ಮಂಗಳೂರು; ಬಿಜೆಪಿ ರಾಜ್ಯಾಧ್ಯಕ್ಷನಾಗಿ ವಿಜಯೇಂದ್ರ ನೇಮಕ ವಿಚಾರಕ್ಕೆ ಸಂಬಂಧಿಸಿದಂತೆ ಮಂಗಳೂರಿನಲ್ಲಿ ಪೇಜಾವರ ವಿಶ್ವ ಪ್ರಸನ್ನ ತೀರ್ಥ ಸ್ವಾಮೀಜಿ ಪ್ರತಿಕ್ರಿಯೆ ನೀಡಿದ್ದಾರೆ.
ಸರ್ಕಾರ ಇರಬೇಕಾದರೆ ಪ್ರತಿಷಕ್ಷ ಪ್ರಬಲವಾಗಿರಬೇಕು. ಪ್ರತಿಪಕ್ಷ ನಾಯಕನಿಲ್ಲದೆ ಪ್ರತಿಪಕ್ಷ ಕುಂಠಿತವಾಗಿತ್ತು. ಈಗ ಸಮರ್ಥ ನಾಯಕ ಬಂದಿದ್ದಾರೆ. ರಾಜ್ಯದ ಅಭಿವೃದ್ಧಿಗೆ ಪೂರಕವಾಗಲಿ ಎಂದು ಹಾರೈಸುತ್ತೇನೆ. ಹಿಂದೂ ಕಾರ್ಯಕರ್ತರ ಗಡಿಪಾರು ಒಪ್ಪತಕ್ಕಂತ ಮಾತಲ್ಲ. ಅಂತಹ ವಿಚಾರಗಳು ನಡೆಯಬಾರದು. ಸರ್ಕಾರ ಎಲ್ಲರಿಗೂ ಸಂಬಂಧಪಟ್ಟದ್ದು. ಸರ್ಕಾರಕ್ಕೆ ಎಲ್ಲರೂ ಸಮಾನರು. ಒಂದು ಗುಂಪು ಟಾರ್ಗೆಟ್ ಮಾಡಿದೆ. ಅದು ಶೋಭೆ ತರುವಂತಹದು ಅಲ್ಲ ಎಂದು ಮಂಗಳೂರಿನಲ್ಲಿ ಪೇಜಾವರ ವಿಶ್ವ ಪ್ರಸನ್ನ ತೀರ್ಥ ಸ್ವಾಮೀಜಿ ಹೇಳಿಕೆ ನೀಡಿದ್ದಾರೆ.