News Karnataka Kannada
Sunday, April 28 2024
ಕರಾವಳಿ

ಮಂಗಳೂರು: ಇಂದು ಕರಾವಳಿಯಲ್ಲಿ ಶಿವರಾತ್ರಿ ಸಂಭ್ರಮ, ದೇವಾಲಯಗಳಲ್ಲಿ ವಿಶೇಷ ಪೂಜೆ

shivaratri-festival-celebrations-in-costal-area
Photo Credit : Twitter

ಮಂಗಳೂರು: ಇಂದು ಶನಿವಾರ (ಫೆ.18)ರಂದು ದೇಶದೆಲ್ಲೆಡೆ ಶಿವರಾತ್ರಿಯ ಸಂಭ್ರಮ ಮನೆಮಾಡಿದೆ. ಅಂತೆಯೇ ಕರಾವಳಿಯ ವಿವಿಧ ದೇವಾಲಯಗಳಲ್ಲಿ ವಿಶೇಷ ಪೂಜೆ, ಪುನಸ್ಕಾರ, ಭಜನಾ ಕಾರ್ಯಕ್ರಮಗಳನ್ನು ಆಯೋಜಿಸಲಾಗಿದೆ. ದಕ್ಷಿಣ ಕನ್ನಡದ ಕದ್ರಿ, ಕುದ್ರೋಳಿ, ಸೋಮೇಶ್ವರ ದೇವಾಲಯಗಳಲ್ಲಿ ವಿಶೇಷ ಧಾರ್ಮಿಕ ಕಾರ್ಯಕ್ರಮಗಳು ನಡೆಯಲಿವೆ.

ಕಾರಿಂಜೇಶ್ವರ ಜಾತ್ರಾ ಸಂಭ್ರಮಕ್ಕೆ ನಾಡಿನ ವಿವಿಧ ಕಡೆಗಳಿಂದ ಸಹಸ್ರಾರು ಭಕ್ತರು ಆಗಮಿಸಿ ಕಾರಿಂಜೇಶ್ವರನ ದರ್ಶನ ಪಡೆದು ಪುನೀತರಾಗುವುದು ವಾಡಿಕೆ.

ಧರ್ಮಸ್ಥಳಕ್ಕೆ ಪಾದಯಾತ್ರೆ: ಧರ್ಮಸ್ಥಳ ಕ್ಷೇತ್ರಕ್ಕೆ ಶಿವರಾತ್ರಿ ಸಮಯದಲ್ಲಿ ನಾಡಿನೆಲ್ಲೆಡೆಯ ಭಕ್ತರು ಪಾದಯಾತ್ರೆ ಕೈಗೊಳ್ಳುತ್ತಾರೆ. ಸಹಸ್ರಾರು ಭಕ್ತರು ಭಕ್ತರು ಕ್ಷೇತ್ರಕ್ಕೆ ಆಗಮಿಸುತ್ತಿದ್ದಾರೆ. 50 ಸಾವಿರ ಪಾದಯಾತ್ರಿಗಳು ಹೆಸರು ನೋಂದಾಯಿಸಿಕೊಂಡಿದ್ದು, ಚಾರ್ಮಾಡಿ, ಶಿರಾಡಿ ಹೆದ್ದಾರಿ ಇಕ್ಕೆಲಗಳಲ್ಲಿಸ್ವಚ್ಛತೆ ಕಾಪಾಡುವಂತೆ 55 ಕಡೆ ಕ್ಷೇತ್ರದಿಂದ ಸೂಚನಾ ಫಲಕಗಳನ್ನು ಅಳವಡಿಸಲಾಗಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
39339
ಉಮೇ‌ಶ ಎಚ್‌.ಎಸ್‌.

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು