ಮಂಗಳೂರು: ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಮಂಗಳೂರು ಇದರ ಆಶ್ರಯದಲ್ಲಿ ಯಕ್ಷಧ್ರುವ ಪಟ್ಲ ಸಂಭ್ರಮ-೨೦೨೩ನೇ ಸಾಲಿನ ವಿದ್ಯಾರ್ಥಿ ವೇತನಕ್ಕೆ ಯಕ್ಷಗಾನ ಕಲಾ ವಿದರ (ವೃತ್ತಿಪರ/ಹವ್ಯಾಸಿ/ಮಹಿಳಾ) ಮಕ್ಕಳಿಂದ ಅರ್ಜಿ ಆಹ್ವಾನಿಸಲಾಗಿದೆ.
ಅರ್ಜಿ ಸಲ್ಲಿಸಲು ಕನಿಷ್ಠ ೫೫ ಶೇ ಅಂಕಗಳಿರಬೇಕು. ಅಂಕ ಪಟ್ಟಿ ಹಾಗೂ ಬ್ಯಾಂಕ್ನ ಉಳಿತಾಯ ಖಾತೆಯ ನಕಲು ಪ್ರತಿಗಳನ್ನು ಲಗತ್ತಿಸಬೇಕು. ಪ್ರತಿಸಾರಿಯಂತೆ ಈ ಬಾರಿಯೂ ಎಸ್.ಎಸ್.ಎಲ್.ಸಿ. ಹಾಗೂ ಪಿ.ಯು.ಸಿ.ಯಲ್ಲಿ ೯೦% ಕ್ಕೂ ಮೇಲ್ಪಟ್ಟು ಅತ್ಯಧಿಕ ಅಂಕ ಗಳಿಸಿದ ತಲಾ ಒಬ್ಬ ವಿದ್ಯಾರ್ಥಿಗೆ ಬಂಗಾರದ ಪದಕದೊಂ ದಿಗೆ ಪ್ರತಿಭಾ ಪುರಸ್ಕಾರ ನೀಡಲಾಗು ವುದು. ಇದರೊಂದಿಗೆ ವಿದ್ಯಾರ್ಥಿ ಪುರಸ್ಕಾರವನ್ನು ಪ್ರಾಥಮಿಕ, ಪ್ರೌಢ, ಪಿ.ಯು.ಸಿ., ಡಿಪ್ಲೋಮ, ಪದವಿ ಹಾಗೂ ಸ್ನಾತಕೋತ್ತರ ಪದವಿ ಹೀಗೆ ಒಟ್ಟು ೫ ವಿಭಾಗಗಳಲ್ಲಿ ಪ್ರತ್ಯೇಕವಾಗಿ ಅತಿ ಹೆಚ್ಚು ಅಂಕ ಗಳಿಸಿದ ತಲಾ ಒಬ್ಬ ವಿದ್ಯಾರ್ಥಿಗೆ ನೀಡಲಾಗುವುದು. ವೃತ್ತಿ ಪರ ಕಲಾವಿದರ ಎಲ್ಲಾ ಮಕ್ಕಳಿಗೂ (೫೦% ಗಿಂತ ಮೇಲ್ಪಟ್ಟು ಅಂಕಗಳನ್ನು ಗಳಿಸಿದ್ದರೆ) ವಿದ್ಯಾರ್ಥಿ ಪ್ರೋತ್ಸಾಹ ಧನವನ್ನು ನೀಡಲಾಗುವುದು.
ಅರ್ಜಿ ನಮೂನೆಯನ್ನು, ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ (ರಿ) ಮಂಗಳೂರು, ಕೇಂದ್ರ ಕಛೇರಿ, ಎಂಪೈರ್ಮಾಲ್, ಇಲ್ಲಿ ಪಡೆದುಕೊಳ್ಳ ಬಹುದು. ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ೨೦-೦೫-೨೦೨೩ ಹೆಚ್ಚಿನ ವಿವರಗಳಿಗಾಗಿ ಡಾ. ಮನು ರಾವ್, ಉಪಾಧ್ಯಕ್ಷರು (೯೮೪೪೦೮೭೬೬೪) ಅವರನ್ನು ಸಂಪರ್ಕಿಸಬಹುದು.