News Karnataka Kannada
Saturday, May 18 2024
ಮಂಗಳೂರು

ಇಳಂತಿಲ ಪೆದಮಲೆಯಲ್ಲಿ ವಿದ್ಯುತ್‌ ಶಾಕ್‌ ನಿಂದ ಮಹಿಳೆ ಮೃತ್ಯು

Kokkada: Woman dies after tree falls on her head
Photo Credit : News Kannada

ಉಪ್ಪಿನಂಗಡಿ: ಉಪ್ಪಿನಂಗಡಿ ಇಳಂತಿಲ ಗ್ರಾಮದ ಪೆದಮಲೆಯಲ್ಲಿ ವಿದ್ಯುತ್ ಶಾಕ್ ಹೊಡೆದು ಕರಾಯ ಗ್ರಾಮದ ಸಗುಣ ಎಂಬವರು ಮೃತಪಟ್ಟ ಘಟನೆ ನಡೆದಿದೆ.

ಇಳಂತಿಲ ಗ್ರಾಮದ ಪೆದಮಲೆ ಎಂಬಲ್ಲಿ ಮನೆಯ ಕೆಲಸಕ್ಕೆ ತೆರಳಿ ಅವರ ಮನೆಯ ಸಮೀಪದ ಗುಡ್ಡದಲ್ಲಿ ಕೆಲಸ ಮಾಡುತ್ತಿದ್ದಾಗ ಪೊದೆಗಳ ನಡುವೆ ವಿದ್ಯುತ್ ತಂತಿಯೊಂದು ತುಂಡಾಗಿ ಬಿದ್ದಿರುವುದನ್ನು ಸ್ಪರ್ಶಿಸಿ ಸಗುಣರವರು ವಿದ್ಯುತ್ ಪ್ರವಹಿಸಿ ಬಿದ್ದಿದ್ದಾರೆ. ಅವರನ್ನು ಅಲ್ಲಿದ್ದವರು ಆರೈಕೆ ಮಾಡಿ ಬಳಿಕ ಚಿಕಿತ್ಸೆಗಾಗಿ ಪುತ್ತೂರು ಸರಕಾರಿ ಸಾರ್ವಜನಿಕ ಆಸ್ಪತ್ರೆಗೆ ಕರೆ ತಂದಾಗ ವೈದ್ಯರು ಸಗುಣರವರನ್ನು ಪರೀಕ್ಷಿಸಿದಾಗ ಆ ವೇಳೆಗಾಗಲೇ ಅವರು ಮೃತಪಟ್ಟಿರುವುದಾಗಿ ವೈದ್ಯರು ತಿಳಿಸಿದ್ದಾರೆ.

ಈ ಘಟನೆಗೆ ಬಗ್ಗೆ ಮೆಸ್ಕಾಂ ಇಲಾಖೆಯವರ ನಿರ್ಲಕ್ಷತನದಿಂದ ತುಂಡಾಗಿ ಬಿದ್ದಿರುವ ವಿದ್ಯುತ್ ತಂತಿಯ ಬಗ್ಗೆ ಯಾವುದೇ ಗಮನ ಹರಿಸದೆ ನಿರ್ಲಕ್ಷ್ಯ ವಹಿಸಿರುವ ಬಗ್ಗೆ ಹಾಗೂ ಅಂಗಾರು ಮತ್ತು ಅವರ ಪತಿ ಸಗುಣರವರನ್ನು ತುಂಡಾಗಿ ಬಿದ್ದಿರುವ ವಿದ್ಯುತ್ ತಂತಿಯಿರುವ ಸ್ಥಳದಲ್ಲಿ ಕೆಲಸಕ್ಕೆ ನೇಮಿಸಿ ಕೆಲಸ ಮಾಡಿಸಿರುವ ಬಗ್ಗೆ ಜಯಂತ ಕುಮಾರ್‌ರವರ ವಿರುದ್ಧ ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12792
News Karnataka Kannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು