ವಿಟ್ಲ: ಚಿನ್ನದ ಬೆಲೆ ಗಗನಕ್ಕೇರುತಿದ್ದಂತೆ ಕಳ್ಳತನ ಪ್ರಕರಣಗಳ ಸಂಖ್ಯೆಯೂ ದುಪ್ಪಟ್ಟಾಗುತ್ತಿದೆ. ಇಂತಹದ್ದೇ ಒಂದು ಘಟನೆ ಕುಳ ಗ್ರಾಮದ ನೀರಪಳಿಕೆಯಲ್ಲಿ ಶನಿವಾರ ಬೆಳಗ್ಗೆ ನಡೆದಿದೆ. ಮಹಿಳೆಯೊಬ್ಬರಿಗೆ ಚಾಕು ತೋರಿಸಿ ಬೆದರಿಸಿ ಚಿನ್ನ ಲಪಟಾಯಿಸಲು ವ್ಯಕ್ತಿಯೋರ್ವ ಯತ್ನಿಸಿದ್ದಾನೆ.
ಮನೆಯಲ್ಲಿ ವೃದ್ಧ ಮಹಿಳೆ ಮಾತ್ರ ಇರುವ ಸಂದರ್ಭ ಮನೆಯ ಮುಖ್ಯ ದ್ವಾರದ ಮೂಲಕ ವ್ಯಕ್ತಿಯೋರ್ವ ಮುಖಕ್ಕೆ ಮಾಸ್ಕ್ ಹಾಕಿ ಒಳ ಪ್ರವೇಶಿಸಿ ಒಳಗಿನಿಂದ ಚಿಲಕ ಹಾಕಿ ಮಹಿಳೆಗೆ ಚಾಕು ತೋರಿಸಿ, ಕಿವಿಯಲ್ಲಿರುವ ಚಿನ್ನ ಕೊಡುವಂತೆ ಕೇಳಿದ್ದಾನೆ. ಬೆದರಿದ ಮಹಿಳೆ ಹಿಂದಿನ ಬಾಗಿಲು ಮೂಲಕ ಹತ್ತಿರದ ಮನೆಯವರನ್ನು ಕೂಗಿ ಕರೆದಾಗ ಆತ ಹಿಂಬದಿಯ ತೋಟದ ದಾರಿಯಾಗಿ ಪರಾರಿಯಾದ್ದಾನೆ.
ನಂತರ 112ಕ್ಕೆ ಕರೆಮಾಡಿ ಮಾಹಿತಿ ನೀಡಿದಾಗ ತುರ್ತು ಕಾರ್ಯಪಡೆಯ ಪೊಲೀಸ್ ತಂಡ ಸ್ಥಳಕ್ಕೆ ಆಗಮಿಸಿದರು. ಬಳಿಕ ವಿಟ್ಲ ಠಾಣೆಗೆ ಮಾಹಿತಿ ನೀಡಲಾಯಿತು.
ನೀರಿನ ಟ್ಯಾಂಕ್ನಲ್ಲಿ ಬಿದ್ದು ಮೂವರು ಎಂಜಿನಿಯರ್ಗಳು ಸಾವಿಗೀಡಾದ ಘಟನೆ ಬಳ್ಳಾರಿ ಜಿಲ್ಲೆಯ ಜಿಂದಾಲ್ನ ಎಚ್ಎಸ್ಎಂ ಪ್ಲಾಂಟ್ನಲ್ಲಿ ನಡೆದಿದೆ.
ವಿದ್ಯುತ್ ಹೈಟೆನ್ಷನ್ ವೈರ್ ತಾಕಿ ವ್ಯಕ್ತಿ ಸಾವನ್ನಪ್ಪಿದ ಘಟನೆ ಕೊಪ್ಪಳ ಜಿಲ್ಲೆಯ ಕುಕನೂರು ತಾಲೂಕಿನ ಚಿಕ್ಕೆನಕೊಪ್ಪ ಗ್ರಾಮದಲ್ಲಿ ನಡೆದಿದೆ.
ಕ್ರಿಕೆಟ್ ಅಸೋಸಿಯೇಷನ್ ಮೈದಾನದಲ್ಲಿ ನಡೆದ 17ನೇ ಆವೃತ್ತಿಯ 58ನೇ ಐಪಿಎಲ್ ಪಂದ್ಯದಲ್ಲಿ ಅಲ್ರೌಂಡ್ ಪ್ರದರ್ಶನದ ಫಲವಾಗಿ ರಾಯಲ್ ಚಾಲೆಂಜರ್ಸ್ ಬೆಂಗಳೂರು…
ಧರ್ಮ ದಂಗಲ್ ಕಿಡಿ ಮೈಸೂರಿನಲ್ಲಿ ಹೊತ್ತಿಕೊಂಡಿದ್ದು, ಮೈಸೂರಿನ ಸಂತ ಫಿಲೋಮಿನಾಸ್ ಕಾಲೇಜಿನ ವಾರ್ಷಿಕೋತ್ಸವ ಕಾರ್ಯಕ್ರಮದಲ್ಲಿ ಹಾಡಿದ ಜಯತು ಜಯತು ಜೈ…
ಭಾರತದಲ್ಲಿ ಬಹುಸಂಖ್ಯಾತ ಹಿಂದೂಗಳ ಜನಸಂಖ್ಯೆ ಕುಸಿತವಾಗುತ್ತಿದ್ದು ಇದೇ ವೇಳೆ ಮುಸ್ಲಿಮರ ಸಂಖ್ಯೆ ಹೆಚ್ಚುತ್ತಿದೆ ಎಂದು ಪ್ರಧಾನ ಮಂತ್ರಿ ಆರ್ಥಿಕ ಸಲಹಾ…
ಕಾರ್ಖಾನೆಯೊಂದರಲ್ಲಿ ಪಟಾಕಿ ಸಿಡಿದು 8 ಜನರು ಸಾವನ್ನಪ್ಪಿದ ಘಟನೆ ತಮಿಳುನಾಡಿನ ಶಿವಕಾಶಿಯಲ್ಲಿ ನಡೆದಿದೆ.