ಪುತ್ತೂರು: ಬಿಜೆಪಿ ಫೈರ್ ಬ್ರಾಂಡ್ ನಾಯಕ ಬಸನಗೌಡ ಪಾಟೀಲ್ ಯತ್ನಾಳ್ ಅವರಿಗೆ ಪುತ್ತೂರಿನಲ್ಲಿ ಸ್ವಾಗತ ಕೋರಲಾಯಿತು.
ಪುತ್ತೂರಿಗೆ ಆಗಮಿಸಿದ ಯತ್ನಾಳ್ ಅವರು ನೇರವಾಗಿ ಬಿಜೆಪಿ ಕಚೇರಿಗೆ ತೆರಳಿದರು. ಬಳಿಕ ಪಂಚವಟಿಗೆ ಭೇಟಿ ನೀಡಿದರು. ವಿಮಾನದ ಮೂಲಕ ಮಂಗಳೂರಿಗೆ ಆಗಮಿಸಿದ ಯತ್ನಾಳ್ ಅವರು, ಅಲ್ಲಿಂದ ವಾಹನದಲ್ಲಿ ಪುತ್ತೂರಿಗೆ ಆಗಮಿಸಿದರು. ಬೆಳಿಗ್ಗೆಯಿಂದಲೇ ಪುತ್ತೂರಿನಲ್ಲಿ ತಮ್ಮ ನೆಚ್ಚಿನ ನಾಯಕನಿಗಾಗಿ ಅಭಿಮಾನಿಗಳು ಕಾದು ಕುಳಿತಿದ್ದರು.
ಪೊಲೀಸ್ ದೌರ್ಜನ್ಯಕ್ಕೆ ಒಳಗಾದ ಯುವಕರ ಆರೋಗ್ಯ ವಿಚಾರಿಸಿ, ಸೂಕ್ತ ನ್ಯಾಯ ಒದಗಿಸಿಕೊಡುವ ಸಲುವಾಗಿ ಆಗಮಿಸಿರುವ ಯತ್ನಾಳ್ ಅವರ ಭೇಟಿ ಮಹತ್ವ ಪಡೆದುಕೊಂಡಿದೆ.