ಕಡಬ: ತಾಲೂಕಿನ ಕುಟುಪಾಡಿ ಗ್ರಾಮದ ಮೀನಾಡಿ ಎಂಬಲ್ಲಿ ಆನೆದಾಳಿ ನಡೆಸಿದ ಪರಿಣಾಮ ಯುವತಿ ಸಹಿತ ಇಬ್ಬರು ಮೃತಪಟ್ಟ ಘಟನೆ ಮೀನಾಡಿ ಸಮೀಪ ನಡೆದಿದೆ.
ಘಟನೆ ಸೋಮವಾರ ಬೆಳಗ್ಗೆ 6.30ಕ್ಕೆ ನಡೆದಿದ್ದು, ಪೇರಡ್ಕ ಹಾಲು ಸೊಸೈಟಿ ಸಿಬ್ಬಂದಿ ರಂಜಿತಾ ರೈ ನೈಲ (27) ಎಂಬವರು ಮನೆಯಿಂದ ಸೊಸೈಟಿಗೆ ನಡೆದುಕೊಂಡು ತೆರಳುತ್ತಿದ್ದ ವೇಳೆ ಆನೆ ದಾಳಿ ನಡೆಸಿದೆ.
ಈಕೆ ಕೂಗಿಕೊಂಡಾಗ ಸ್ಥಳಕ್ಕೆ ಬಂದ ರಮೇಶ್ ರೈ ಎಂಬುವರ ಮೇಲೂ ಆನೆ ದಾಳಿ ನಡೆಸಿದೆ. ರಮೇಶ್ ಸ್ಥಳದಲ್ಲಿಯೇ ಮೃತಪಟ್ಟಿದ್ದು, ಯುವತಿ ಆಸ್ಪತ್ರೆಗೆ ಸಾಗಿಸುವ ವೇಳೆ ಮೃತಪಟ್ಟಿದ್ದಾರೆ.