News Karnataka Kannada
Sunday, April 28 2024
ಮಂಗಳೂರು

ಯಕ್ಷಗಾನದಿಂದ ಸಾಹಿತ್ಯ, ಸಂಸ್ಕೃತಿ ಉನ್ನತಿ: ಶ್ರೀ ಹರಿ ನಾರಾಯಣ

Yakshagana promotes literature, culture
Photo Credit : News Kannada

ಹಳೆಯಂಗಡಿ: ಯಕ್ಷನಾಟ್ಯದಿಂದಲೂ ದೇವರ ಸೇವೆ ಮಾಡಿದಲ್ಲಿ ಮಕ್ಕಳಿಗೆ ಶಿಕ್ಷಣದ ಜೊತೆಗೆ ಯಕ್ಷಗಾನ ಸಹಿತ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ರೂಡಿಸಿಕೊಂಡರೆ ಜೀವನದಲ್ಲಿ ಸಂಸ್ಕಾರ ಸಂಸ್ಕೃತಿ ಸಾಧ್ಯ ಎಂದು ಕಟೀಲು ಕ್ಷೇತ್ರದ ಅರ್ಚಕ ಶ್ರೀ ಹರಿ ನಾರಾಯಣ ಆಸ್ರಣ್ಣ ಹೇಳಿದರು.

ಹಳೆಯಂಗಡಿ ಸಮೀಪದ ತೋಕೂರು ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಯಕ್ಷಾರ್ಚನೆ ಕಾರ್ಯಕ್ರಮದ ದೀಪ ಪ್ರಜ್ವಲನಗೊಳಿಸಿ ಆಶೀರ್ವಚನ ನೀಡಿದರು. ಮುಖ್ಯ ಅತಿಥಿಗಳಾಗಿ ಯಕ್ಷಗಾನ ಭಾಗವತರಾದ ರವಿಚಂದ್ರ ಕನ್ನಡಿಕಟ್ಟೆ,ತೋಕೂರು ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ವ್ಯವ್ಥಾಪನಾ ಸಮಿತಿಯ ಅಧ್ಯಕ್ಷ, ಹರಿದಾಸ್ ಭಟ್, ಸದಾಶಿವ ಡಿ ಶೆಟ್ಟಿಗಾರ್, ಸೀತಾ ಪೂಜಾರಿ,ಅಂಬಿಕಾ ಕಿರಣ್ ಸಿದ್ದು ಪೂಜಾರಿ ದುಬೈ , ಭಾಸ್ಕರ್ ಅಮೀನ್ ತೋಕೂರು, ಗಣೇಶ್ ಪೂಜಾರಿ ಬೆಂಗಳೂರು, ಮತ್ತಿತರರು ಉಪಸ್ಥಿತರಿದ್ದರು.

ನವೀನ್ ಶೆಟ್ಟಿ ಎಡ್ಮೇಮಾರ್ ನಿರೂಪಿಸಿದರು. ಯಕ್ಷಾರ್ಚನೆಯ ಬಾಲ ಪ್ರತಿಭೆಗಳಾದ ದಿಯಾ, ದಿಶಾ ಮತ್ತು ದೃಶಾನ್ ರವರನ್ನು ಗೌರವಿಸಲಾಯಿತು. ಯಕ್ಷಗಾನ ಅಭ್ಯಾಸ ಕೇಂದ್ರ ಯುಎಇ ಯ ನಾಟ್ಯಭ್ಯಾಸ ಗುರುಗಳಾದ ಯಕ್ಷಮಯೂರ ಶೇಖರ್ ಡಿ ಶೆಟ್ಟಿಗಾರ್ ಮತ್ತು ನಾಟ್ಯಗುರು ಶರತ್ ಕುಡ್ಲ ಶುಭ ಹಾರೈಸಿದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
1616

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು