Categories: ಮಂಗಳೂರು

ಮಂಗಳೂರು ನಗರ ದಕ್ಷಿಣ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಕಸ‌ವಿಲೇವಾರಿಗೆ ವಾರ್ ರೂಂ- ಶಾಸಕ ಕಾಮತ್

ಮಂಗಳೂರು: ಮಂಗಳೂರು ನಗರ ದಕ್ಷಿಣ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಮನೆ ಮನಗಳಿಂದ ಕಸ‌ ಸಂಗ್ರಹಿಸುವುದು ಹಾಗೂ ರಸ್ತೆ ಬದಿಗಳಲ್ಲಿ ಕಸದ ರಾಶಿಗಳು ಬಿದ್ದಿರುವುದನ್ನು ಬಗೆಹರಿಸುವ ದೃಷ್ಟಿಯಿಂದ ಶಾಸಕ ವೇದವ್ಯಾಸ್ ಕಾಮತ್ ಅವರು ತಮ್ಮ ಕಚೇರಿಯಲ್ಲಿ ವಾರ್ ರೂಂ ಪ್ರಾರಂಭಿಸಿದ್ದಾರೆ. ಸಾರ್ವಜನಿಕರು ತಮ್ಮ ಮನೆ, ಫ್ಲಾಟ್ ಅಥವ ರಸ್ತೆ ಬದಿಯಲ್ಲಿ ಕಸದ ರಾಶಿಗಳಿದ್ದರೆ ಶಾಸಕರ ವಾರ್ ರೂಂ ದೂರವಾಣಿ ಸಂಖ್ಯೆಗೆ ಕರೆ ಮಾಡಿದರೆ ಕಸ ತೆರವುಗೊಳಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ಶಾಸಕ ವೇದವ್ಯಾಸ್ ಕಾಮತ್ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಕಳೆದ ಹಲವು ದಿನಗಳಿಂದ ಕಸ ಸಂಗ್ರಹಣೆಯ ಕಾರ್ಮಿಕರು ಮುಷ್ಕರ ಹೂಡಿರುವ ಕಾರಣ ಅವರ ಬೇಡಿಕೆಗಳನ್ನು ಈಡೇರಿಸುವ ದೃಷ್ಟಿಯಿಂದ ಶಾಸಕ ಕಾಮತ್ ಅವರು ಮಾತುಕತೆಯ ಮೂಲಕ ಮನವೊಲಿಸುವ ಪ್ರಯತ್ನ ಮಾಡಿದ್ದಾರೆ. ಹಲವು ಪ್ರಯತ್ನ ಮಾಡಿದರೂ ಅವರಿಂದ ಸಕಾರಾತ್ಮಕ ಸ್ಪಂದನೆ ದೊರೆತಿಲ್ಲ. ಇಡೀ ರಾಜ್ಯದಾದ್ಯಂತ ಕಾರ್ಮಿಕರು ಪ್ರತಿಭಟನೆ ಕೈಗೊಂಡಿರುವ ಕಾರಣ ರಾಜ್ಯದಲ್ಲಿ ಮುಷ್ಕರ ಕೈಬಿಟ್ಟ ನಂತರವೇ ಕೆಲಸಕ್ಕೆ ಹಾಜರಾತ್ತೇವೆ ಎಂದು ಕಾರ್ಮಿಕರು ತಿಳಿಸಿದ್ದಾರೆ. ಹಾಗಾಗಿ ಮಂಗಳೂರು ನಗರ ದಕ್ಷಿಣ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಪ್ರಾರಂಭದಲ್ಲಿ ಕಸ ಸಾಗಾಟದ ವಾಹನ ಚಾಲಕರನ್ನು ತಾತ್ಕಾಲಿಕ ಆಧಾರದಲ್ಲಿ ನೇಮಿಸಿ ಕೆಲಸ‌ ಪ್ರಾರಂಭಿಸುವ ಪರಿಸ್ಥಿತಿ ನಿರ್ಮಾಣವಾಗಿದೆ. ತಕ್ಷಣವೇ ಸಾಕಷ್ಟು ವಾಹನ ಚಾಲಕರನ್ನು ಜೋಡಿಸಿಕೊಳ್ಳುವುದು ಕಷ್ಟ ಸಾಧ್ಯವಾಗಿತ್ತು. ಆದರೂ ಸರಿಸುಮಾರು 75 ರಿಂದ 80 ಚಾಲಕರನ್ನು ಜೋಡಿಸುವ ಕೆಲಸ ಮಾಡಲಾಗಿದೆ. ಇನ್ನೂ ಹೆಚ್ಚುವರಿ 30 ರಿಂದ 40 ವಾಹನ ಚಾಲಕರ ಅಗತ್ಯವಿದ್ದು, ಕೆಲಸ ಮಾಡಲು ಇಚ್ಛೆಯುಳ್ಳ ವಾಹನ ಚಾಲಕರು ನನ್ನ ಕಚೇರಿಯನ್ನು ಸಂಪರ್ಕಿಸುವಂತೆ ಶಾಸಕ ಕಾಮತ್ ಹೇಳಿದ್ದಾರೆ.

ವಾರ್ಡ್ ಗಳ ಆಧಾರದಲ್ಲಿ ವಾಹನ ಚಾಲಕನ್ನು ನೇಮಿಸಲಾಗಿದ್ದು, ಅದಕ್ಕೆ ಸಂಬಂಧಪಟ್ಟಂತೆ ಅಧಿಕಾರಿಗಳ ಹಾಗೂ ಸೂಪರ್ ವೈಸರ್ ಗಳ ಮೊಬೈಲ್ ಸಂಖ್ಯೆಯನ್ನು ಕೂಡ ಈ ಮೂಲಕ ನೀಡಲಾಗಿದೆ. ಈಗ ಕೆಲಸಕ್ಕೆ ಜೋಡಿಸಿಕೊಂಡಿರುವ ಕಾರ್ಮಿಕರು ಕೂಲಿ ಕೆಲಸ ಕಾರ್ಮಿಕರಾಗಿರುವ ಕಾರಣ ವಾರ್ಡ್ ಗಳ ಪರಿಚಯವಿಲ್ಲ. ಹಾಗಾಗಿ ಕೆಲವೆಡೆಗಳಲ್ಲಿ ಕಸ ಸಂಗ್ರಹಣೆಯಲ್ಲಿ ತೊಡಕಾಗಿದೆ. ಅದೆಲ್ಲವನ್ನೂ ನಿವಾರಿಸುವ ಪ್ರಯತ್ನ ಮಾಡಲಾಗುತ್ತಿದೆ ಎಂದು ಹೇಳಿದ್ದಾರೆ.

ವಾರ್ಡ್ ಗಳ ಸಂಖ್ಯೆ, ಸೂಪರ್ ವೈಸರ್, ಡ್ರೈವರ್ ಗಳು ಹಾಗೂ ಸ್ಥಳೀಯ ಅಧಿಕಾರಿಗಳ ಮೊಬೈಲ್ ಸಂಖ್ಯೆಯನ್ನು ನೀಡಲಾಗಿದೆ. ಕಸ ವಿಲೇವಾರಿಯ ಸಮಸ್ಯೆ ತಲೆದೂರಿದಲ್ಲಿ ನಮ್ಮ ವಾರ್ ರೂಂ ಸಂಪರ್ಕಿಸಿದರೆ ಅದನ್ನು ಸರಿಪಡಿಸುವ ಕೆಲಸ ಮಾಡಲಾಗುವುದು. ಜನತೆಗೆ ಆಗಿರುವ ಸಮಸ್ಯೆಗೆ ವಿಷಾದ ವ್ಯಕ್ತಪಡಿಸುತ್ತಾ, ಇನ್ನು 3-4 ದಿನಗಳಲ್ಲಿ ಸಮಸ್ಯೆ ಬಗೆಹರಿಸುವ ಮೂಲಕ ತ್ಯಾಜ್ಯ ವಿಲೇವಾರಿಯ ಸಮಸ್ಯೆ ಸರಿಪಡಿಸಲಾಗುವುದು ಎಂದು ಹೇಳಿದರು.

ಈ ವಿಚಾರದ ಕುರಿತು ಅನೇಕರ ಬಳಿ ಪರ್ಯಾಯ ವ್ಯವಸ್ಥೆಗೆ ವಾಹನ ಚಾಲಕರ, ಕಾರ್ಮಿಕರ ಅವಶ್ಯಕತೆಯನ್ನು ತಿಳಿಸಲಾಗಿತ್ತು. ನಗರದ ಜನತೆಯ ಹಿತದೃಷ್ಟಿಯಿಂದ ರಾಜಕೀಯ ಮರೆತು ಸಹಕಾರ ನೀಡಿದ್ದಲ್ಲಿ ಸಮಸ್ಯೆ ಶೀಘ್ರವಾಗಿ ಬಗೆಹರಿಸಬಹುದಿತ್ತು. ಆದರೆ ಆಡಳಿತ ವ್ಯವಸ್ಥೆಯನ್ನು ವಿರೋಧಿಸುವ ವಿರೋಧ ಪಕ್ಷಗಳು ಟೀಕೆ ಮಾಡುವುದು ಬಿಟ್ಟು ವಾಹನ ಚಾಲಕರನ್ನು ಒದಗಿಸುವ ಪ್ರಾಮಾಣಿಕ ಸೇವೆ ಮಾಡಲಿ. ಹಾಗಾಗಿ ಯಾವುದೇ ರೀತಿಯ ಸಮಸ್ಯೆಗಳಾದರೆ ವಾರ್ ರೂಂ ಸಂಪರ್ಕಿಸಿ. ಜನತೆಗೆ ಆಗಿರುವ ಸಮಸ್ಯೆಗೆ ವಿಷಾದ ವ್ಯಕ್ತಪಡಿಸುತ್ತೇನೆ ಎಂದು ಶಾಸಕ ಕಾಮತ್ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ವಾರ್ ರೂಂ ಸಂಖ್ಯೆ :
8904078297
8197270222

ವಾರ್ ರೂಂ ಸಮಯ :
ಬೆಳಗ್ಗೆ 09:00 ರಿಂದ ಸಂಜೆ 05:00

Gayathri SG

Recent Posts

ಚಿರಂಜೀವಿ, ನಟಿ ವೈಜಯಂತಿಮಾಲಾ ಸೇರಿ ಹಲವು ಸಾಧಕರಿಗೆ ಪದ್ಮ ಪ್ರಶಸ್ತಿ ಪ್ರದಾನ

ತೆಲುಗು ನಟ ಕೊನಿಡೆಲಾ ಚಿರಂಜೀವಿ, ಹಿರಿಯ ನಟಿ ವೈಜಯಂತಿಮಾಲಾ ಬಾಲಿ,  ಸುಪ್ರೀಂ ಕೋರ್ಟ್‍ನ ಮೊದಲ ಮಹಿಳಾ ನ್ಯಾಯಾಧೀಶೆ ದಿ.ಎಂ ಫಾತಿಮಾ…

4 hours ago

ಏರ್ ಇಂಡಿಯಾ ಸಿಬ್ಬಂದಿಯ ಪ್ರತಿಭಟನೆ ಅಂತ್ಯ: ಕೆಲಸಕ್ಕೆ ಮರಳುವಂತೆ ಕಂಪನಿ ಆದೇಶ

ಏರ್ ಇಂಡಿಯಾ  ವಿಮಾನ ಸಂಸ್ಥೆಯ ಉದ್ಯೋಗಿಗಳು ಹೇಳದೆ ಕೇಳದೆ ರಜಾ ಹಾಕಿದ್ದರಿಂದ ಇಂದು ಏರ್ ಇಂಡಿಯಾ ಎಕ್ಸ್‌ಪ್ರೆಸ್ 85 ವಿಮಾನಗಳನ್ನು…

4 hours ago

ಅತ್ಯುತ್ತಮ ಅಂಕ ಪಡೆದ ವಿದ್ಯಾರ್ಥಿಗಳಿಗೆ ಜಿಲ್ಲಾ ಪೋಲಿಸ್ ಅಧೀಕ್ಷಕರಿಂದ ಅಭಿನಂದನೆ

ರಾಜ್ಯ ಗೃಹ ಇಲಾಖೆಯ ಆಡಳಿತ ವ್ಯಾಪ್ತಿಯಲ್ಲಿನ ಧಾರವಾಡ ಶ್ರೀ ಎನ್.ಎ. ಮುತ್ತಣ್ಣ ಸ್ಮಾರಕ ಪೊಲೀಸ್ ಮಕ್ಕಳ ವಸತಿ ಶಾಲೆಯಲ್ಲಿ ಎಪ್ರಿಲ್-2024…

4 hours ago

ಬೀದರ್: ರಾಜಿ ಸಂಧಾನಕ್ಕೆ ಒಂದಾದ ಮೂವರು ದಂಪತಿ

ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರವು ನಗರದಲ್ಲಿ ಗುರುವಾರ ನಡೆಸಿದ ರಾಜಿ ಸಂಧಾನ ಯಶಸ್ವಿಯಾಗಿದ್ದು, ಮೂವರು ದಂಪತಿ ವಿರಸ ಮರೆತು ಒಂದಾಗಿದ್ದಾರೆ.

4 hours ago

ಭಾರತದಲ್ಲೂ ಕಪ್ಪು ಚರ್ಮದವರನ್ನು ಹೋಲುವ ಜನರಿದ್ದಾರೆ: ಅಧೀರ್ ರಂಜನ್ ಚೌಧರಿ

ಸ್ಯಾಮ್ ಪಿತ್ರೋಡಾ ಅವರ “ಜನಾಂಗೀಯ” ಹೇಳಿಕೆಯನ್ನು ಪಶ್ಚಿಮ ಬಂಗಾಳದ ಕಾಂಗ್ರೆಸ್ ಅಧ್ಯಕ್ಷ ಅಧೀರ್ ರಂಜನ್ ಚೌಧರಿ ಸಮರ್ಥಿಸಿಕೊಂಡಿದ್ದಾರೆ.

6 hours ago

ಶಿವಮೊಗ್ಗ ಗ್ಯಾಂಗ್​ವಾರ್​: ಗಾಯಗೊಂಡಿದ್ದ ಮತ್ತೊಬ್ಬ ಸಾವು

ಲಷ್ಕರ್ ಮೊಹಲ್ಲಾದ ಮೀನು ಮಾರುಕಟ್ಟೆ ಬಳಿ ಮೇ.08 ರಂದು ನಡೆದ ಗ್ಯಾಂಗ್ ವಾರ್ ನಲ್ಲಿ ಇಬ್ಬರು ರೌಡಿಗಳಾದ ಗೌಸ್ ಮತ್ತು…

6 hours ago