Categories: ಮಂಗಳೂರು

ಮಂಗಳೂರು ಎಕ್ಸ್‌ಪ್ರೆಸ್‌ ರೈಲಿನಲ್ಲಿ ಮಹಿಳೆ ಮೇಲೆ ಹಲ್ಲೆ ಮಾಡಿ ದರೋಡೆ

ಮುಂಬಯಿ : ಮಂಗಳೂರಿನಿಂದ ಮುಂಬಯಿಗೆ ಹೋಗುತ್ತಿದ್ದ ಮಂಗಳೂರು ಎಕ್ಸ್‌ಪ್ರೆಸ್‌ ರೈಲಿನಲ್ಲಿ ಕುಂದಾಪುರದಿಂದ ಮುಂಬಯಿಗೆ ತೆರಳುತ್ತಿದ್ದ ಮಹಿಳೆ ಮೇಲೆ ಹಲ್ಲೆ ಮಾಡಿ ನಗ-ನಗದು ದರೋಡೆ ಮಾಡಿರುವ ಆಘಾತಕಾರಿ ಘಟನೆ ಶುಕ್ರವಾರ ಸಂಭವಿಸಿದೆ. ಮಹಿಳಾ ಕಂಪಾರ್ಟ್‌ಮೆಂಟ್‌ನಲ್ಲಿ ಒಬ್ಬರೇ ಇದ್ದ ವೇಳೆ ಥಾಣೆ ಮತ್ತು ಕಾಂಜೂರ್‌ಮಾರ್ಗ ರೈಲು ನಿಲ್ದಾಣಗಳ ನಡುವೆ ಈ ಘಟನೆ ಸಂಭವಿಸಿದೆ.

32ರ ಹರೆಯದ ವಿರಾರ್‌ ನಿವಾಸಿ ಮಹಿಳೆ ಕುಂದಾಪುರದಲ್ಲಿ ಕಳೆದ ಏಪ್ರಿಲ್‌ನಲ್ಲಿ ಬೈಪಾಸ್‌ ಸರ್ಜರಿಯಾಗಿರುವ ತಾಯಿಯನ್ನು ನೋಡಿಕೊಳ್ಳಲು ಹೋಗಿ ಹಿಂದಿರುಗುತ್ತಿದ್ದರು.

ರೈಲು ಥಾಣೆ ನಿಲ್ದಾಣ ತಲುಪಿದಾಗ ಮಹಿಳಾ ಕಂಪಾರ್ಟ್‌ಮೆಂಟ್‌ನಲ್ಲಿ ಮೂವರು ಪ್ರಯಾಣಿಕರು ಮಾತ್ರ ಇದ್ದರು. ಇಬ್ಬರು ಥಾಣೆ ನಿಲ್ದಾಣದಲ್ಲಿ ಇಳಿದ ಬಳಿಕ ರೈಲು ಹೊರಡುತ್ತಿದ್ದಂತೆ ದುಷ್ಕರ್ಮಿ ಮಹಿಳೆ ಒಬ್ಬರೇ ಇರುವುದನ್ನು ಗಮನಿಸಿ ಓಡಿಕೊಂಡು ಬಂದು ಹತ್ತಿದ್ದಾನೆ. ಮಹಿಳೆ ಅವನನ್ನು ಗದರಿಸಲು ಮುಂದಾದಾಗ ಬಾಯಿಮುಚ್ಚಿ ಕುಳಿತುಕೊಳ್ಳಲು ಹೇಳಿದ್ದಾನೆ. ಮಹಿಳೆ ಪೊಲೀಸರಿಗೆ ಫೋನ್‌ ಮಾಡಲು ಮುಂದಾದಾಗ ಫೋನ್‌ ಕಸಿದು ನೆಲಕ್ಕೆ ಅಪ್ಪಳಿಸಿ ಹಲ್ಲೆ ಮಾಡಿದ್ದಾನೆ. ಅವನ ಏಟಿಗೆ ಮಹಿಳೆ ಪ್ರಜ್ಞೆ ಕಳೆದುಕೊಂಡಿದ್ದರು. ರೈಲು ಕಾಂಜೂರುಮಾರ್ಗ ನಿಲ್ದಾಣಕ್ಕೆ ತಲುಪಿದಾಗ ಎಚ್ಚೆತ್ತ ಮಹಿಳೆ ಚೈನ್‌ ಎಳೆದು ರೈಲು ನಿಲ್ಲಿಸಿ ಪ್ಲಾಟ್‌ಫಾರ್ಮ್‌ನಲ್ಲಿದ್ದ ಜನರನ್ನು ಸಹಾಯಕ್ಕಾಗಿ ಕೂಗಿದರು. ಆದರೆ ಅಷ್ಟರಲ್ಲಿ ದರೋಡೆಕೋರ ಅವರ ಕತ್ತಿನಲ್ಲಿದ್ದ ಮಂಗಲಸೂತ್ರ ಮತ್ತು ಪರ್ಸ್‌ ಕಿತ್ತುಕೊಂಡು ನಿಧಾನವಾಗಿ ಚಲಿಸುತ್ತಿದ್ದ ರೈಲಿನಿಂದ ಹಾರಿ ಪಲಾಯನ ಮಾಡಿದ್ದಾನೆ.
ನಂತರ ಪೊಲೀಸರು ಮಹಿಳೆನ್ನು ದಾದರ್‌ ನಿಲ್ದಾಣಕ್ಕೆ ಕರೆದುಕೊಂಡು ಹೋಗಿ ದೂರು ದಾಖಲಿಸಿದ್ದಾರೆ.

ಇಲ್ಲಿ ಅವರ ಪತಿ ಅವರನ್ನು ಕರೆದುಕೊಂಡು ಹೋಗಲು ಬಂದು ಕಾಯುತ್ತಿದ್ದರು. ಅವರ ಜತೆ ಸಯನ್‌ ಆಸ್ಪತ್ರೆಗೆ ಹೋಗಿ ಚಿಕಿತ್ಸೆ ಪಡೆದುಕೊಂಡಿದ್ದಾರೆ. ಸಿಸಿಟಿವಿಯಲ್ಲಿ ಆರೋಪಿಯ ಗುರುತು ಪತ್ತೆಯಾಗಿದ್ದು, ಕ್ರಿಮಿನಲ್‌ ಹಿನ್ನೆಲೆಯಿರುವ ಆತ ಕೋವಿಡ್‌ ಕಾಲದಲ್ಲಿ ಜೈಲಿನಿಂದ ಬಿಡುಗಡೆಯಾಗಿದ್ದ ಎಂದು ಪೊಲೀಸರು ತಿಳಿಸಿದ್ದಾರೆ.

Sneha Gowda

Recent Posts

ಇಂದಿನ ರಾಶಿ ಫಲ : ಈ ರಾಶಿಯವರಿಗೆ ದಿಢೀರ್ ಪ್ರಯಾಣ ಸಾಧ್ಯತೆ

ಆರೋಗ್ಯ ಮಧ್ಯಮವಾಗಿರಲಿದೆ. ಹಣಕಾಸು ಬಾಕಿ ವ್ಯವಹಾರಗಳು ಪೂರ್ಣವಾಗಲಿದೆ. ಸಂಗಾತಿಯ ಆರೋಗ್ಯದ ಕಡೆಗೆ ಗಮನ ಇರಲಿ. ಆಮಂತ್ರಣ ಸಿಗುವ ಸಾಧ್ಯತೆ ಇದೆ.…

