News Karnataka Kannada
Sunday, April 28 2024
ಮಂಗಳೂರು

ದ್ವಿಚಕ್ರ ವಾಹನಕ್ಕೆ ಕಾರು ಡಿಕ್ಕಿ, ಮಹಿಳೆ ಗಂಭೀರ

Woman critically injured after car collides with two-wheeler
Photo Credit : Pixabay

ಬೆಳ್ತಂಗಡಿ: ದ್ವಿಚಕ್ರ ವಾಹನಕ್ಕೆ ಕಾರು ಡಿಕ್ಕಿ ಹೊಡೆದ ಪರಿಣಾಮ ಮಹಿಳೆ ಗಂಭೀರ ಗಾಯಗೊಂಡ ಘಟನೆ ಕನ್ಯಾಡಿಯಲ್ಲಿ ನಡೆದಿದೆ. ಬೆಳ್ತಂಗಡಿಯ ದೇವಸ್ಥಾನವೊಂದರ ಸಹ ಅರ್ಚಕ ಅಮೇಯ ಭಟ್‌ ಅವರ ಪತ್ನಿ ಶ್ರೀರಕ್ಷಾ ಕಿಣಿ (22) ಅಪಘಾತಕ್ಕೀಡಾದವರು.

ಅಮೇಯ ಭಟ್‌ ಅವರು ತನ್ನ ತಾಯಿ ಮನೆ ಕನ್ಯಾಡಿಗೆ ತೆರಳಿದ್ದು, ಅಲ್ಲಿಂದ ಹಿಂದಿರುಗಿ ಬೆಳ್ತಂಗಡಿಗೆ ಬರುತ್ತಿದ್ದ ವೇಳೆ ಉಜಿರೆ ಕಡೆಯಿಂದ ಬರುತ್ತಿದ್ದ ರಮೇಶ್‌ ಎಂಬಾತ ಚಲಾಯಿಸುತ್ತಿದ್ದ ಕಾರು ದ್ವಿಚಕ್ರ ವಾಹನಕ್ಕೆ ಹಾಗೂ ಹತ್ಯಡ್ಕದ ಸತೀಶ್‌ ಶೆಟ್ಟಿ ಅವರು ಚಲಾಯಿಸುತ್ತಿದ್ದ ಕಾರಿಗೆ ಡಿಕ್ಕಿ ಹೊಡೆದಿದೆ.

ಇನ್ನು ಡಿಕ್ಕಿಯ ರಭಸಕ್ಕೆ ಸ್ಕೂಟರ್‌ ಇಬ್ಭಾಗವಾಗಿ ಸಂಪೂರ್ಣ ಜಖಂಗೊಂಡು ಸವಾರೆ ಗಂಭೀರ ಗಾಯಗೊಂಡಿದ್ದು, ಅವರನ್ನು ಸ್ಥಳೀಯರು ಉಜಿರೆ ಖಾಸಗಿ ಆಸ್ಪತ್ರೆಗೆ ಕರೆದೊಯ್ದಿದ್ದು, ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಗಿದೆ. ಈ ಬಗ್ಗೆ ಬೆಳ್ತಂಗಡಿ ಸಂಚಾರ ಠಾಣೆಯಲ್ಲಿ ಸತೀಶ್‌ ಶೆಟ್ಟಿಯವರು ದೂರು ದಾಖಲಿಸಿದ್ದು ಪೊಲೀಸರು ಪರಿಶೀಲನೆ ನಡೆಸಿದ್ದಾರೆ.

ಅಪಘಾತ ಎಸಗಿದ ಕಾರು ಬೆಂಗಳೂರು ನೋಂದಣಿ ಹೊಂದಿದ್ದು, ಲೋಕೋಪಯೋಗಿ ಇಲಾಖೆಗೆ ಸೇರಿದ್ದಾಗಿದೆ. ಆದರೆ ಕಾರಿನಲ್ಲಿ ಇಲಾಖೆಯ ಅಧಿಕಾರಿಗಳು ಯಾರೂ ಇರಲಿಲ್ಲ. ಚಾಲಕ ಮತ್ತು ಇನ್ನೋರ್ವ ವ್ಯಕ್ತಿ ಮಾತ್ರ ಇದ್ದರು ಎಂದು ವರದಿಯಾಗಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
1616

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು