ಮಂಗಳೂರು, ಜೂ.21; ಮಾನಸಿಕ ಆರೋಗ್ಯ ಕ್ಕಾಗಿ ಮತ್ತು ಒತ್ತಡ ನಿವಾರಣೆಗೆ ಯೋಗ ಚಟುವಟಿಕೆ ಎಲ್ಲರಿಗೂ ಅಗತ್ಯವಿದೆ ಎಂದು ಎಂದು ಇಂಡಿಯನ್ ರೆಡ್ ಕ್ರಾಸ್ ಸೊಸೈಟಿ ದಕ್ಷಿಣ ಕನ್ನಡ ಜಿಲ್ಲಾ ಘಟಕದ ಚೇರ್ಮನ್ ಸಿ ಎ ಶಾಂತಾರಾಮ್ ಶೆಟ್ಟಿ ತಿಳಿಸಿದ್ದಾರೆ.
ದಕ್ಷಿಣ ಕನ್ನಡ ಜಿಲ್ಲಾ ಕಾರ್ಯ ನಿರತ ಪತ್ರಕರ್ತರ ಸಂಘ ಹಾಗೂ ಪತಂಜಲಿ ಯೋಗ ಸಮಿತಿ ವತಿಯಿಂದ ವಿಶ್ವ ಯೋಗ ದಿನಾಚರಣೆಯ ಅಂಗವಾಗಿ ಮಂಗಳೂರು ಪತ್ರಿಕಾ ಭವನ ದಲ್ಲಿ ಹಮ್ಮಿಕೊಂಡ ಯೋಗ ದಿನಾಚರಣೆ ಯನ್ನು ಉದ್ಘಾಟಿಸಿ ಮಾತನಾಡಿದರು.
ಪತ್ರ ಕರ್ತರ ಕೆಲಸ ದ ಒತ್ತಡ ದ ಯೋಗದಂತಹ ಚಟುವಟಿಕೆ ಮಾನಸಿಕ ಆರೋಗ್ಯ ಸಂರಕ್ಷಣೆ ಯ ದೃಷ್ಟಿಯಿಂದ ಮುಖ್ಯ ವಾಗುತ್ತದೆ.ಭಾರತ ದ ಯೋಗ ವಿಶ್ವ ಸಂಸ್ಥೆ ಯಲ್ಲಿ ಎಲ್ಲಾ ದೇಶಗಳ ಬೆಂಬಲ ಪಡೆದು ವಿಶ್ವ ಮಾನ್ಯತೆ ಪಡೆದು ವಿಶ್ವ ಯೋಗ ದಿನಾಚರಣೆ ಗೆ ಕಾರಣವಾಗಿರುವುದು ಭಾರತೀಯರಿಗೆ ಹೆಮ್ಮೆಯ ಸಂಗತಿ ಎಂದು ಶಾಂತರಾಮ ಶೆಟ್ಟಿ ತಿಳಿಸಿದ್ದಾರೆ.
ಇದೇ ಸಂದರ್ಭದಲ್ಲಿ ಯೋಗ ಗುರು ಡಾ.ಜಗದೀಶ್ ಶೆಟ್ಟಿ ಬಿಜೈ ಹಾಗೂ ತಂಡ ದವರಿಂದ ಮತ್ತು ಪತ್ರಕರ್ತ ರಿಂದ ಯೋಗ ಪ್ರದರ್ಶನ ನಡೆಯಿತು. ದಕ್ಷಿಣ ಕನ್ನಡ ಜಿಲ್ಲಾ ಕಾರ್ಯ ನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶ್ರೀನಿವಾಸ್ ನಾಯಕ್ ಇಂದಾಜೆ ಅಧ್ಯಕ್ಷತೆ ವಹಿಸಿದ್ದರು.
ಉಪಾಧ್ಯಕ್ಷ ಭಾಸ್ಕರ ರೈ ಕಟ್ಟ,ಭಾರತೀಯ ರೆಡ್ ಕ್ರಾಸ್ ಸಮಿತಿಯ ಕಾರ್ಯ ಕಾರಿ ಸಮಿತಿ ಸದಸ್ಯ ಹರೀಶ್ ರೈ,ಪತ್ರಕರ್ತರ ಸಂಘದ ಕಾರ್ಯ ಕಾರಿ ಸಮಿತಿ ಸದಸ್ಯ ರಾಜೇಶ್ ದಡ್ಡಂಗಡಿ,ಸತೀಶ್ ಇರಾ ಮಂಗಳೂರು ಪತ್ರಿಕಾ ಭವನ ಟ್ರಸ್ಟ್ ಅಧ್ಯಕ್ಷ ರಾಮಕೃಷ್ಣ ಆರ್, ಕರ್ನಾಟಕ ಕಾರ್ಯ ನಿರತ ಪತ್ರಕರ್ತರ ಸಂಘದ ರಾಜ್ಯ ಕಾರ್ಯಕಾರಿ ಸಮಿತಿ ಸದಸ್ಯ ಜಗನ್ನಾಥ್ ಶೆಟ್ಟಿ ಬಾಳ ಉಪಸ್ಥಿತರಿದ್ದರು.
ದಕ್ಷಿಣ ಕನ್ನಡ ಜಿಲ್ಲಾ ಕಾರ್ಯ ನಿರತ ಪತ್ರಕರ್ತರ ಸಂಘದ ಕೋಶಾಧಿಕಾರಿ ಪುಷ್ಪ ರಾಜ್ ಬಿ.ಎನ್ ಕಾರ್ಯಕ್ರಮ ನಿರೂಪಿಸಿದರು. ಪ್ರಧಾನ ಕಾರ್ಯದರ್ಶಿಜಿತೇಂದ್ರ ಕುಂದೇಶ್ವರ ವಂದಿಸಿದರು.