Categories: ಮಂಗಳೂರು

ದ್ವಿಚಕ್ರ ವಾಹನಕ್ಕೆ ಕಾರು ಡಿಕ್ಕಿ, ಮಹಿಳೆ ಗಂಭೀರ

ಬೆಳ್ತಂಗಡಿ: ದ್ವಿಚಕ್ರ ವಾಹನಕ್ಕೆ ಕಾರು ಡಿಕ್ಕಿ ಹೊಡೆದ ಪರಿಣಾಮ ಮಹಿಳೆ ಗಂಭೀರ ಗಾಯಗೊಂಡ ಘಟನೆ ಕನ್ಯಾಡಿಯಲ್ಲಿ ನಡೆದಿದೆ. ಬೆಳ್ತಂಗಡಿಯ ದೇವಸ್ಥಾನವೊಂದರ ಸಹ ಅರ್ಚಕ ಅಮೇಯ ಭಟ್‌ ಅವರ ಪತ್ನಿ ಶ್ರೀರಕ್ಷಾ ಕಿಣಿ (22) ಅಪಘಾತಕ್ಕೀಡಾದವರು.

ಅಮೇಯ ಭಟ್‌ ಅವರು ತನ್ನ ತಾಯಿ ಮನೆ ಕನ್ಯಾಡಿಗೆ ತೆರಳಿದ್ದು, ಅಲ್ಲಿಂದ ಹಿಂದಿರುಗಿ ಬೆಳ್ತಂಗಡಿಗೆ ಬರುತ್ತಿದ್ದ ವೇಳೆ ಉಜಿರೆ ಕಡೆಯಿಂದ ಬರುತ್ತಿದ್ದ ರಮೇಶ್‌ ಎಂಬಾತ ಚಲಾಯಿಸುತ್ತಿದ್ದ ಕಾರು ದ್ವಿಚಕ್ರ ವಾಹನಕ್ಕೆ ಹಾಗೂ ಹತ್ಯಡ್ಕದ ಸತೀಶ್‌ ಶೆಟ್ಟಿ ಅವರು ಚಲಾಯಿಸುತ್ತಿದ್ದ ಕಾರಿಗೆ ಡಿಕ್ಕಿ ಹೊಡೆದಿದೆ.

ಇನ್ನು ಡಿಕ್ಕಿಯ ರಭಸಕ್ಕೆ ಸ್ಕೂಟರ್‌ ಇಬ್ಭಾಗವಾಗಿ ಸಂಪೂರ್ಣ ಜಖಂಗೊಂಡು ಸವಾರೆ ಗಂಭೀರ ಗಾಯಗೊಂಡಿದ್ದು, ಅವರನ್ನು ಸ್ಥಳೀಯರು ಉಜಿರೆ ಖಾಸಗಿ ಆಸ್ಪತ್ರೆಗೆ ಕರೆದೊಯ್ದಿದ್ದು, ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಗಿದೆ. ಈ ಬಗ್ಗೆ ಬೆಳ್ತಂಗಡಿ ಸಂಚಾರ ಠಾಣೆಯಲ್ಲಿ ಸತೀಶ್‌ ಶೆಟ್ಟಿಯವರು ದೂರು ದಾಖಲಿಸಿದ್ದು ಪೊಲೀಸರು ಪರಿಶೀಲನೆ ನಡೆಸಿದ್ದಾರೆ.

ಅಪಘಾತ ಎಸಗಿದ ಕಾರು ಬೆಂಗಳೂರು ನೋಂದಣಿ ಹೊಂದಿದ್ದು, ಲೋಕೋಪಯೋಗಿ ಇಲಾಖೆಗೆ ಸೇರಿದ್ದಾಗಿದೆ. ಆದರೆ ಕಾರಿನಲ್ಲಿ ಇಲಾಖೆಯ ಅಧಿಕಾರಿಗಳು ಯಾರೂ ಇರಲಿಲ್ಲ. ಚಾಲಕ ಮತ್ತು ಇನ್ನೋರ್ವ ವ್ಯಕ್ತಿ ಮಾತ್ರ ಇದ್ದರು ಎಂದು ವರದಿಯಾಗಿದೆ.

Ashika S

Recent Posts

96 ಲೋಕಸಭಾ ಕ್ಷೇತ್ರಗಳಲ್ಲಿ ಇಂದು 4ನೇ ಹಂತದ ಮತದಾನ

ಲೋಕಸಭೆ ಚುನಾವಣೆಯ (4ನೇ ಹಂತವು ಇಂದು (ಮೇ 13) 10 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ ನಡೆಯಲಿದೆ. ಇಂದು 96…

10 mins ago

ಅನೈತಿಕ ಸಂಬಂಧ ಶಂಕೆ: ಬೀದರ್​​ನಲ್ಲಿ ಯುವಕರಿಂದ ನೈತಿಕ ಪೊಲೀಸ್​ ಗಿರಿ

ಹಿಂದೂ ಯುವಕನ ಜೊತೆ ಮುಸ್ಲಿಂ ಸಮುದಾಯದ ಮಹಿಳೆ ಕುಳಿತಿದಕ್ಕೆ ಅದೇ ಕೋಮಿನ ಯುವಕರ ಗುಂಪೊಂದು ಹಲ್ಲೆ ನಡೆಸಿ, ನೈತಿಕ ಪೊಲೀಸ್​​…

8 hours ago

ಸಂಗೊಳ್ಳಿರಾಯಣ್ಣ ಪ್ರತಿಮೆ ಭಗ್ನಗೊಳಿಸಿದ ಆರೋಪಿ ಸೆರೆ

ತಾಲ್ಲೂಕಿನ ಅಕ್ಕಿಹೆಬ್ಬಾಳು ಹೋಬಳಿಯ ಬೀಕನಹಳ್ಳಿ ಗ್ರಾಮದಲ್ಲಿ ಕಳೆದ ಮೂರು ದಿನಗಳ ಹಿಂದೆ  ಸ್ವಾತಂತ್ರ್ಯ ಹೋರಾಟಗಾರ ಸಂಗೊಳ್ಳಿರಾಯಣ್ಣ ಪ್ರತಿಮೆಯನ್ನು ಭಗ್ನಗೊಳಿಸಿದ್ದ ಆರೋಪಿಯನ್ನು…

8 hours ago

ನಗರದ ಪ್ರತಿಷ್ಠಿತ ಆರು ಆಸ್ಪತ್ರೆಗಳಿಗೆ ಹುಸಿ ಬಾಂಬ್ ಬೆದರಿಕೆ

ಸಿಲಿಕಾನ್ ಸಿಟಿಯಲ್ಲಿ ಹುಸಿ ಬಾಂಬ್ ಬೆದರಿಕೆ ಮೇಲ್ ಮುಂದುವರೆದಿದ್ದು, ನಗರದ ಪ್ರತಿಷ್ಠಿತ ಆರು ಆಸ್ಪತ್ರೆಗಳಾದ ನಾಗವಾರದ ಸೇಂಟ್ ಫಿಲೋಮಿನಾ ಸೇರಿದಂತೆ…

8 hours ago

ಬೀದರ್‌: ಜಿಲ್ಲೆಯಾದ್ಯಂತ ತಂಪೆರೆದ ಮಳೆ, ಸಿಡಿಲಿಗೆ ವ್ಯಕ್ತಿ ಸಾವು

ಜಿಲ್ಲೆಯಾದ್ಯಂತ ಭಾನುವಾರ ಗುಡುಗು, ಸಿಡಿಲು ಸಹಿತ ಮಳೆಯಾಗಿದ್ದು, ವಾತಾವರಣ ತಂಪಾಗಿದೆ.

9 hours ago

ಆಮ್ ಆದ್ಮಿ ಪಕ್ಷವನ್ನು ಚುನಾವಣೆಯಲ್ಲಿ ಆಯ್ಕೆ ಮಾಡಿದರೆ ನಾನು ಮತ್ತೆ ಜೈಲಿಗೆ ಹೋಗಬೇಕಾಗಿಲ್ಲ

ಮಧ್ಯಂತರ ಜಾಮೀನಿನ ಮೇಲೆ ಜೈಲಿನಿಂದ ಹೊರಬಂದ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರು ದೆಹಲಿಯ ಮೋತಿ ನಗರ ಪ್ರದೇಶದಲ್ಲಿ ಚುನಾವಣಾ…

10 hours ago