ಬಂಟ್ವಾಳ: ಪ್ರಥಮ ಶಾಸಕತ್ವದ ಅವಧಿಯಲ್ಲಿ 2095 ಕೋಟಿ ರೂ.ಅನುದಾನಗಳ ಮೂಲಕ ಬಂಟ್ವಾಳ ಸರ್ವಾಂಗೀಣ ಅಭಿವೃದ್ಧಿ ಮಾಡಿದ್ದೇನೆ, ಇದು ನೀವು ನೀಡಿದ ಮತದ ಪರಿಣಾಮ. ನೀಡಿದ ಮತಕ್ಕೆ ಕರ್ತವ್ಯ ಎಂದು ಅಭಿವೃದ್ಧಿ ಮಾಡಿದ್ದೇನೆ ಎಂದು ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ಅವರು ತಿಳಿಸಿದರು.
ಬಂಟ್ವಾಳ ಸಜೀಪ ಮುನ್ನೂರು ಶಕ್ತಿ ಕೇಂದ್ರದ ಎನ್ಕೆ.ಶಿವ ಅವರ ಮನೆಯಲ್ಲಿ ನಡೆದ ಪ್ರಮುಖ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದರು.
ಕಾನೂನು ಪ್ರಕೋಷ್ಟದ ಸಂಚಾಲಕ ಶ್ರೀಧರ್ ಶೆಟ್ಟಿ ಪುಳಿಂಚ ಮಾತನಾಡಿ, ಸಾತ್ವಿಕ ಮನೋಭಾವದ ಓರ್ವ ನಿಷ್ಠಾವಂತ ರಾಜಕಾರಣಿ ರಾಜ್ಯಕ್ಕೆ ಮಾದರಿ, ಇಂತಹ ಸರ್ವಜನರ ಹೃದಯಗೆದ್ದ ದೇವತಾ ಮನುಷ್ಯ ರಾಜೇಶ್ ನಾಯ್ಕ್. ಅವರು ನಿರಂತರವಾಗಿ ಗೆಲುವು ಸಾಧಿಸಬೇಕು ಎಂದು ಅವರು ಹೇಳಿದರು.
ಬೂಡ ಅಧ್ಯಕ್ಷ ದೇವದಾಸ್ ಶೆಟ್ಟಿ ಮಾತನಾಡಿ, ಕ್ಷೇತ್ರದಲ್ಲಿ ನಿರಂತರವಾದ ಹೋರಾಟದ ಫಲವಾಗಿ ಬಿಜೆಪಿ ಅಧಿಕಾರಕ್ಕೆ ಬಂದಿದ್ದು, ರಾಜೇಶ್ ನಾಯ್ಕ್ ಅವರ ಕನಸಿನ ಬಂಟ್ವಾಳವಾಗಿ ಶಾಂತಿಯ ಬಂಟ್ವಾಳವಾಗಿ ಬದಲಾವಣೆ ಮಾಡಿದ್ದಾರೆ ಎಂದು ಅವರು ತಿಳಿಸಿದರು.
ನಿಕಟಪೂರ್ವ ಜಿ.ಪ.ಸದಸ್ಯ ರವೀಂದ್ರ ಕಂಬಳಿ ಮಾತನಾಡಿ, ಸ್ವಂತ ಜಮೀನಿನನ್ನು ಮಾರಾಟ ಮಾಡಿ, ವೈಯಕ್ತಿಕ ಹಣವನ್ನು ಖರ್ಚು ಮಾಡಿ ರಾಜಕೀಯ ಮಾಡಿದ ರಾಜ್ಯದ ಏಕೈಕ ವ್ಯಕ್ತಿ ರಾಜೇಶ್ ನಾಯ್ಕ್ ಅವರಾಗಿದ್ದು, ಅಂತಹ ಓರ್ವ ಆದರ್ಶ ವ್ಯಕ್ತಿತ್ವದ ರಾಜಕಾರಣಿಯನ್ನು ಬಂಟ್ವಾಳದಲ್ಲಿ ಗೆಲ್ಲಿಸುವಂತೆ ಮನವಿ ಮಾಡಿದರು.
ಕ್ಷೇತ್ರದ ಅಧ್ಯಕ್ಷ ದೇವಪ್ಪ ಪೂಜಾರಿ, ಪ್ರಧಾನ ಕಾರ್ಯದರ್ಶಿಗಳಾದ ಡೊಂಬಯ್ಯ ಅರಳ, ರವೀಶ್ ಶೆಟ್ಟಿ, ಕಾರ್ಯದರ್ಶಿಗಳಾದ ರಮನಾಥ ರಾಯಿ,ಪುರುಷೋತ್ತಮ ಶೆಟ್ಟಿ ವಾಮದಪದವು, ಸುದರ್ಶನ ಬಜ, ಸಜೀಪ ಮುನ್ನೂರು ಶಕ್ತಿ ಕೇಂದ್ರದ ಪ್ರಭಾರಿ ಸುರೇಶ್ ಕೋಟ್ಯಾನ್, ಗ್ರಾಮಪಂಚಾಯತ್ ಸದಸ್ಯರುಗಳಾದ ಪ್ರವೀಣ್ ಗಟ್ಟಿ, ಸುಮತಿ ಎಸ್, ನವೀನ್ ಆಂಚನ್, ಸುಂದರ ಪೂಜಾರಿ, ದಯಲಕ್ಮೀ, ಅನಿತಾ, ಬೂತ್ ಅಧ್ಯಕ್ಷರುಗಳಾದ ಸೋಮಶೇಖರ್ ಆಲಡಿ, ವಿನೊಧ್ ನಾಯ್ಕ , ರೂಪೇಶ್ ,ಗೋಪಾಲ ಮತ್ತಿತರರು ಉಪಸ್ಥಿತರಿದ್ದರು.