ಭ್ರಷ್ಟ, ಕೋಮುವಾದಿ ಬಿಜೆಪಿ ಆಡಳಿತದಲ್ಲಿ ಜನತೆ ತತ್ತರ: ಮುನೀರ್‌ ಕಾಟಿಪಳ್ಳ

ಬಂಟ್ವಾಳ: ಭ್ರಷ್ಟ, ಕೋಮುವಾದಿ ಬಿಜೆಪಿ ಆಡಳಿತದಲ್ಲಿ ಜನತೆ ತತ್ತರಿಸಿ ಹೋಗಿದ್ದಾರೆ. ಬೆಲೆಯೇರಿಕೆ, ಕಾರ್ಮಿಕ ವಿರೋಧಿ ನೀತಿಗಳಿಂದ ದುಡಿಯುವ ಜನರ ಬದುಕಿನ ಮೇಲೆ ಗದಾ ಪ್ರಹಾರವಾಗಿದೆ. ಮುಂಬರುವ ಚುನಾವಣೆಯಲ್ಲಿ ಬಿಜೆಪಿಯನ್ನು ಸೋಲಿಸುವುದೇ ಕಾರ್ಮಿಕ ವರ್ಗದ ಆದ್ಯತೆ, ರೈತ, ಕಾರ್ಮಿಕರ ಚಳವಳಿಗಳ ಕೇಂದ್ರವಾಗಿದ್ದ ಬಂಟ್ವಾಳವನ್ನು ಬಿಜೆಪಿ ಇಂದು ದ್ವೇಷ ರಾಜಕಾರಣದ ಪ್ರಯೋಗ ಶಾಲೆಯಾಗಿ ಪರಿವರ್ತಿಸಿದೆ. ಬದುಕಿನ ಪ್ರಶ್ನೆಗಳನ್ನು ಕಡೆಗಣಿಸಿ, ಮತಾಂಧತೆಗೆ ಒತ್ತು ನೀಡುತ್ತಿರುವ ಬಿಜೆಪಿಯನ್ನು ಸೋಲಿಸಲು ಬಂಟ್ವಾಳದಲ್ಲಿ ಸಿಪಿಐಎಂ ಶ್ರಮಿಸಲಿದೆ ಎಂದು ಸಿಪಿಐಎಂ ಕರ್ನಾಟಕ ರಾಜ್ಯ ಸಮಿತಿ ಸದಸ್ಯ ಮುನೀರ್ ಕಾಟಿಪಳ್ಳ ತಿಳಿಸಿದ್ದಾರೆ.

ಅವರು ಬಿ.ಸಿ.ರೋಡಿನಲ್ಲಿ ಸುದ್ದಿಗೋಷ್ಟಿಯಲ್ಲಿ ಮಾತನಾಡಿ ಬಂಟ್ವಾಳ ಸಹಿತ ದಕ್ಷಿಣ ಕನ್ನಡ ಜಿಲ್ಲೆ ಬಿಜೆಪಿ ಆಡಳಿತದ ಅಡಿಯಲ್ಲಿ ಎಲ್ಲಾ ರಂಗಗಳಲ್ಲಿಯೂ ಹಿನ್ನಡೆ ಅನುಭವಿಸಿದೆ. ಸಾರ್ವಜನಿಕ ಶಿಕ್ಷಣ, ಆರೋಗ್ಯ ಕ್ಷೇತ್ರವನ್ನು ಪೂರ್ತಿಯಾಗಿ ಕಡೆಗಣಿಸಿ ವ್ಯಾಪಾರೀಕರಣಕ್ಕೆ ಪೂರ್ಣ ಅವಕಾಶ ಒದಗಿಸಲಾಗಿದೆ. ಹೊಸದಾಗಿ ಯಾವುದೇ ಸರಕಾರಿ ಶಿಕ್ಷಣ ಸಂಸ್ಥೆಗಳನ್ನು ತೆರೆಯದಿರುವುದು, ಹೊಸ ತಾಲೂಕುಗಳಿಗೆ ಆಸ್ಪತ್ರೆಗಳನ್ನು ಮಂಜೂರುಗೊಳಿಸದಿರುವುದು, ಸರಕಾರಿ ಆಸ್ಪತ್ರೆ, ಆರೋಗ್ಯ ಕೇಂದ್ರಗಳನ್ನು ಕಡೆಗಣಿಸಿರುವುದು ಬಿಜೆಪಿ ಶಾಸಕರುಗಳ ನೀತಿಗಳಿಗೆ ಸಾಕ್ಷಿ. ಉದ್ಯೋಗ ಸೃಷ್ಟಿಸುವ ಯೋಜನೆಗಳಾಗಲಿ, ಜಿಲ್ಲೆಯಲ್ಲಿ ತಲೆಯೆತ್ತಿರುವ ಬೃಹತ್‌ ಉದ್ಯಮಗಳಲ್ಲಿ ಜಿಲ್ಲೆಯ ಯುವಜನರಿಗೆ ಉದ್ಯೋಗ ಒದಗಿಸಲಾಗಲಿ ಬಿಜೆಪಿ ಶ್ರಮಿಸದಿರುವುದು ಜಿಲ್ಲೆಯಲ್ಲಿ ವ್ಯಾಪಕ ನಿರುದ್ಯೋಗಕ್ಕೆ ಕಾರಣವಾಗಿದೆ. ಯುವಜನರಲ್ಲಿ ಅತೃಪ್ತಿಯನ್ನು ಹುಟ್ಟು ಹಾಕಿದೆ. ಇಂತಹ ಯುವಜನರನ್ನು ಧರ್ಮದ ಆಧಾರದಲ್ಲಿ ವಿಭಜಿಸಿ ದಿಕ್ಕು ತಪ್ಪಿಸುವ ಕೆಲಸವನ್ನು ಬಿಜೆಪಿ ಜನ ಪ್ರತಿನಿಧಿಗಳು, ಅದರ ಸಾಮೂಹಿಕ ಸಂಘಟನೆಗಳು ಮಾಡುವ ಮೂಲಕ ಯುವಕರ ಬದುಕಿನಲ್ಲಿ ಮತ್ತಷ್ಟು ಸಮಸ್ಯೆಗಳನ್ನು ಸೃಷ್ಟಿಸಿದೆ.

ಬಂಟ್ವಾಳ ಕ್ಷೇತ್ರವೂ ಇಂದು ಉದ್ಯೋಗ, ಆರೋಗ್ಯ, ಶಿಕ್ಷಣ ಕ್ಷೇತ್ರದಲ್ಲಿ ಯಾವುದೆ ಅಭಿವೃದ್ಧಿ ಕಂಡಿಲ್ಲ. ವಿಭಜನೆಯ ರಾಜಕಾರಣದ ಪ್ರಯೋಗ ಶಾಲೆಯಾಗಿರುವ ಬಂಟ್ವಾಳದಲ್ಲಿ ಬಿಜೆಪಿಯನ್ನು ಸೋಲಿಸುವ, ಆ ಮೂಲಕ ಜಾತ್ಯತೀತ ಅಭ್ಯರ್ಥಿಯನ್ನು ಗೆಲ್ಲಿಸಲು ಸಿಪಿಐಎಂ ಪಕ್ಷದ ಕಾರ್ಯಕರ್ತರು ಶ್ರಮಿಸಲಿದ್ದಾರೆ. ಬಂಟ್ವಾಳದ ಜನತೆ ಕೋಮುವಾದಿ, ಜನವಿರೋಧಿ ಬಿಜೆಪಿ ಅಭ್ಯರ್ಥಿಯನ್ನು ಸೋಲಿಸುವ ಮೂಲಕ ಜನಪರ ರಾಜಕಾರಣಕ್ಕೆ ಅವಕಾಶ ಒದಗಿಸಬೇಕು ಎಂದು ಅವರು ಮನವಿ ಮಾಡಿದರು. ಸುದ್ದಿಗೋಷ್ಟಿಯಲ್ಲಿ ತಾಲೂಕು ಕಾರ್ಯದರ್ಶಿ ಸುನೀಲ್ ಕುಮಾರ್ ಬಜಾಲ್, ಸದಸ್ಯ ಉದಯ ಕುಮಾರ್ ಉಪಸ್ಥಿತರಿದ್ದರು

Umesha HS

Recent Posts

ಪ್ರತ್ಯೇಕ ಭಾಗಗಳಲ್ಲಿ ಹುಲಿ ದರ್ಶನ: ನೀರಿನಲ್ಲಿ ವಿಶ್ರಮಿಸುತ್ತಿದ್ದ ಹುಲಿಯನ್ನ ಅಟ್ಟಾಡಿಸಿದ ಆನೆ

ತಾಲೂಕಿನ ಪ್ರತಿಷ್ಠಿತ ಹುಲಿ ಸಂರಕ್ಷಿತಾರಣ್ಯ ಬಂಡೀಪುರದ ಪ್ರತ್ಯೇಕ ಕಡೆಯಲ್ಲಿ ಹುಲಿ ದರ್ಶನವಾಗಿದೆ, ಇದರಲ್ಲಿ ಆನೆ ಹುಲಿಯನ್ನ ಹಿಮ್ಮೆಟ್ಟಿಸುವ ದೃಶ್ಯ ರೋಚಕವಾಗಿದೆ.

