ಮಂಗಳೂರು: ಕೆಲಸ ಕೊಡಿಸುವ ನೆಪದಲ್ಲಿ ಮಹಿಳೆಗೆ ಲೈಂಗಿಕ ಕಿರುಕುಳ ನೀಡಿದ ಘಟನೆ ಬೆಳ್ತಂಗಡಿ ತಾಲೂಕಿನ ಉಜಿರೆಯಲ್ಲಿ ನಡೆದಿದೆ.
ಉಜಿರೆಯಲ್ಲಿರುವ ಮಹಾವೀರ ಟೆಕ್ಸ್ ಟೈಲ್ ಹಾಗೂ ಧರ್ಮಸ್ಥಳದಲ್ಲಿರುವ ಮಹಾವೀರ ಸೂಪರ್ ಮಾರ್ಕೆಟ್ ಮಾಲೀಕ ಉದ್ಯಮಿ ಪ್ರಭಾಕರ ಹೆಗ್ಡೆ ಮಹಿಳಗೆ ಲೈಂಗಿಕ ಕಿರುಕುಳ ನೀಡಿದ್ದಾರೆ.
ತನ್ನ ಕಾರಿನಲ್ಲಿ 20 ವರ್ಷದ ವಿವಾಹಿತ ಮಹಿಳೆಗೆ ತನ್ನ ಸೂಪರ್ ಮಾರ್ಕೇಟ್ ನ ಬಿಲ್ಲಿಂಗ್ ತೋರಿಸೋ ನೆಪದಲ್ಲಿ ಕಾರಿನಲ್ಲಿ ಕರೆದೊಯ್ದು ಕಿಡ್ನಾಪ್ ಮಾಡಿ ಮೈಗೆ ಕೈ ಹಾಕಿ ಲೈಂಗಿಕ ಕಿರಿಕುಳ ನೀಡಿದ್ದಾರೆ. ಕಾರಿನಲ್ಲಿ ಕಿರುಕುಳ ನೀಡುವಾಗ ಕಿರುಚಾಡಿ ಕಾರಿನಿಂದ ಹೊರಬಂದ ಯುವತಿಯನ್ನು ಬೈಕ್ ನಲ್ಲಿ ಬಂದ ಯುವಕರು ಮಹಿಳೆಯ ರಕ್ಷಣೆ ಮಾಡಿದ್ದಾರೆ.
ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಮಹಿಳೆ ಮತ್ತು ಆಕೆಯ ಗಂಡ ದೂರು ದಾಖಲಿಸಿದ್ದು. ದೂರು ದಾಖಲಾದ ಬಳಿಕ ಆರೋಪಿ ಪರಾರಿಯಾಗಿದ್ದಾನೆ.