ಮಂಗಳೂರು: ಮಂಗಳೂರಿನ ಮಂಗಳಾದೇವಿಯಲ್ಲಿರುವ ರಾಮಕೃಷ್ಣ ಮಠದಲ್ಲಿ ಇದೇ ಅಕ್ಟೊಬರ್ 6 ನೇ ತಾರೀಕಿನಿಂದ ಹದಿನೈದು ದಿನಗಳ ಕಾಲ ಸಂಜೆ 6.15 ರಿಂದ 7.30 ರವರೆಗೆ ಯೋಗಾಸನ ಶಿಬಿರ ನಡೆಯಲಿದೆ.
ಯೋಗರತ್ನ ಶ್ರೀ ಗೋಪಾಲಕೃಷ್ಣ ದೇಲಂಪಾಡಿ ಅವರು ಯೋಗಾಸನ, ಮುದ್ರೆಗಳು, ಕ್ರಿಯೆಗಳು, ಪ್ರಾಣಾಯಾಮ, ಸರ್ಯನಮಸ್ಕಾರ, ಧ್ಯಾನ ಮಾಡುವ ವಿಧಾನ ತಿಳಿಸಿಕೊಡುವರು. ಆಸಕ್ತರು ತಮ್ಮ ಹೆಸರನ್ನು ಆಶ್ರಮದ ಕಾರ್ಯಾಲಯದಲ್ಲಿ ನೋಂದಾಯಿಸಬಹುದು.
ವಿವರಗಳಿಗಾಗಿ 2414412 ಸಂಪರ್ಕಿಸಿ.