ಬೆಳಾಲು: ಧರ್ಮಸ್ಥಳ ಶ್ರೀ ಮಂಜುನಾಥೇಶ್ವರ ಪ್ರೌಢಶಾಲೆಯಲ್ಲಿ ವಿಶ್ವ ಯೋಗ ದಿನಾಚರಣೆ ಜರಗಿತು. ಮುಖ್ಯ ಅತಿಥಿಗಳಾಗಿ ಬೆಳಾಲಿನ ಶ್ರೀಕೃಷ್ಣ ಕ್ಲಿನಿಕ್ ನ ವೈದ್ಯರಾದ ಡಾ. ಚೇತನ್ ಆಗಮಿಸಿ ಕಾರ್ಯಕ್ರಮಕ್ಕೆ ಚಾಲನೆಯನ್ನು ನೀಡಿದರು.
ಮುಖ್ಯೋಪಾಧ್ಯಾಯರಾದ ರಾಮಕೃಷ್ಣ ಭಟ್ ರವರು ಸಭೆಯ ಅಧ್ಯಕ್ಷತೆ ವಹಿಸಿದ್ದರು. ಶಾಲೆಯ ದೈಹಿಕ ಶಿಕ್ಷಣ ಶಿಕ್ಷಕರಾದ ಕೃಷ್ಣಾನಂದರವರ ಮಾರ್ಗದರ್ಶನದಲ್ಲಿ ಮಕ್ಕಳಿಂದ ಯೋಗಾಸನ ಪ್ರದರ್ಶನ ಮತ್ತು ಸಭಾ ಕಾರ್ಯಕ್ರಮ ಜರಗಿತು. ವಿದ್ಯಾರ್ಥಿ ತೀರ್ಥೇಶ ಸ್ವಾಗತಿಸಿ, ಶಾಲಾ ವಿದ್ಯಾರ್ಥಿ ನಾಯಕಿ ಪಿ. ಅಮೂಲ್ಯ ವಂದಿಸಿದರು.