News Karnataka Kannada
Sunday, April 28 2024
ಮಂಗಳೂರು

ಕಾಂಗ್ರೆಸ್‌ ಬಿ.ಸಿ.ರೋಡ್ ಕಚೇರಿಯಲ್ಲಿ ಚುನಾವಣಾ ಪೂರ್ವಭಾವಿ ಸಭೆ

ಕಾಂಗ್ರೆಸ್‌ ಸಭೆ
Photo Credit : News Kannada

ಬಂಟ್ವಾಳ: ಈ ಬಾರಿಯ ವಿಧಾನಸಭಾ ಚುನಾವಣೆಯಲ್ಲಿ ಬಂಟ್ವಾಳ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಬಿ. ರಮಾನಾಥ ರೈ ಅವರು  ಏಪ್ರಿಲ್ 20ರಂದು ನಾಮಪತ್ರ ಸಲ್ಲಿಸಲಿದ್ದಾರೆ. ಬಿ.ಸಿ.ರೋಡ್ ನಲ್ಲಿರುವ ರಮಾನಾಥ ರೈ ಅವರ ಚುನಾವಣಾ ಪ್ರಚಾರ ಕಚೇರಿಯಲ್ಲಿ ನಡೆದ ಪೂರ್ವಭಾವಿ ಸಭೆಯಲ್ಲಿ ಈ ಬಗ್ಗೆ ತೀರ್ಮಾನಿಸಲಾಗಿದೆ.

ಕಾಂಗ್ರೆಸ್ ಯಾವತ್ತೂ ಸುಳ್ಳುಹೇಳುವುದಿಲ್ಲ, ಕೊಟ್ಟ ಭರವಸೆಗಳನ್ನು ಈಡೇರಿಸಿದೆ. ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸರಕಾರದಲ್ಲಿ ಬಡವರಿಗೆ ಏಳು ಕೆ.ಜಿ. ಅಕ್ಕಿ ನಿರಂತರವಾಗಿ ನೀಡಿದ್ದೇವೆ. ರೈತರಿಗೆ ಕೃಷಿಗೆ ಉಚಿತ ವಿದ್ಯುತ್ ಈಗಾಗಲೇ ಕೊಟ್ಟಿದ್ದೇವೆ. ಈ ಬಾರಿ ಕಾಂಗ್ರೆಸ್ ಮತ್ತೊಮ್ಮೆ ಅಧಿಕಾರಕ್ಕೆ ಬಂದು ಈಗಾಗಲೇ ಪ್ರಕಟಿಸಿರುವ ಗ್ಯಾರಂಟಿ ಯೋಜನೆಗಳನ್ನು ಜಾರಿ ಮಾಡುವುದು ನಿಶ್ಚಿತ ಎಂದು ಈ ವೇಳೆ ಮಾತನಾಡಿದ ರಮಾನಾಥ ರೈ ಭರವಸೆ ನೀಡಿದರು.

ಗುರುವಾರ ಬೆಳಿಗ್ಗೆ 9 ಗಂಟೆಯಿಂದ ಬಂಟ್ವಾಳ ಶ್ರೀ ತಿರುಮಲ ವೆಂಕಟರಮಣ ದೇವಸ್ಥಾನದಿಂದ ಪಾದಯಾತ್ರೆಯ ಮೂಲಕ ಬಿ.ಸಿ.ರೋಡ್ ಮಿನಿವಿಧಾನಸೌಧದಲ್ಲಿರುವ ಚುನಾವಣಾ ಕಚೇರಿಗೆ ಬಂದು ನಾಮಪತ್ರ ಸಲ್ಲಿಸಲಾಗುವುದು ಎಂದು ಅವರು ತಿಳಿಸಿದರು.

ಬಂಟ್ವಾಳ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಬೇಬಿ ಕುಂದರ್, ಪಾಣೆಮಂಗಳೂರು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸುದೀಪ್ ಕುಮಾರ್ ಶೆಟ್ಟಿ, ಪಕ್ಷದ ಪ್ರಮುಖರುಗಳಾದ ಪಿಯೂಸ್ ರಾಡ್ರಿಗಸ್, ಚಂದ್ರಪ್ರಕಾಶ್ ಶೆಟ್ಟಿ, ಪದ್ಮಶೇಖರ್ ಜೈನ್, ಪದ್ಮನಾಭ ರೈ, ಅಬ್ಬಾಸ್ ಆಲಿ, ಲುಕ್ಮಾನ್ ಬಂಟ್ವಾಳ, ಜನಾರ್ಧನ ಚೆಂಡ್ತಿಮಾರ್, ಸುರೇಶ್ ಕುಮಾರ್ ನಾವೂರ ಮುಂತಾದವರು ವೇದಿಕೆಯಲ್ಲಿದ್ದರು.

ಇದೇ ವೇಳೆ ಬಿ.ಜೆ.ಪಿ. ಕಾರ್ಯಕರ್ತರುಗಳಾದ ಮುರಳೀಧರ ಬಾಂಬಿಲ, ಜನಾರ್ಧನ ಪಚ್ಚಿನಡ್ಕ ಕಳ್ಳಿಗೆ,ಎಸ್ ಡಿಪಿಐಯ ಸಜೀಪಮೂಡ ಗ್ರಾಮ ಸಮಿತಿ ಅಧ್ಯಕ್ಷ ಮಾಲಿಕ್ ಕೊಳಕೆ, ಮೊಹಮ್ಮದ್ ಶಾಖೀರ್, ಸವಾನ್ ಬೋಗೋಡಿ, ಸಫ್ವಾನ್ ಬೋಗೋಡಿ, ಮೊಹಮ್ಮದ್ ಇರ್ಷಾದ್ ಬೋಗೋಡಿ, ತಮೀಜ್ ಬೋಗೋಡಿ, ಮೊಹಮ್ಮದ್ ರಿಝ್ವಾನ್ ಗುಡ್ಡೆಯಂಗಡಿ, ಮೊಹಮ್ಮದ್ ಪಾರೀಸ್ ಮುಂತಾದವರು ತಮ್ಮ ಪಕ್ಷಗಳನ್ನು ತೊರೆದು ಕಾಂಗ್ರೆಸ್ ಸೇರ್ಪಡೆಯಾದರು. ಪಕ್ಷದ ಎಲ್ಲಾ ಮುಂಚೂಣಿ ಘಟಕಗಳ ಮುಖಂಡರು, ಬ್ಲಾಕ್ ಹಾಗೂ ವಲಯ ಮುಖಂಡರು ಉಪಸ್ಥಿತರಿದ್ದರು. ಬಂಟ್ವಾಳ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಬೇಬಿ ಕುಂದರ್ ಕಾರ್ಯಕ್ರಮ ನಿರೂಪಿಸಿದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
44
News Karnataka Kannada

The most exciting, trusted and preferred news websites of Karnataka and Kannadigas around the world.

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು