News Karnataka Kannada
Friday, May 10 2024
ಮಂಗಳೂರು

ಜೆರೋಸಾ ಶಿಕ್ಷಣ ಸಂಸ್ಥೆ ಪ್ರಕರಣ: ಬಹುತೇಕ ಎಲ್ಲರ ಹೇಳಿಕೆ ಪಡೆಯಲಾಗಿದೆ- ಕಲಬುರಗಿ ವಲಯ ಅಪರ ಆಯುಕ್ತ

ಮಂಗಳೂರಿನ ಜೆರೋಸಾ ಶಿಕ್ಷಣ ಸಂಸ್ಥೆ ಶಿಕ್ಷಕಿಯಿಂದ ಶ್ರೀರಾಮನ ಅವಹೇಳನ ಆರೋಪ ಹಿನ್ನೆಲೆ, ವಿಚಾರಣೆ ಮುಗಿಸಿ ಡಿಡಿಪಿಐ ಕಚೇರಿಯಿಂದ ಹೊರಟ ಶಿಕ್ಷಣ ಇಲಾಖೆ ಕಲಬುರಗಿ ವಲಯ ಅಪರ ಆಯುಕ್ತ ಡಾ.ಆಕಾಶ್ ಮಾಧ್ಯಮಗಳಿಗೆ ಹೇಳಿಕೆ ನೀಡಿದ್ದು, ಎರಡು ದಿನಗಳಿಂದ ಪ್ರಕರಣದ ಬಗ್ಗೆ ನಿರಂತರ ವಿಚಾರಣೆ ನಡೆಸಿ, ನಿನ್ನೆ ತಡರಾತ್ರಿಯವರೆಗೂ ಇದ್ದು ಅಧಿಕಾರಿಗಳ ಜೊತೆ ಮಾಹಿತಿ ಪಡೆದಿದ್ದಾಗಿ ತಿಳಿಸಿದ್ದಾರೆ.
Photo Credit : News Kannada

ಮಂಗಳೂರು: ಮಂಗಳೂರಿನ ಜೆರೋಸಾ ಶಿಕ್ಷಣ ಸಂಸ್ಥೆ ಶಿಕ್ಷಕಿಯಿಂದ ಶ್ರೀರಾಮನ ಅವಹೇಳನ ಆರೋಪ ಹಿನ್ನೆಲೆ, ವಿಚಾರಣೆ ಮುಗಿಸಿ ಡಿಡಿಪಿಐ ಕಚೇರಿಯಿಂದ ಹೊರಟ ಶಿಕ್ಷಣ ಇಲಾಖೆ ಕಲಬುರಗಿ ವಲಯ ಅಪರ ಆಯುಕ್ತ ಡಾ.ಆಕಾಶ್ ಮಾಧ್ಯಮಗಳಿಗೆ ಹೇಳಿಕೆ ನೀಡಿದ್ದು, ಎರಡು ದಿನಗಳಿಂದ ಪ್ರಕರಣದ ಬಗ್ಗೆ ನಿರಂತರ ವಿಚಾರಣೆ ನಡೆಸಿ, ನಿನ್ನೆ ತಡರಾತ್ರಿಯವರೆಗೂ ಇದ್ದು ಅಧಿಕಾರಿಗಳ ಜೊತೆ ಮಾಹಿತಿ ಪಡೆದಿದ್ದಾಗಿ ತಿಳಿಸಿದ್ದಾರೆ.

ಮಾಹಿತಿ ಪಡೆದ ಬಳಿಕ ಎಲ್ಲಾ ದೂರುದಾರರು, ಮನವಿ ಕೊಟ್ಟವರಿಗೆ ವಿಚಾರಣೆಗೆ ನೊಟೀಸ್ ಮಾಡಲಾಗಿದ್ದು, ಇಂದು ಎಲ್ಲರನ್ನೂ ಕರೆಸಿ ಇಡೀ ದಿನ ಹೇಳಿಕೆ ಪಡೆಯಲಾಗಿದೆ. ಮಕ್ಕಳು ಕೂಡ ಆಗಮಿಸಿ ತಮ್ಮ ಹೇಳಿಕೆ ನೀಡಿದ್ದಾರೆ. ಜೊತೆಗೆ ಪೋಷಕರ ಹೇಳಿಕೆ, ಮನವಿ ಕೊಟ್ಟಿವರ ಹೇಳಿಕೆ ಪಡೆಯಲಾಗಿದೆ ಎಂದು ಹೇಳಿದರು.

ಜೆರೋಸಾ ಶಾಲೆಗೂ ಭೇಟಿ ನೀಡಿ ವಿಚಾರಣೆ ನಡೆಸಿ ಮಾಹಿತಿ ಕಲೆ ಹಾಕಿದ್ದಾಗಿ ತಿಳಿಸಿದ ಅವರು, ಬಹುತೇಕ ಎಲ್ಲರ ಹೇಳಿಕೆ ಪಡೆಯಲಾಗಿದೆ, ಬೇಕಾದ್ರೆ ಮತ್ತೆ ಕರೆಸಿ ಹೇಳಿಕೆ ಪಡೆಯುತ್ತೇನೆ, ಎರಡು ದಿನಗಳಲ್ಲಿ ವಿಚಾರಣೆ ನಡೆಸಿ ವರದಿ ಕೊಡಲು ಅಸಾಧ್ಯ, ಹಾಗಾಗಿ ಇನ್ನೂ ಸ್ವಲ್ಪ ಮಾಹಿತಿ ಕಲೆ ಹಾಕಿ ಅಂತಿಮ ವರದಿ ಸಿದ್ದಪಡಿಸ್ತೇನೆ. ವರದಿಯಲ್ಲಿ ಸತ್ಯಾಸತ್ಯತೆ ಇರಬೇಕು, ಯಾರಿಗೂ ಅನ್ಯಾಯ ಆಗಬಾರದು. ಹೀಗಾಗಿ ಸರಿಯಾಗಿ ಹೇಳಿಕೆಗಳನ್ನು ಪರಿಶೀಲನೆ ಮಾಡಿ ಅಂತಿಮ ವರದಿ ತಯಾರಿಸ್ತೇನೆ. ಆ ಬಳಿಕ ಸರ್ಕಾರಕ್ಕೆ ವರದಿ ಒಪ್ಪಿಸಲಾಗುವುದು ಎಂದು ಹೇಳಿದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
44
News Karnataka Kannada

The most exciting, trusted and preferred news websites of Karnataka and Kannadigas around the world.

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು