ಬಂಟ್ವಾಳ: ಕೆಎಸ್ಆರ್ಟಿಸಿ ಬಸ್ಸಿನಲ್ಲಿ ಅನ್ಯಮತೀಯ ವ್ಯಕ್ತಿಯೋರ್ವ ಮಹಿಳೆಯ ಜಡೆಗೆ ಕೈ ಹಾಕಿದ ಘಟನೆ ನಡೆದಿದ್ದು ಇದಕ್ಕೆ ಸಂಬಂಧಿಸಿದ ವೀಡಿಯೋ ವೈರಲ್ ಆಗಿತ್ತು.
ಧರ್ಮಸ್ಥಳ ಮಂಗಳೂರು ಸಂಚಾರಿಸುವ ಸರಕಾರಿ ಬಸ್ಸಿನಲ್ಲಿ ಮಣಿಹಳ್ಳ ಸಮೀಪ ಮಹಿಳೆಯ ಜಡೆಗೆ ಕೈ ಹಾಕಿದ್ದ ವಿಡಿಯೋ ಜಾಲತಾಣದಲ್ಲಿ ವೈರಲ್ ಆಗಿದೆ. ವ್ಯಕ್ತಿಯ ಕೃತ್ಯವನ್ನು ಸಹ ಪ್ರಯಾಣಿಕ ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಹರಿಬಿಟ್ಟಿದ್ದ. ವಿಡಿಯೋ ವೈರಲ್ ಆದ ಬೆನ್ನಲ್ಲೇ ಹಿಂದು ಜಾಗರಣ ವೇದಿಕೆ ಬಂಟ್ವಾಳ ತಾಲೂಕು ಬಂಟ್ವಾಳ ನಗರ ಠಾಣೆಗೆ ದೂರು ನೀಡಿದ್ದು ಪ್ರಕರಣ ದಾಖಲಾಗಿದೆ.
ಕಠಿಣ ಕ್ರಮಕ್ಕೆ ಶಾಸಕರ ಸೂಚನೆ
ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಅವರು ಘಟನೆಯ ಕುರಿತು ಶೀಘ್ರವಾಗಿ ಬಂಧಿಸಿ ಅತನ ಮೇಲೆ ಕಾನೂನು ಕ್ರಮಕೈಗೊಳ್ಳಬೇಕು ಎಂದು ಬಂಟ್ವಾಳ ಡಿ.ವೈ.ಎಸ್.ಪಿ.ಅವರಿಗೆ ಸೂಚನೆ ನೀಡಿದ್ದಾರೆ.