News Karnataka Kannada
Friday, May 03 2024
ಉಡುಪಿ

ಅದಾನಿ ಆಡಳಿತದ ಉಷ್ಣವಿದ್ಯುತ್ ಸ್ಥಾವರದಿಂದ ಪರಿಸರ ಹಾನಿ: 52 ಕೋಟಿ ರೂ. ದಂಡ

Ushtna Anustavara
Photo Credit :

ಉಡುಪಿ: ಅದಾನಿ ಆಡಳಿತದ ಉಡುಪಿಯ ಉಷ್ಣವಿದ್ಯುತ್ ಸ್ಥಾವರಕ್ಕೆ ತನ್ನ 10 ಕಿ.ಮೀ. ವ್ಯಾಪ್ತಿಯಲ್ಲಿ ಮಾಡಿರುವ ಪರಿಸರ ಹಾನಿಗಾಗಿ 52 ಕೋಟಿ ರೂ. (52,02,50,000ರೂ.) ದಂಡವನ್ನು ಪರಿಹಾರ ರೂಪದಲ್ಲಿ ಪಾವತಿಸು ವಂತೆ ಚೆನ್ನೈನ ರಾಷ್ಟ್ರೀಯ ಹಸಿರು ಪೀಠ ಆದೇಶ ನೀಡಿದೆ.

ಹಸಿರು ಪೀಠ ಈ ಹಿಂದೆ ಎರಡೆರಡು ಸಮಿತಿಗಳನ್ನು ಪರಿಸರಕ್ಕಾದ ಹಾನಿಯ ಅಂದಾಜಿಗೆ ರಚಿಸಿ ಸ್ಥಳಕ್ಕೆ ಕಳುಹಿಸಿದ್ದರೂ, ಅವುಗಳು ನೀಡಿದ ವರದಿ ಸಾರ್ವಜನಿಕರಿಂದ ತೀವ್ರ ಟೀಕೆಗೆ ಗುರಿಯಾಗಿದ್ದು, ಸಂತ್ರಸ್ಥರಿಗೆ ನ್ಯಾಯ ದೊರಕಿಸಿಕೊಡಲು ವಿಫಲವಾಗಿತ್ತು. ಒಂದು ಸಮಿತಿ ಕೇವಲ 4.89 ಕೋಟಿ ರೂ. ದಂಡವನ್ನು ಕಂಪೆನಿಗೆ ವಿಧಿಸುವಂತೆ ವರದಿಯಲ್ಲಿ ತಿಳಿಸಿತ್ತು. ಇದರ ವಿರುದ್ಧ ನಂದಿಕೂರು ಜನಜಾಗೃತಿ ಸಮಿತಿ ಮೇಲ್ಮನವಿ ಸಲ್ಲಿಸಿದ್ದು, ಇದರಂತೆ ಹಸಿರು ಪೀಠದಿಂದ ನೇಮಕಗೊಂಡ ಮತ್ತೊಂದು ಸಮಿತಿ ಒಟ್ಟಾರೆಯಾಗಿ 74.93 ಕೋಟಿ ರೂ. ಪರಿಹಾರ ನೀಡುವಂತೆ ವರದಿಯಲ್ಲಿ ತಿಳಿಸಿತ್ತು.

ಕಳೆದ ಸುಮಾರು ಮೂರು ದಶಕಗಳಿಗೂ ಅಧಿಕ ಸಮಯದಿಂದ ಪಡುಬಿದ್ರಿ ಪರಿಸರದಲ್ಲಿ ಉಷ್ಣವಿದ್ಯುತ್ ಸ್ಥಾವರ ಸ್ಥಾಪನೆ ವಿರುದ್ಧ ಹೋರಾಟ ನಡೆಸಿಕೊಂಡು ಬರುತ್ತಿರುವ ಬಾಲಕೃಷ್ಣ ಶೆಟ್ಟಿ ಅವರ ಅಧ್ಯಕ್ಷತೆಯ ನಂದಿಕೂರು ಜನಜಾಗೃತಿ ಸಮಿತಿ ರಾಷ್ಟ್ರೀಯ ಹಸಿರು ಪೀಠದ ದಕ್ಷಿಣ ವಲಯ ಪೀಠದ ಮುಂದೆ ಹೂಡಿದ ವ್ಯಾಜ್ಯದ ಕುರಿತಂತೆ ಪೀಠ ತನ್ನ ಅಂತಿಮ ತೀರ್ಪನ್ನು ನೀಡಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12790
NewsKannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು