News Karnataka Kannada
Monday, April 29 2024
ಮಂಗಳೂರು

ಪುತ್ತೂರು, ಸುಳ್ಯದಲ್ಲಿ ಮಹಿಳಾ ಅಭ್ಯರ್ಥಿಗಳಿಗೆ ಅವಕಾಶ, ಗೆದ್ದೇ ಗೆಲ್ತೀವಿ

Women candidates in Puttur and Sullia will be allowed to win.
Photo Credit : News Kannada

ಪುತ್ತೂರು: ರಾಜ್ಯದಲ್ಲಿ ಬಿಜೆಪಿ 130ಕ್ಕೂ ಅಧಿಕ ಸೀಟ್ ಪಡೆದುಕೊಳ್ಳಬೇಕು. ಇದಕ್ಕೆ ಪೂರಕವಾಗಿ ಬಿಜೆಪಿಯ ಭದ್ರ ಬುನಾದಿ ಇರುವ ಪುತ್ತೂರಿನಲ್ಲೂ ಬಿಜೆಪಿ ಗೆಲ್ಲಲಿದೆ ಎಂದು ಕರ್ನಾಟಕ ಬಿಜೆಪಿ ಚುನಾವಣಾ ಸಹ ಪ್ರಭಾರಿ ಅಣ್ಣಾಮಲೈ ಹೇಳಿದರು.

ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಬಂಡಾಯ, ಪಕ್ಷೇತರ ಅಭ್ಯರ್ಥಿಗಳ ಬಗ್ಗೆ ಮಾತನಾಡಲ್ಲ. ಕರಾವಳಿಯಲ್ಲಿ ಬಿಜೆಪಿ ಭದ್ರಬುನಾದಿ ಇರುವ ಕಾರಣ, ಪಕ್ಷೇತರರು ಬಿಜೆಪಿಯಲ್ಲಿ ಟಿಕೇಟ್ ಕೊಡಬೇಕು ಎಂದು ಕೇಳುತ್ತಾರೆ. ಬಿಜೆಪಿ ಡೆಮಾಕ್ರಾಟಿಕ್ ಪಕ್ಷ. ಆದ್ದರಿಂದ ಇದು ತಪ್ಪು ಎನ್ನುತ್ತಿಲ್ಲ. ಆದರೆ ಮತದಾರರು ಆಲೋಚಿಸಬೇಕು. ಎಷ್ಟೋ ಕಾರ್ಯಕರ್ತರು ಪಕ್ಷಕ್ಕಾಗಿ ಪ್ರಾಣ ನೀಡಿದ್ದಾರೆ. ನಾಯಕರು ಶ್ರಮ ವಹಿಸಿದ್ದಾರೆ. ಶಾಸಕಸಂಜೀವ ಮಠಂದೂರು ಅಂತಹ ಶಾಸಕರು ಬಹಳ ಅಭಿವೃದ್ಧಿ ಕೆಲಸ ಮಾಡಿದ್ದಾರೆ. ಅದು ವ್ಯರ್ಥವಾಗದಂತೆ ನೋಡಿಕೊಳ್ಳಿ ಎಂದು ಮನವಿ ಮಾಡಿಕೊಂಡರು.

ಅಭ್ಯರ್ಥಿ ಆಶಾ ತಿಮ್ಮಪ್ಪ, ಶಾಸಕ ಸಂಜೀವ ಮಠಂದೂರು, ಸಾಜಾ ರಾಧಾಕೃಷ್ಣ ಆಳ್ವ, ಪಿ.ಜಿ. ಜಗನ್ನಿವಾಸ್ ರಾವ್, ಬಿಂದು ಸುರೇಶ್, ಅಡ್ವೊಕೇಟ್ ಸುರೇಶ್, ಅಪ್ಪಯ್ಯ ಮಣಿಯಾಣಿ, ಗೋಪಾಲಕೃಷ್ಣ ಹೇರಳೆ, ಬೂಡಿಯಾರ್ ರಾಧಾಕೃಷ್ಣ ರೈ, ಆರ್.ಸಿ. ನಾರಾಯಣ್, ಚಂದ್ರಶೇಖರ್ ರಾವ್ ಬಪ್ಪಳಿಗೆ ಉಪಸ್ಥಿತರಿದ್ದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12792
News Karnataka Kannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು