News Karnataka Kannada
Monday, April 29 2024
ಮಂಗಳೂರು

ಮಂಗಳೂರು: ಮತಾಂಧ ಶಕ್ತಿಗಳನ್ನು ಹತ್ತಿಕ್ಕುವ ಕೆಲಸ ಮಾಡುತ್ತೇವೆ ಎಂದ ಸುನಿಲ್ ಕುಮಾರ್

Money is your election agenda, not Hindutva: Sunil Kumar to Muthalik
Photo Credit : Facebook

ಮಂಗಳೂರು: ಹಿಂದೂ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ ಸಂಬಂಧ ದಕ್ಷಿಣಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ಸುನಿಲ್ ಕುಮಾರ್ ಪ್ರತಿಕ್ರಿಯೆ ನೀಡಿದ್ದಾರೆ.

ಕಾರ್ಯಕರ್ತನ ಹತ್ಯೆ ಖಂಡಿಸಲು ನಿನ್ನೆ ನನ್ನ ಬಳಿ ಶಬ್ದಗಳಿರಲಿಲ್ಲ. ತನಿಖೆ ತೀವ್ರಗೊಳಿಸಲು ಸಿಎಂ, ಗೃಹಮಂತ್ರಿಗೆ ಮನವಿ ಮಾಡಿದ್ದೇನೆ. ಮನೆ ಮಗನನ್ನ ಕಳೆದುಕೊಂಡಿದ್ದೇವೆ. ಆದರೆ ಒಂದಂತೋ ಹೇಳಲು ಬಯಸುವೆ, ಇದರ ಹಿಂದಿರುವ ಶಕ್ತಿಗಳನ್ನ ಮಟ್ಟ ಹಾಕಲು ನಾವು ಸನ್ನದ್ದರಾಗಿದ್ದೇವೆ. ನಾವು ಸುಮ್ಮನಿರುವ ಪ್ರಶ್ನೆಯೇ ಇಲ್ಲ. ಸರ್ಕಾರ ತಕ್ಕ ಉತ್ತರವನ್ನ ಕಾನೂನಿನ ಚೌಕಟ್ಟಿನಲ್ಲಿ ನೀಡಲಿದೆ. ಮತಾಂಧ ಶಕ್ತಿಗಳನ್ನ ಹತ್ತಿಕ್ಕುವ ಕೆಲಸ ಮಾಡೇ ಮಾಡುತ್ತೇವೆ. ದ.ಕ. ಹಾಗೂ ಉಡುಪಿ ಜಿಲ್ಲೆಯಲ್ಲಿ ಕಳೆದ ಮೂರು ವರ್ಷಗಳಿಂದ ಶಾಂತಿ ಕದಡುವ ಕೆಲಸ ಆಗಿರಲಿಲ್ಲ.

ಕೇರಳದಿಂದ ಬಂದು ಶಾಂತಿ ಕದಡುವ ಕೆಲಸ ಮಾಡಲಾಗುತ್ತಿದೆ. ಸಾರ್ವಜನಿಕ ವಲಯದಲ್ಲಿ ಸಾಕಷ್ಟು ಆಕ್ರೋಶ ವ್ಯಕ್ತವಾಗಿದೆ. ಜನಾಕ್ರೋಶವನ್ನ ಸರ್ಕಾರ ಗಮನದಲ್ಲಿಟ್ಟುಕೊಂಡಿದೆ. ಹಂತಕರಿಗೆ ಯಾವ ಶಿಕ್ಷೆ ಕೊಡಬೇಕೋ ಆ ಶಿಕ್ಷೆ ಕೊಡಲಿದೆ. ಪೋಲಿಸ್ ಇಲಾಖೆಗೆ ಮುಕ್ತವಾದ ಅವಕಾಶ ನೀಡ್ತೇವೆ. ಮುಂದಿನ ಎರಡು ಮೂರು ದಿನಗಳ ಕಾಲ ಸಿಎಂ ಹಾಗೂ ಗೃಹ ಸಚಿವರ ಜೊತೆ ಸಂಪರ್ಕದಲ್ಲಿದ್ದುಕೊಂಡ ಮತೀಯ ಶಕ್ತಿಯನ್ನು ಮಟ್ಟ ಹಾಕುತ್ತೇವೆ ಎಂದು ತಿಳಿಸಿದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12790
NewsKannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು