ಪುತ್ತೂರು: ಮಹಿಳೆ ಮೇಲೆ ದುಷ್ಕರ್ಮಿಗಳು ಅತ್ಯಾಚಾರ ಎಸಗಿದ ಘಟನೆ ಪುತ್ತೂರಿನ ಸಾಲ್ಮರ ಎಂಬಲ್ಲಿ ನಿನ್ನೆ ರಾತ್ರಿ ನಡೆದಿದೆ. ದೌರ್ಜನ್ಯಕ್ಕೊಳಗಾದ ಮಹಿಳೆ ಆಸ್ಪತ್ರೆಗೆ ದಾಖಲಿಸಲಾಗಿದೆ. ಚೆನ್ನರಾಯಪಟ್ಟಣ ಮೂಲದ ಮಹಿಳೆ ಎಂದು ತಿಳಿದು ಬಂದಿದೆ.
ಅರೋಪಿ ಪುತ್ತೂರು ಬಸ್ ನಿಲ್ದಾಣದ ಬಳಿ ಮಹಿಳೆಗೆ ಮತ್ತು ಬರಿಸುವ ಪಾನೀಯ ನೀಡಿ ಕರೆದುಕೊಂಡು ಹೋಗಿದ್ದಾನೆ. ಅತ್ಯಾಚಾರ ನಡೆಸಿದ ಬಳಿಕ ತನ್ನ ಸಹಚರರನ್ನು ಫೋನ್ ಮಾಡಿ ಕರೆಸಿಕೊಳ್ಳುತ್ತಿದ್ದ ಆರೋಪಿ. ವಿಚಾರ ತಿಳಿದು ಆರೋಪಿ ಕೈಯಿಂದ ಮಹಿಳೆ ತಪ್ಪಿಸಿಕೊಂಡಿದ್ದಾಳೆ.
ಮತ್ತಿನ ಪಾನೀಯ ಕುಡಿದ ಪರಿಣಾಮ ಪ್ರಜ್ಞೆ ತಪ್ಪಿ ರಸ್ತೆಯ ಬಳಿ ಬಿದ್ದ ಮಹಿಳೆಯನ್ನು ಗಮನಿಸಿದ ಸಾರ್ವಜನಿಕರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಮಹಿಳೆಯನ್ನು ಪುತ್ತೂರು ಸರಕಾರಿ ಆಸ್ಪತ್ರೆಗೆ ಪೊಲೀಸರು ದಾಖಲಿಸಿದ್ದಾರೆ.