News Karnataka Kannada
Monday, April 29 2024
ಮಂಗಳೂರು

ವಿಟ್ಲ: ಮಾಣಿ ಬಾಲ ವಿಕಾಸದಲ್ಲಿ ಮಕ್ಕಳ ಕಲರವ

Children's children's play at Mani Bal Vikas
Photo Credit : By Author

ವಿಟ್ಲ: ಮಾಣಿ ಬಾಲವಿಕಾಸ ಆಂಗ್ಲಮಾಧ್ಯಮ ಶಾಲೆಯಲ್ಲಿ ಮಕ್ಕಳ ದಿನಾಚರಣೆಯನ್ನು ಆಚರಿಸಲಾಯಿತು. ವೇದಿಕೆಯಲ್ಲಿದ್ದ ಗಣ್ಯರು ಪಂಡಿತ್ ಜವಹರಲಾಲ್ ನೆಹರೂರವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡುವ ಮೂಲಕ ಕಾರ್ಯಕ್ರಮ ಉದ್ಘಾಟಿಸಿದರು.

ಮುಖ್ಯ ಅತಿಥಿಗಳಾಗಿ ಆಗಮಿಸಿದ್ದ ಚಾರ್ಟರ್ಡ್ ಅಕೌಂಟೆಂಟ್ ಮೊಹಮ್ಮದ್ ತಾಬಿಶ್ ಹಸನ್, ಸಾಧನೆ ಮಾಡಲು ಛಲ ಬೇಕು.ನಮ್ಮ ಸಾಧನೆಗೆ ಬಡತನ,ನಮ್ಮ ಹಿನ್ನೆಲೆ ಅಡ್ಡಿಯಾಗದು.ಸ್ಪರ್ಧಾತ್ಮಕ ಪರೀಕ್ಷೆಗಳನ್ನು ಎದುರಿಸಲು ಹಲವು ವರ್ಷಗಳ ಪರಿಶ್ರಮದ ಜೊತೆಗೆ ತಂತ್ರಗಳು ಅಗತ್ಯ ಎಂದರು.

ಹಲವು ಸಾಧಕರ ಸಾಧನೆಗಳನ್ನು ಹಾಗೂ ತಮ್ಮ ಸಾಧನೆಯನ್ನು ಮೆಲುಕು ಹಾಕಿ ಮಕ್ಕಳನ್ನು ಹುರಿದುಂಬಿಸಿದರು. ಶಾಲಾ ಸಂಚಾಲಕರು ಹಾಗೂ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಜೆ.ಪ್ರಹ್ಲಾದ್ ಶೆಟ್ಟಿ , ಮಕ್ಕಳು ತಮ್ಮ ಪ್ರೌಢಾವಸ್ಥೆಯಲ್ಲಿಯೇ ಭವಿಷ್ಯದ ಚಿಂತನೆಯನ್ನು ಪ್ರಾರಂಭಿಸಬೇಕು. ಪಠ್ಯ ಹಾಗೂ ಪಠ್ಯೇತರ ಚಟುವಟಿಕೆಗಳಲ್ಲಿ ಸಾಧನೆ ಮಾಡಿ ಶಾಲೆಯ ಹೆಸರನ್ನು ಇನ್ನಷ್ಟು ಎತ್ತರಕ್ಕೆ ಕೊಂಡೊಯ್ದು, ಹೆತ್ತವರ
ಕನಸುಗಳನ್ನು ಸಾಕಾರ ಮಾಡುವವರಾಗಿ ಎಂದರು.

ಶಾಲಾ ಆಡಳಿತಾಧಿಕಾರಿ ರವೀಂದ್ರ ಡಿ ಹಾಗೂ ಶಾಲಾ ಮುಖ್ಯೋಪಾಧ್ಯಾಯಿನಿ ವಿಜಯಲಕ್ಷ್ಮೀ ವಿ ಶೆಟ್ಟಿ ಮಕ್ಕಳಿಗೆ ಶುಭಹಾರೈಸಿದರು. ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆದವು. ವಿವಿಧ ಸ್ಪರ್ಧೆಗಳಲ್ಲಿ ವಿಜೇತರಾದ ವಿದ್ಯಾರ್ಥಿಗಳನ್ನು ಪುರಸ್ಕರಿಸಲಾಯಿತು. ವಿದ್ಯಾರ್ಥಿನಿ  ಸನಿಹಾ ಸ್ವಾಗತಿಸಿದರು. ಮೊಹಮ್ಮದ್ ಸಹಲ್ ವಂದಿಸಿದರು. ಆಕಾಶ್ ಹಾಗೂ ನಿಶ್ಚಿಂತ .ಕೆ.ಐತಾಳ್ ನಿರೂಪಿಸಿದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
153
Mounesh V

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು