News Karnataka Kannada
Saturday, April 27 2024
ಮಂಗಳೂರು

ಮಂಗಳೂರು| ನೇತ್ರಾವತಿ ನದಿಯಲ್ಲಿ ನೀರಿನ ಮಟ್ಟ ಹೆಚ್ಚಳ: ಹರೇಕಳ-ಅಡ್ಯಾರು ನಡುವೆ ಸಂಪರ್ಕ ದೋಣಿ ಸ್ಥಗಿತ

Water level rise in Netravathi river: Harekala-Adyar link boat suspended
Photo Credit : News Kannada

ಮಂಗಳೂರು: ನೇತ್ರಾವತಿ ನದಿಯಲ್ಲಿ ನೀರಿನ ಮಟ್ಟ ಹೆಚ್ಚಳ, ಹರೇಕಳ-ಅಡ್ಯಾರು ನಡುವೆ ಸಂಪರ್ಕ ದೋಣಿ ಸ್ಥಗಿತ. ಕಾಮಗಾರಿ ಪ್ರಗತಿಯಲ್ಲಿರುವ ಡ್ಯಾಂ/ಸೇತುವೆಯಲ್ಲಿ ನಡೆದುಕೊಂಡು ಹೋಗಲು ಅನುಮತಿ ಕೋರಿ ಸಾರ್ವಜನಿಕರಿಂದ ಅಹವಾಲು, ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ ಶಾಸಕ ಯು.ಟಿ.ಖಾದರ್.

ಕಳೆದ ಹಲವಾರು ದಿನಗಳಿಂದ ದಕ್ಷಣ ಕನ್ನಡ ಮತ್ತು ಮಲೆನಾಡಿನಾದ್ಯಂತ ವಿಪರೀತ ಮಳೆಯಾಗುತ್ತಿದ್ದು ನೇತ್ರಾವತಿ ನದಿ ಅಪಾಯ ಮೀರಿ ಹರಿಯುತ್ತಿದೆ.

ಇದರಿಂದಾಗಿ ಹರೇಕಳ – ಅಡ್ಯಾರು ದೋಣಿ ಸಂಚಾರ ಸ್ಥಗಿತಗೊಳಿಸಲಾಗಿದ್ದು ಸಾರ್ವಜನಿಕರು ಅಡ್ಯಾರು, ಫರಂಗಿಪೇಟೆ ಹಾಗೂ ಮಂಗಳೂರು ತಲುಪಲು ಸುತ್ತಿ ಬಳಸಿಕೊಂಡು ಹೋಗಾಗಬೇಕಾಗಿದೆ.ಈ ಸಂಬಂಧ ಸಾರ್ವಜನಿಕರು ಕಾಮಗಾರಿ ಪ್ರಗತಿಯಲ್ಲಿರುವ ಹರೇಕಳ ಅಣೆಕಟ್ಟು – ಸೇತುವೆಯಲ್ಲಿ ನಡೆದುಕೊಂಡು ಹೋಗಲು ಶಾಸಕರಲ್ಲಿ ಅಹವಾಲು ಸಲ್ಲಿಸಿದ್ದು ಶಾಸಕ ಯು.ಟಿ.ಖಾದರ್ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಸುರಕ್ಷತೆಯ ದೃಷ್ಟಿಯಿಂದ ಸೇತುವೆಯಲ್ಲಿ ಸಾರ್ವಜನಿಕರಿಗೆ ನಿರ್ಬಂಧ ವಿಧಿಸಲಾಗಿದ್ದು, ಈ ಸಂಬಂಧ ಶಾಸಕ ಯು.ಟಿ.ಖಾದರ್ ಸಣ್ಣ ನೀರಾವರಿ ಇಲಾಖೆಯ ಅಧಿಕಾರಿಗಳು, ಸೇತುವೆ ಗುತ್ತಿಗೆದಾರರು, ಕಂದಾಯ ಇಲಾಖೆಯ ಅಧಿಕಾರಿಗಳು, ಪೋಲೀಸ್ ಇಲಾಖೆಯ ಅಧಿಕಾರಿಗಳು, ಸ್ಥಳೀಯ ಗ್ರಾಮ ಪಂಚಾಯತ್ ಅಧ್ಯಕ್ಷರು, ಅಭಿವೃದ್ಧಿ ಅಧಿಕಾರಿಗಳು, ಸದಸ್ಯರು,
ಜನಪ್ರತಿನಿಧಿಗಳೊಂದಿಗೆ ಸ್ಥಳದಲ್ಲಿಯೇ ಚರ್ಚೆ ನಡೆಸಿದರು.

ಇದಕ್ಕೆ ಸಂಬಂಧಿಸಿದಂತೆ  ಪಂಚಾಯತ್ ಕಛೇರಿಯಲ್ಲಿ ಸಭೆ ಕರೆದು ಸಾರ್ವಜನಿಕರ ಸುರಕ್ಷತೆಗೆ ಬೇಕಾದ ಅಗತ್ಯ ಕ್ರಮ ಕೈಗೊಂಡು ನಡೆದುಕೊಂಡು ಹೋಗಲು ಅನುಮತಿ ನೀಡುವಂತೆ ಸೂಚನೆ ನೀಡಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12792
News Karnataka Kannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು