ಮಂಗಳೂರು: ಹಿಂದೂ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ ಸಂಬಂಧ ದಕ್ಷಿಣಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ಸುನಿಲ್ ಕುಮಾರ್ ಪ್ರತಿಕ್ರಿಯೆ ನೀಡಿದ್ದಾರೆ.
ಕಾರ್ಯಕರ್ತನ ಹತ್ಯೆ ಖಂಡಿಸಲು ನಿನ್ನೆ ನನ್ನ ಬಳಿ ಶಬ್ದಗಳಿರಲಿಲ್ಲ. ತನಿಖೆ ತೀವ್ರಗೊಳಿಸಲು ಸಿಎಂ, ಗೃಹಮಂತ್ರಿಗೆ ಮನವಿ ಮಾಡಿದ್ದೇನೆ. ಮನೆ ಮಗನನ್ನ ಕಳೆದುಕೊಂಡಿದ್ದೇವೆ. ಆದರೆ ಒಂದಂತೋ ಹೇಳಲು ಬಯಸುವೆ, ಇದರ ಹಿಂದಿರುವ ಶಕ್ತಿಗಳನ್ನ ಮಟ್ಟ ಹಾಕಲು ನಾವು ಸನ್ನದ್ದರಾಗಿದ್ದೇವೆ. ನಾವು ಸುಮ್ಮನಿರುವ ಪ್ರಶ್ನೆಯೇ ಇಲ್ಲ. ಸರ್ಕಾರ ತಕ್ಕ ಉತ್ತರವನ್ನ ಕಾನೂನಿನ ಚೌಕಟ್ಟಿನಲ್ಲಿ ನೀಡಲಿದೆ. ಮತಾಂಧ ಶಕ್ತಿಗಳನ್ನ ಹತ್ತಿಕ್ಕುವ ಕೆಲಸ ಮಾಡೇ ಮಾಡುತ್ತೇವೆ. ದ.ಕ. ಹಾಗೂ ಉಡುಪಿ ಜಿಲ್ಲೆಯಲ್ಲಿ ಕಳೆದ ಮೂರು ವರ್ಷಗಳಿಂದ ಶಾಂತಿ ಕದಡುವ ಕೆಲಸ ಆಗಿರಲಿಲ್ಲ.
ಕೇರಳದಿಂದ ಬಂದು ಶಾಂತಿ ಕದಡುವ ಕೆಲಸ ಮಾಡಲಾಗುತ್ತಿದೆ. ಸಾರ್ವಜನಿಕ ವಲಯದಲ್ಲಿ ಸಾಕಷ್ಟು ಆಕ್ರೋಶ ವ್ಯಕ್ತವಾಗಿದೆ. ಜನಾಕ್ರೋಶವನ್ನ ಸರ್ಕಾರ ಗಮನದಲ್ಲಿಟ್ಟುಕೊಂಡಿದೆ. ಹಂತಕರಿಗೆ ಯಾವ ಶಿಕ್ಷೆ ಕೊಡಬೇಕೋ ಆ ಶಿಕ್ಷೆ ಕೊಡಲಿದೆ. ಪೋಲಿಸ್ ಇಲಾಖೆಗೆ ಮುಕ್ತವಾದ ಅವಕಾಶ ನೀಡ್ತೇವೆ. ಮುಂದಿನ ಎರಡು ಮೂರು ದಿನಗಳ ಕಾಲ ಸಿಎಂ ಹಾಗೂ ಗೃಹ ಸಚಿವರ ಜೊತೆ ಸಂಪರ್ಕದಲ್ಲಿದ್ದುಕೊಂಡ ಮತೀಯ ಶಕ್ತಿಯನ್ನು ಮಟ್ಟ ಹಾಕುತ್ತೇವೆ ಎಂದು ತಿಳಿಸಿದರು.