ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಜುಲೈ 2ರ ರಾತ್ರಿಯಿಂದ ಭಾರಿ ಮಳೆ ಸುರಿಯುತ್ತಿದೆ. ಪರಿಣಾಮವಾಗಿ ನಗರದ ಪಿ.ವಿ.ಎಸ್ ವೃತ್ತದಿಂದ ಬಿಜೆಪಿ ಕಚೇರಿ ಮುಂಭಾಗದಿಂದ ಹಂಪನಕಟ್ಟೆಗೆ ಬರುವ ಕೈಬರ್ ಪಾಸ್ ಲೇನ್ನ ರಸ್ತೆಯಲ್ಲಿ ಗುಡ್ಡ ಕುಸಿದಿದೆ. ಗುಡ್ಡ ಕುಸಿದ ಮೇಲ್ಭಾಗದಲ್ಲಿ ಕೋರ್ಟ್ ಆವರಣ ಮತ್ತು ರಸ್ತೆ ಇದ್ದು ನೂರಾರು ವಾಹನಗಳು ನಿತ್ಯ ಈ ಮಾರ್ಗಲ್ಲಿ ಸಂಚರಿಸುತ್ತಿವೆ. ಇದೀಗ ಈ ಭಾಗದಲ್ಲಿ ಭೂ ಕುಸಿತ ಉಂಟಾದ ಕಾರಣ ಸಂಚಾರಕ್ಕೆ ಅಲ್ಪ ಪ್ರಮಾಣದಲ್ಲಿ ತೊಂದರೆಯಾಗಿದೆ. ಮತ್ತಷ್ಟು ಭೂ ಕುಸಿತ ಉಂಟಾದಲ್ಲಿ ಕೋರ್ಟ್ ರಸ್ತೆ ಪ್ರದೇಶ ಕುಸಿಯುವ ಆತಂಕ ಎದುರಾಗಿದೆ.
ಮಂಗಳೂರಿನಲ್ಲಿ ಮಳೆ ಅಬ್ಬರ, ಕೋರ್ಟ್ ರಸ್ತೆ ಕುಸಿಯುವ ಆತಂಕ
Photo Credit :
ಹನಿ ಹನಿ ಕೂಡಿ ಹಳ್ಳ
ನ್ಯೂಸ್ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.