ಮಂಗಳೂರು: ಹೃದಯಾಘಾತದಿಂದ ಗಂಭೀರ ಸ್ಥಿತಿಯಲ್ಲಿ ಆಸ್ಪತ್ರೆಗೆ ದಾಖಲಾಗಿದ್ದ ಪತ್ನಿಯ ಸಾವಿನ ಸುದ್ಧಿ ತಿಳಿದ ಕೆಲವೇ ನಿಮಿಷಗಳಲ್ಲಿ ಪತಿ ಕೀಟನಾಶಕ ಸೇವಿಸಿ ಆತ್ಮಹತ್ಯೆಗೈದ ಘಟನೆ ಕೊಣಾಜೆ ಪೊಲೀಸ್ ಠಾಣಾ ವ್ಯಾಪ್ತಿಯ ಗ್ರಾಮಚಾವಡಿಯಲ್ಲಿ ನಡೆದಿದೆ.
ಕೊಣಾಜೆ ಗ್ರಾಮ ಚಾವಡಿ ನಿವಾಸಿಗಳಾದ ಸೇಸಪ್ಪ ಪೂಜಾರಿ (60) ಆತ್ಮಹತ್ಯೆ ಮಾಡಿಕೊಂಡವರು. ಪತ್ನಿ ಮೀನಾಕ್ಷಿ (55) ಹೃದಯಾಘಾತಕ್ಕೆ ಒಳಗಾಗಿ ಆಸ್ಪತ್ರೆಗೆ ದಾಖಲಾಗಿದ್ದರು. ಚಿಕಿತ್ಸೆ ಪಡೆದು ಎಲ್ಲ ಗುಣಮುಖರಾಗಿದ್ದರು. ಆದರೆ ಎರಡು ದಿನಗಳ ಹಿಂದೆ ಮತ್ತೆ ಹೃದಯಾಘಾತ ಆಗಿದೆ. ಹೀಗಾಗಿ ಅವರನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಆದರೆ ತೀವ್ರ ಗಂಭೀರವಾಗಿದ್ದರಿಂದ ಚಿಕಿತ್ಸೆ ಫಲಕಾರಿಯಾಗದ ಕಾರಣ ಪತ್ನಿ ಸಾವನ್ನಪ್ಪಿದ್ದರು.
ಪತ್ನಿ ಸಾವನ್ನಪ್ಪಿರುವ ವಿಷಯ ತಿಳಿಯುತ್ತಿದ್ದಂತೆ ನೋವಿಗೆ ಒಳಗಾದ ಗಂಡ ವಿಷ ಸೇವನೆ ಮಾಡಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಖಾಸಗಿ ಶಾಲಾ ಬಸ್ ಡ್ರೈವರ್ ಆಗಿದ್ದರು. ಈ ದಂಪತಿಗೆ ಮಕ್ಕಳಿರಲಿಲ್ಲ.