14 mins ago

ಇಂದು 2ನೇ ಹಂತದ ಮತದಾನ : ಮತದಾರರ ಪಟ್ಟಿಯ ಹೆಸರನ್ನು ಮೊಬೈಲ್‌ನಲ್ಲೇ ಚೆಕ್ ಮಾಡಿ

ಲೋಕಸಭಾ ಚುನಾವಣೆಯ ಮೂರನೇ ಹಂತದ ಮತದಾನವು ಇಂದು (ಮೇ 7) ನಡೆಯಲಿದೆ. ಕರ್ನಾಟದಲ್ಲಿ ಎರಡನೇ ಅಥವಾ ಕೊನೆಯ ಹಂತದ ಮತದಾನವೂ…

28 mins ago

ಭೂದೇವಿ ಸಮೇತ ಶ್ರೀಲಕ್ಷ್ಮಿವರಾಹಸ್ವಾಮಿಗೆ ಅಭಿಷೇಕ

ವರಹಾ ಜಯಂತಿಯ ಅಂಗವಾಗಿ ಕೃ?ರಾಜಪೇಟೆ ತಾಲ್ಲೂಕಿನ ಕಲ್ಲಹಳ್ಳಿಯ ಭೂದೇವಿ ಸಮೇತ ಶ್ರೀಲಕ್ಷ್ಮಿ ಭೂವರಾಹಸ್ವಾಮಿಯ ಶಿಲಾಮೂರ್ತಿಗೆ ವಿಶೇ? ಅಭಿ?ಕ ನಡೆಯಿತಲ್ಲದೆ, ಸ್ವಾಮಿಯ…

8 hours ago

ನನ್ನ ವಿರುದ್ಧ ದೇವರಾಜೇಗೌಡ ಮಾಡಿರುವ ಆಪಾದನೆಗಳು ಆಧಾರ ರಹಿತ: ಡಿಕೆ ಶಿವಕುಮಾರ್

ಹಾಸನ ವಿಡಿಯೋ ಪೆನ್​ಡ್ರೈವ್​ ಸೂತ್ರಧಾರಿ ಡಿಕೆ ಶಿವಕುಮಾರ್ ಎಂದು ಬಿಜೆಪಿ ಮುಖಂಡ, ವಕೀಲ ದೇವರಾಜೇಗೌಡ ಗಂಭೀರ ಆರೋಪ ಮಾಡಿ ಆಡಿಯೋವೊಂದನ್ನು…

8 hours ago

ರಾಜ್ಯದ ಹಲವೆಡೆ ಮುಂದಿನ 5 ದಿನಗಳ ಕಾಲ‌ ಗುಡುಗು ಸಹಿತ ಮಳೆ ಸಾಧ್ಯತೆ

ರಾಜ್ಯದ ಹಲವೆಡೆ ಇಂದಿನಿಂದ ಮೇ 11ರವರೆಗೆ ವರುಣ ಆಗಮನ ಆಗುವ ಮುನ್ಸೂಚನೆ. ಹಾಗೂ ಮುಂದಿನ 5 ದಿನಗಳ ಕಾಲ‌ ಗುಡುಗು…

9 hours ago

ಬೀದರ್ ಮಾರುಕಟ್ಟೆಯಲ್ಲಿ ಎಲ್ಲಿ ನೋಡಿದರು ಮಾವಿನ ಹಣ್ಣಿನ ದರ್ಬಾರ್‌

ಯುಗಾದಿ ಮುಗಿಯುತ್ತಿದ್ದಂತೆ ಎಲ್ಲೆಡೆ ಮಾವಿನ ಹಣ್ಣುಗಳ ದರ್ಬಾರ ಕಂಡುಬರುತ್ತಿದೆದೆ. ಮಾರುಕಟ್ಟೆಗೆ ಮಾವಿನಕಾಯಿ ಹೆಚ್ಚಾಗಿ ಬರುತ್ತಿದೆ. ಸಾಲಾಗಿ ಜೋಡಿಸಿಟ್ಟ ಮಾವಿನ ಹಣ್ಣು…

9 hours ago