ಪುತ್ತೂರು: ಕಾಂಗ್ರೆಸ್ ಸೇರ್ಪಡೆಯಾಗಿದ್ದಾರೆಂದು ತಮ್ಮ ಬಗ್ಗೆ ಸುಳ್ಳು ಸುದ್ದಿ ನೀಡಿದ್ದು, ತಾವು ಬಿಜೆಪಿ ಪಕ್ಷದ ಸಕ್ರೀಯ ಕಾರ್ಯಕರ್ತರು ಎಂದು ಚಂದ್ರ ಬೋಸ್ ವೀಡಿಯೋ ಹೇಳಿಕೆ ನೀಡಿದ್ದಾರೆ.
ಬಿಜೆಪಿ ಕಾರ್ಯಕರ್ತರು ಕಾಂಗ್ರೆಸ್ ಸೇರ್ಪಡೆ ಎಂಬಂತೆ ಬಿಂಬಿಸಿರುವ ಬಗ್ಗೆ ಪತ್ರಿಕೆಯಲ್ಲಿ ಪ್ರಕಟವಾದ ವರದಿ ಹಿನ್ನೆಲೆಯಲ್ಲಿ ಚಂದ್ರಬೋಸ್ ಹಾಗೂ ಅವರ ಸಂಗಡಿಗರು ಹೇಳಿಕೆಯನ್ನು ಸಾಮಾಜಿಕ ಜಾಲತಾಣದಲ್ಲಿ ಬಿಟ್ಟಿದ್ದು, ಆ ವರದಿಯಲ್ಲಿ ಸತ್ಯಾಂಶವಿಲ್ಲ ಎಂದು ಆರೋಪಿಸಿದ್ದಾರೆ. ಚಂದ್ರ ಬೋಸ್ ಹಾಗೂ ಸಂಗಡಿಗರ ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ವೀಡಿಯೋದ ಪೂರ್ಣ ವಿವರ ಇಲ್ಲಿದೆ.
“ದಿನಾಂಕ 04-03-2023ರಂದು ದೇವಸ್ಥಾನದ ದೇಣಿಗೆಗಾಗಿ ಅಶೋಕ್ ಕುಮಾರ್ ರೈ ಅವರ ಕಚೇರಿಗೆ ಹೋಗಿದ್ದೇವು. ಮಾತುಕತೆಯ ಬಳಿಕ ದೇಣಿಗೆ ನೀಡಲು ಒಪ್ಪಿಕೊಂಡಿದ್ದು, ನಂತರ ಏಕಾಏಕಿ ಕಾಂಗ್ರೆಸ್ ಪಕ್ಷದ ಶಾಲನ್ನು ತಮಗೆ ಹಾಕಿದ್ದರು. ಇದರ ವರದಿಯನ್ನು ಪತ್ರಿಕೆಗೆ ನೀಡಿ, ಪ್ರಕಟ ಪಡಿಸಿರುತ್ತಾರೆ. ಆದರೆ ನಾವು ದೇಣಿಗೆ ಕೇಳಲು ಹೋದದ್ದೇ ಹೊರತು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಗೊಂಡಿಲ್ಲ. ನಾವು ಈ ಹಿಂದೆ ಬಿಜೆಪಿಯಲ್ಲಿ ಕಾರ್ಯಕರ್ತರಾಗಿ ದುಡಿದಿದ್ದೇವೆ. ಇನ್ನು ಮುಂದೆಯೂ ಬಿಜೆಪಿ ಪಕ್ಷದಲ್ಲೇ ಕೆಲಸ ಮಾಡುತ್ತೇವೆ ಎಂದು ವೀಡಿಯೋದಲ್ಲಿ ತಿಳಿಸಿದ್ದಾರೆ.
ಹಿಂದೂ ಯುವಕನ ಜೊತೆ ಮುಸ್ಲಿಂ ಸಮುದಾಯದ ಮಹಿಳೆ ಕುಳಿತಿದಕ್ಕೆ ಅದೇ ಕೋಮಿನ ಯುವಕರ ಗುಂಪೊಂದು ಹಲ್ಲೆ ನಡೆಸಿ, ನೈತಿಕ ಪೊಲೀಸ್…
ತಾಲ್ಲೂಕಿನ ಅಕ್ಕಿಹೆಬ್ಬಾಳು ಹೋಬಳಿಯ ಬೀಕನಹಳ್ಳಿ ಗ್ರಾಮದಲ್ಲಿ ಕಳೆದ ಮೂರು ದಿನಗಳ ಹಿಂದೆ ಸ್ವಾತಂತ್ರ್ಯ ಹೋರಾಟಗಾರ ಸಂಗೊಳ್ಳಿರಾಯಣ್ಣ ಪ್ರತಿಮೆಯನ್ನು ಭಗ್ನಗೊಳಿಸಿದ್ದ ಆರೋಪಿಯನ್ನು…
ಸಿಲಿಕಾನ್ ಸಿಟಿಯಲ್ಲಿ ಹುಸಿ ಬಾಂಬ್ ಬೆದರಿಕೆ ಮೇಲ್ ಮುಂದುವರೆದಿದ್ದು, ನಗರದ ಪ್ರತಿಷ್ಠಿತ ಆರು ಆಸ್ಪತ್ರೆಗಳಾದ ನಾಗವಾರದ ಸೇಂಟ್ ಫಿಲೋಮಿನಾ ಸೇರಿದಂತೆ…
ಜಿಲ್ಲೆಯಾದ್ಯಂತ ಭಾನುವಾರ ಗುಡುಗು, ಸಿಡಿಲು ಸಹಿತ ಮಳೆಯಾಗಿದ್ದು, ವಾತಾವರಣ ತಂಪಾಗಿದೆ.
ಮಧ್ಯಂತರ ಜಾಮೀನಿನ ಮೇಲೆ ಜೈಲಿನಿಂದ ಹೊರಬಂದ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರು ದೆಹಲಿಯ ಮೋತಿ ನಗರ ಪ್ರದೇಶದಲ್ಲಿ ಚುನಾವಣಾ…
ರಾಜಕೀಯ ಕೊನೆಗಾಲದಲ್ಲಿ ನನ್ನ ಕೈ ಹಿಡಿದವರು ಎಚ್.ಡಿ.ದೇವೇಗೌಡರು, ಅವರ ಕುಟುಂಬಕ್ಕೆ ದ್ರೋಹ ಮಾಡುವ ಕೆಲಸ ಮಾಡುವುದಿಲ್ಲ ಎಂದು ಶಾಸಕ ಎ.…