11 mins ago

ಮಾಸ್ ರೇಪಿಸ್ಟ್ ಪರ ಪ್ರಧಾನಿ ನರೇಂದ್ರ ಮೋದಿ ಮತಯಾಚಿಸಿದ್ದಾರೆ; ರಾಗಾ ಕಿಡಿ

ಹಾಸನ ಅಶ್ಲೀಲ ವಿಡಿಯೋ ಪ್ರಕರಣಕ್ಕೆ ಸಂಬಂಧ ಪಟ್ಟಂತೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಸ್ಫೋಟಕ ಹೇಳಿಕೆ ನೀಡಿದ್ದಾರೆ.

18 mins ago

ಕಾಂಗ್ರೆಸ್‌‌ಗೆ ಬೆಂಬಲ ಸೂಚಿಸಿ ಬೃಹತ್ ಬಂಜಾರಾ ಸ್ವಾಭಿಮಾನಿ ಸಮಾವೇಶ

ಬಂಜಾರಾ ಸಮುದಾಯದ ಒಗ್ಗಟ್ಟು ನೋಡಿ ಸಂತೋಷವಾಗಿದ್ದು, ನಿಮ್ಮ ಬದುಕನ್ನು ಕಟ್ಟಿಕೊಡುವ ಕೆಲಸ ನಾವು ಮಾಡಿದ್ದೇವೆ ಎಂದು ಬೃಹತ್ ಕೈಗಾರಿಕೆ ಹಾಗೂ…

25 mins ago

ಕುರುಬ ಸಮಾಜದ ರಾಜಕಾರಣದ ಬಗ್ಗೆ ಮಾತಾಡುವ ನೈತಿಕತೆ ಶಿವಕುಮಾರ ನಾಟೀಕಾರಗಿಲ್ಲ

ಕುರುಬ ಸಮಾಜಕ್ಕೆ ಕಾಂಗ್ರೆಸ್ ಪಕ್ಷದಿಂದ ಅನ್ಯಾಯವಾಗಿದೆ ಎಂದು ಹೇಳಿಕೆ ನೀಡಿರುವ ಜೆಡಿಎಸ್ ಮುಖಂಡ ಶಿವಕುಮಾರ ನಾಟೀಕಾರಗೆ ಕುರುಬ ಸಮಾಜದ ರಾಜಕಾರಣದ…

42 mins ago

ಕೊರೊನಾ ಸರ್ಟಿಫಿಕೇಟ್​ನಲ್ಲಿ ಪ್ರಧಾನಿ ಮೋದಿ ಫೋಟೋ ದಿಢೀರ್‌ ಮಾಯ !

ಔಷಧಿಗಳ ತಯಾರಿಕಾ Oxford-AstraZeneca ಸಂಸ್ಥೆ ಕೊರೊನಾ ಲಸಿಕೆ ಕೋವಿಶೀಲ್ಡ್ ಬಗ್ಗೆ ಆಘಾತಕಾರಿ ಮಾಹಿತಿಯನ್ನು ಕೋರ್ಟ್​ ಮುಂದೆ ಒಪ್ಪಿಕೊಂಡಿದೆ. ಇದರ ಬೆನ್ನಲ್ಲೇ…

53 mins ago

ಬೇಸಿಗೆಯಲ್ಲಿ ದಾಳಿಂಬೆ ಸೇವಿಸಿ ಆರೋಗ್ಯ ಕಾಪಾಡಿಕೊಳ್ಳಿ

ಬೇಸಿಗೆಯಲ್ಲಿ ದಾಳಿಂಬೆ ಹಣ್ಣನ್ನು ಹೆಚ್ಚು ಬಳಸುವುದರಿಂದ ಹಲವು ಪ್ರಯೋಜನಗಳನ್ನು ಪಡೆಯಲು ಸಾಧ್ಯವಿದೆ. ಇದು ನಮ್ಮ ಆರೋಗ್ಯಕ್ಕೆ ಪೋಷಕ ಶಕ್ತಿಯನ್ನು ನೀಡುವುದರಿಂದ…

1 hour ago