಗೆ ದಾಖಲಾಗಿದ್ದು ಮಾಜಿ ಸಚಿವ ಕೆ. ಅಭಯಚಂದ್ರ ಸಹಿತ ಹಲವಾರು ಕಾಂಗ್ರೆಸ್ ಕಾರ್ಯ ಕರ್ತರು ಆಸ್ಪತ್ರೆಗೆ ಧಾವಿಸಿ ಆರೋಪಿಗಳ ಬಂಧನಕ್ಕೆ ಪೊಲೀಸರಲ್ಲಿ ಒತ್ತಾಯಿಸಿದ್ದಾರೆ.
ದಯಾನಂದ ಪೂಜಾರಿ ಅವರು ಸರ್ಕಾರಿ ಆಸ್ಪತ್ರೆಗೆ ದಾಖಲಾಗಿದ್ದು ಮಾಜಿ ಶಾಸಕ ವಸಂತ ಬಂಗೇರ, ರಕ್ಷಿತ್ ಶಿವರಾಮ್ ಸಹಿತ ಹಲವಾರು ಮಂದಿ ಆಸ್ಪತ್ರೆಗೆ ಧಾವಿಸಿ ಆರೋಪಿಗಳ ಬಂಧನಕ್ಕೆ ಆಗ್ರಹಿಸಿದ್ದಾರೆ.
ಜಿಲ್ಲೆಯಲ್ಲಿ ಮಂಗಳವಾರ ನಡೆದ ಲೋಕಸಭಾ ಚುನಾವಣೆ ಶಿಸ್ತು ಮತ್ತು ಶಾಂತಿ-ಸುವ್ಯವಸ್ಥೆಯಿಂದ ಕೂಡಿದ್ದಕ್ಕೆ ಕಾಂಗ್ರೆಸ್ ಅಭ್ಯರ್ಥಿ ಪ್ರೊ.ರಾಜು ಆಲಗೂರ ಅವರು ಸಂತಸ…
ನಗರದ ವೈದ್ಯಕೀಯ ಕಾಲೇಜಿನ ಮಹಿಳೆಯರ ಶೌಚಾಲಯದಲ್ಲಿ ಮೊಬೈಲ್ ಅಡಗಿಸಿಟ್ಟು ವಿಡಿಯೊ ಚಿತ್ರೀಕರಿಸಿದ 17 ವರ್ಷದ ಬಾಲಕನೊಬ್ಬನನ್ನು ವಶಕ್ಕೆ ಪಡೆದು ಬಾಲನ್ಯಾಯ…
ಕರ್ನಾಟಕದಲ್ಲಿಂದು (ಮೇ 07) ಲೋಕಸಭೆಗೆ 2ನೇ ಹಂತದಲ್ಲಿ ಮತದಾನ ನಡೆದಿದ್ದು, ಬಾಕಿ ಉಳಿದಿದ್ದ14 ಕ್ಷೇತ್ರಗಳಿಗೆ ಮತದಾನ ನಡೆದಿದ್ದು, 227 ಅಭ್ಯರ್ಥಿಗಳ…
ಚಂದ್ರನು ವೃಷಭ ರಾಶಿಯಿಂದ ಬುಧವಾರ ರಾತ್ರಿ 07:20ಕ್ಕೆ ಮಿಥುನ ರಾಶಿಯನ್ನು ಪ್ರವೇಶಿಸುತ್ತಾನೆ. ಇದರಿಂದಾಗಿ ವೃಷಭ, ಕಟಕ,ಸಿಂಹ, ವೃಶ್ಚಿಕ, ಧನಸ್ಸು, ಮೀನ…
ಸಿನಿಮಾ ರಂಗದಲ್ಲಿ ಮತ್ತೊಂದು ವಿಚ್ಛೇದನ ಖಚಿತವಾಗಿದೆ. ಸೋಶಿಯಲ್ ಮೀಡಿಯಾದಲ್ಲಿ ಪೋಸ್ಟ್ ಹಂಚಿಕೊಳ್ಳುವ ಮೂಲಕ ಈ ಸುದ್ದಿಯನ್ನು ಖಚಿತಪಡಿಸಿದ್ದಾರೆ.
ವೆಸ್ಟ್ ನೈಲ್ ಫೀವರ್ ನ ಐದು ಪ್ರಕರಣಗಳು ಕೇರಳದ ಕೋಯಿಕ್ಕೋಡ್ ಜಿಲ್ಲೆಯಲ್ಲಿ ಪತ್ತೆಯಾಗಿದ್ದು, ಇದೀಗ ಆತಂಕಕ್ಕೆ ಕಾರಣವಾಗಿದೆ.