ಮಂಗಳೂರು: ಸಮುದ್ರ ವಿಹಾರಕ್ಕೆಂದು ಬಂದಿದ್ದ ವೈದ್ಯ ಸಮುದ್ರಪಾಲಾದ ಘಟನೆ ಉಳ್ಳಾಲ ಸೋಮೇಶ್ವರದ ರುದ್ರಪಾದೆಯಲ್ಲಿ ನಡೆದಿದೆ.
ಮಂಗಳೂರು ನಗರದ ಖಾಸಗಿ ಆಸ್ಪತ್ರೆಯಲ್ಲಿ ಇಂಟರ್ನಿಷಿಪ್ ಮಾಡುತ್ತಿದ್ದ ಡಾ. ಆಶೀಕ್ ಗೌಡ (30) ತನ್ನ ಐವರು ಸ್ನೇಹಿತರೊಂದಿಗೆ ಉಳ್ಳಾಲ ಸೋಮೇಶ್ವರ ರುದ್ರಪಾದೆಗೆ ಸಮುದ್ರ ವಿಹಾರಕ್ಕಾಗಿ ಭಾನುವಾರ ತಡರಾತ್ರಿ ಬಂದಿದ್ದರು. ಈ ವೇಳೆ ಜೊತೆಗಿದ್ದ ಡಾ.ಪ್ರದೀಪ್ ಎಂಬುವರು ಬಂಡೆಯ ಮೇಲಿಂದ ಬಿದ್ದಿದ್ದು, ಕೆಳಗೆ ಬಂಡೆಯನ್ನು ಹಿಡಿದು ಸಹಾಯಕ್ಕೆ ಯಾಚಿಸಿದ್ದರು. ಪ್ರದೀಪ್ ರಕ್ಷಣೆಗೆ ಪ್ರಯತ್ನಿಸಿದ್ದ ಡಾ.ಆಶೀಕ್ ಗೌಡ ಕಾಲುಜಾರಿ ಸಮುದ್ರಕ್ಕೆ ಬಿದ್ದು ನೀರು ಪಾಲಾಗಿದ್ದಾರೆ. ಆದರೆ ಕಲ್ಲುಗಳ ಆಸರೆ ಪಡೆದಿದ್ದ ಡಾ. ಪ್ರದೀಪ ಮೇಲೆ ಬಂದಿದ್ದಾರೆ. ನಂತರ ಪ್ರದೀಪ್ ಘಟನೆ ಬಗ್ಗೆ ಪೊಲೀಸರಿಗೆ ಮಾಹಿತಿ ಒದಗಿಸಿದ್ದರು. ಈ ಕುರಿತು ಉಳ್ಳಾಲ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಸಾಯಿಜ್ಞಾನ ಪಬ್ಲಿಕ್ ಶಾಲೆಯು ಪ್ರಸಕ್ತ ಸಾಲಿನ ಸಿಬಿಎಸ್ಇ 10ನೇ ತರಗತಿ ಪರೀಕ್ಷೆಯಲ್ಲಿ ಶೇ 100ಕ್ಕೆ 100 ರಷ್ಟು ಫಲಿತಾಂಶ ಪಡೆದಿದೆ.…
ಎಸಿಯಲ್ಲಿ ಬೆಂಕಿ ಕಾಣಿಸಿಕೊಂಡ ಪರಿಣಾಮ ಬೆಂಗಳೂರಿಗೆ ಬರುತ್ತಿದ್ದ ಏರ್ ಇಂಡಿಯಾ ವಿಮಾನ ದೆಹಲಿಯಲ್ಲಿ ತುರ್ತು ಭೂಸ್ಪರ್ಶ ಮಾಡಿದೆ.
ಹೊಳೆಯಲ್ಲಿ ಮುಳುಗಿ ಇಬ್ಬರು ಮೃತಪಟ್ಟಿರುವ ಘಟನೆ ಇಂದು ಉತ್ತರ ಕನ್ನಡ ಜಿಲ್ಲೆಯ ಭಟ್ಕಳದ ಕಡವಿನಕಟ್ಟೆಯಲ್ಲಿ ನಡೆದಿದೆ.
ಸಾಣೂರಿನ ಲೈನ್ ಮ್ಯಾನ್ ಸುಭಾಷ್ ರವರು ತಮ್ಮ ತಂಡದೊಂದಿಗೆ ಮೇ 17 ರಂದು ಮುರತಂಗಡಿ ಇರುವತ್ತೂರು ರಸ್ತೆ ತಿರುವಿನಲ್ಲಿರುವ ವಿದ್ಯುತ್…
ರಕ್ಷಕರೇ ಭಕ್ಷಕರಾದ ಘಟನೆಯೊಂದು ಕೋಲಾರದಲ್ಲಿ ನಡೆದಿದೆ . ಕಳವು ಕೇಸ್ನಲ್ಲಿ ರಿಕವರಿ ಮಾಡಿದ್ದ 1 ಕೆಜಿ 408 ಗ್ರಾಂ ಚಿನ್ನದಲ್ಲಿ…
ಪ್ರಧಾನಿ ನರೇಂದ್ರ ಮೋದಿಯವರು ಮಣ್ಣಿನ ಮಗ, ಬಡ ಕುಟುಂಬದಲ್ಲಿ ಹುಟ್ಟಿ ದೇಶದ ಕಲ್ಯಾಣ ಮತ್ತು ಅಭಿವೃದ್ಧಿಗೆ ಶ್ರಮಿಸುತ್ತಿದ್ದಾರೆ. ಎಂದು ಹಿಮಾಚಲ…