News Karnataka Kannada
Sunday, May 05 2024
ಮಂಗಳೂರು

ವಿಟ್ಲ: ಭಾಷೆಯು ವಿವಿಧತೆಯಲ್ಲಿ ಏಕತೆಯನ್ನು ಸಾರುತ್ತದೆ- ರವೀಂದ್ರ ಡಿ

Vitla: Language proclaims unity in diversity- Ravindra D
Photo Credit : By Author

ವಿಟ್ಲ: ಮಾಣಿ ಬಾಲವಿಕಾಸ ಆಂಗ್ಲಮಾಧ್ಯಮ ಶಾಲೆಯಲ್ಲಿ”ಹಿಂದಿ ದಿವಸ್” ಕಾರ್ಯಕ್ರಮವನ್ನು ತುಳಸಿದಾಸರ ಭಾವಚಿತ್ರವನ್ನು ಅನಾವರಣ ಮಾಡುವ ಮೂಲಕ ಉದ್ಘಾಟಿಸಲಾಯಿತು. ಸಭಾಧ್ಯಕ್ಷರು ಹಾಗೂ ಶಾಲಾ ಆಡಳಿತಾಧಿಕಾರಿ ರವೀಂದ್ರ ಡಿ ಮಾತನಾಡಿ ,ಭಾಷೆಯು ಏಕತೆಯನ್ನು ಸಾರುತ್ತದೆ. ಪ್ರತಿಯೊಂದು ಭಾಷೆಯಲ್ಲಿ ಮೌಲ್ಯಗಳು ಇರುತ್ತದೆ ಹೀಗಾಗಿ ಎಲ್ಲಾ ಭಾಷೆಯ ಜ್ಞಾನವನ್ನು ಪಡೆಯುವುದರಿಂದ ಭಾರತೀಯ ಸಂಸ್ಕೃತಿಯನ್ನು ರೂಢಿಸಿಕೊಳ್ಳಬಹುದು ಎಂದರು. ಭಾಷೆಯಿಂದ ನಮ್ಮ ಭಾವನೆಗಳನ್ನು ಹಂಚಬಹುದು. ಹಿಂದಿ ಭಾಷೆಯನ್ನು ಕಲಿಯುವ ಸಂಕಲ್ಪಗೈಯೋಣ ಎಂದು ಮಕ್ಕಳನ್ನು ಹುರಿದುಂಬಿಸಿದರು. ಶಾಲಾ ಮುಖ್ಯೋಪಾಧ್ಯಾಯಿನಿ ವಿಜಯಲಕ್ಷ್ಮೀ ವಿ ಶೆಟ್ಟಿ ಹಿಂದಿ ಭಾಷೆ ಹಾಗೂ ಹಿಂದಿ ದಿವಸದ ಮಹತ್ವದ ಕುರಿತು ತಿಳಿಸಿ ಶುಭಹಾರೈಸಿದರು.

ಕಾರ್ಯಕ್ರಮದಲ್ಲಿ ಶಾಲಾ ಶಿಕ್ಷಕರು, ವಿದ್ಯಾರ್ಥಿಗಳು ಉಪಸ್ಥಿತರಿದ್ದರು. ವಿದ್ಯಾರ್ಥಿಗಳು ಪ್ರಾರ್ಥನೆಗೈದರು .ವಿದ್ಯಾರ್ಥಿನಿ ನಿಧಿ ಎಸ್ ಸ್ವಾಗತಿಸಿದರು. ಮೊಹಮ್ಮದ್ ಇಸ್ಮಾಯಿಲ್ ಸಹಲ್ ಪ್ರಸ್ತಾವನೆಗೈದರು,ಭುವಿ ವಂದಿಸಿದರು. ಫಾದಿಲ್ ಉಮ್ಮರ್, ಆಕಾಶ್, ಸಮೀಕ್ಷಾ ಹಾಗೂ ತೃಪ್ತಿ ನಿರೂಪಿಸಿದರು. ಮಕ್ಕಳಿಂದ ಸಾಂಸ್ಕೃತಿಕ ಕಾರ್ಯಕ್ರಮ ಜರಗಿತು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
153
Mounesh V

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು