ಬಂಟ್ವಾಳ : ಕಾಂಗ್ರೇಸನ್ನು ಸೋಲಿಸಿದ್ದಕ್ಕೆ ಜನರು ಪಶ್ಚಾತ್ತಾಪ ಪಡುತ್ತಿದ್ದು, ದ.ಕ.ಜಿಲ್ಲೆಯಲ್ಲಿ ಈ ಬಾರಿ ಮತದಾರರು ಬಿಜೆಪಿಯನ್ನು ಸೋಲಿಸಿ ಮತ್ತೆ ಕಾಂಗ್ರೇಸ್ ನ್ನು ಅಧಿಕಾರಕ್ಕೆ ತರುತ್ತಾರೆ ಎಂದು ಕರ್ನಾಟಕ ರಾಜ್ಯ ಸರ್ಕಾರದ ವಿರೋಧ ಪಕ್ಷದ ಉಪನಾಯಕ, ಮಂಗಳೂರು ಶಾಸಕ ಯು.ಟಿ.ಖಾದರ್ ಹೇಳಿದ್ದಾರೆ.
ಅವರು ಬಿಸಿರೋಡಿನ ಪ್ರವಾಸಿ ಮಂದಿರದಲ್ಲಿ ಕರೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದರು. ಶೇ 50 ರಷ್ಟು ಯುವಕರನ್ನು ಅಭ್ಯರ್ಥಿ ಯಾಗಿ ಕಾಂಗ್ರೇಸ್ ನಿಂದ ಸ್ಪರ್ಧಿಸಲು ಎ.ಐ.ಸಿ.ಸಿ.ತೀರ್ಮಾನ ಮಾಡಿದೆ ಎಂದು ಸ್ಪಷ್ಟ ಪಡಿಸಿದ ಅವರು, ಕಾಂಗ್ರೇಸ್ ಯಾವುದೇ ಅಭಿವೃದ್ಧಿ ಕೆಲಸವನ್ನು ಚುನಾವಣೆ ದೃಷ್ಟಿಯಿಂದ ಮಾಡುವುದಿಲ್ಲ ಎಂದು ಅವರು ಹೇಳಿದರು.
ಬಿಜೆಪಿಯಿಂದ ಜನಸಾಮಾನ್ಯರಿಗೆ ಯಾವುದೇ ಪ್ರಯೋಜನವಾಗಿಲ್ಲ. ಕೆಲಸ ಮಾಡುವ ಪ್ರಾಮಾಣಿಕ ಅಧಿಕಾರಿಗಳನ್ನು ಭ್ರಷ್ಟ ಅಧಿಕಾರಿಯಾಗಿ ಮಾರ್ಪಾಡು ಮಾಡಿದ ಕೀರ್ತಿ ಬಿಜೆಪಿಯವರಿಗೆ ಸಲ್ಲುತ್ತದೆ ಎಂದು ಬಿಜೆಪಿಯ ಭ್ರಷ್ಟಾಚಾರದ ವಿರುದ್ದ ಹರಿಹಾಯ್ದರು.
ಉಳ್ಳಾಲ ತಾಲೂಕಿನ ಅಭಿವೃದ್ಧಿಗೆ ವಿವಿಧ ರೂಪುರೇಷೆಗಳನ್ನು ಹಾಕಲಾಗಿದೆ ಎಂದ ಅವರು, ಬಂಟ್ವಾಳ ತಾಲೂಕಿಗೆ ಈ ಮೊದಲು ಸೇರಿಕೊಂಡಿದ್ದ ಮೇರಮಜಲು, ಕೊಡ್ಮಾಣ್ , ತುಂಬೆ, ಪುದು ಗ್ರಾ.ಪಂ.ಗಳು ಉಳ್ಳಾಲ ತಾಲೂಕಿಗೆ ಸೇರ್ಪಡೆಗೊಂಡಿದ್ದು ಕ್ಷೇತ್ರದ ಶಾಸಕನೆಲೆಯಲ್ಲಿ ಕುಡಿಯುವ ನೀರು, ರಸ್ತೆ, ಆಸ್ಪತ್ರೆ, ಶಿಕ್ಷಣಕ್ಕೆ ಆದ್ಯತೆ ನೀಡಿರುವುದಾಗಿ ಹೇಳಿದರು.
ಮಂಗಳೂರು ಸಮಗ್ರ ಕುಡಿಯುವ ನೀರಿನ ಯೋಜನೆ ಶೀಘ್ರ ಆರಂಭವಾಗಲಿದೆ ಎಂದ ಅವರು ಸುಮಾರು 250 ಕೋಟಿ ವೆಚ್ಚದ ಕಾರ್ಯ ನಡೆಯಲಿದೆ ಎಂದರು.
ಸಮಗ್ರ ಕುಡೊಯುವನೀರಿನವ್ಯವಸ್ಥೆ ಅನುಷ್ಠಾನಕ್ಕೆ ಮುಂಚಿತವಾಗಿ ಎಲ್ಲಾ ಗ್ರಾಮಗಳಲ್ಲಿಯೂ ಜೆಜೆಎಂ ಮೂಲಕ ನೀರಿನ ಟ್ಯಾಂಕ್ ಮತ್ತು ಪೈಪ್ ಲೈನ್ ಕಾರ್ಯ ಸುಮಾರು 31 ಕೋಟಿ ವೆಚ್ಚದ ಟೆಂಡರ್ ಸಿದ್ಧವಾಗಿದ್ದು, ಶೀಘ್ರವಾಗಿ ಅನುಷ್ಠಾನವಾಗಲಿದೆ ಎಂದರು.
ಜಿಲ್ಲೆಯ ಹಲವೆಡೆಗಳ ರಸ್ತೆಗಳಲ್ಲಿನ ಗುಂಡಿ ಮುಚ್ಚುವ ಕಾರ್ಯ ಆಗಬೇಕಾಗಿದೆ ಎಂದ ಒತ್ತಾಯಿಸಿದ ಅವರು, ರಸ್ತೆ ವಿಚಾರದಲ್ಲಿ ಸರ್ಕಾರದ ನಿರ್ಲಕ್ಷ್ಯ ಖಂಡನೀಯ ಎಂದರು.ನಾದುರಸ್ತಿಯ ರಸ್ತೆಗಳಿಂದ ಹಲವಾರು ಜೀವಹಾನಿ ಸಂಭವಿಸಿದೆ ಎಂದರು.
ಜಿ.ಪಂ.ಮಾಜಿ ಸದಸ್ಯರಾದ ಚಂದ್ರಪ್ರಕಾಶ್ ಶೆಟ್ಟಿ ತುಂಬೆ, ಮಮತ ಗಟ್ಟಿ, ಅಹಿಙದ ಜಿಲ್ಲಾಧ್ಯಕ್ಷ ಪದ್ಮನಾಭ ನರಿಂಗಾಣ,ತಾ.ಪಂ.ಮಾಜಿ ಅಧ್ಯಕ್ಷ ಚಂದ್ರಹಾಸ ಕರ್ಕೇರ, ಪ್ರಮುಖರಾದ ವೃಂದಾ ಪೂಜಾರಿ, ನಾಸೀರ್, ಅರುಣ್ ಡಿಸೋಜ ಮತ್ತಿತರರು ಉಪಸ್ಥಿತರಿದ್ದರು.